AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24ಗಂಟೆಯಲ್ಲಿ 50 ಸಾವಿರಕ್ಕೂ ಕಡಿಮೆ ಕೊರೊನಾ ಕೇಸ್​ಗಳು ದಾಖಲು; 1,183ಮಂದಿ ಸಾವು

Covid 19 Updates In India: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾಟಾದಲ್ಲಿ ಉಲ್ಲೇಖವಾಗಿರುವಂತೆ ಇದುವರೆಗೆ 40,18,11,892 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಜೂ.25ರಂದು 17,45,809 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.

ದೇಶದಲ್ಲಿ 24ಗಂಟೆಯಲ್ಲಿ 50 ಸಾವಿರಕ್ಕೂ ಕಡಿಮೆ ಕೊರೊನಾ ಕೇಸ್​ಗಳು ದಾಖಲು; 1,183ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 26, 2021 | 11:49 AM

Share

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣ ಇಳಿಮುಖವಾಗುತ್ತಿದೆ. ಶನಿವಾರ 50 ಸಾವಿರಕ್ಕಿಂತಲೂ ಕಡಿಮೆ ಹೊಸ ಕೇಸ್​​ಗಳು ಪತ್ತೆಯಾಗಿದ್ದು, 24ಗಂಟೆಯಲ್ಲಿ 1,183 ಮಂದಿ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತ ಬಂದಿದ್ದರೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರಲಿಲ್ಲ. ಇದೀಗ ದಾಖಲಾಗುವ ಸಾವಿನಸಂಖ್ಯೆಯಲ್ಲೂ ತುಸು ಕಡಿಮೆಯಾಗುತ್ತಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,01,83,143ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24ಗಂಟೆಯಲ್ಲಿ 48,698 ಹೊಸ ಕೊರೊನಾ ಕೇಸ್​​ಗಳು ದಾಖಲಾಗಿದ್ದು, 64,818 ಮಂದಿ ಕೊವಿಡ್​-19ನಿಂದ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,91,93,085 ಆಗಿದೆ. ದೇಶದಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 5,95,565 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾಟಾದಲ್ಲಿ ಉಲ್ಲೇಖವಾಗಿರುವಂತೆ ಇದುವರೆಗೆ 40,18,11,892 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಜೂ.25ರಂದು 17,45,809 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಹಾಗೇ, ಕೊರೊನಾ ಲಸಿಕೆ ಅಭಿಯಾನ ಕೂಡ ವೇಗದಿಂದ ನಡೆಯುತ್ತಿದೆ. ಈಗಾಗಲೇ 31 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಜೂ.21ರಿಂದ ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗಿದೆ. ಶುಕ್ರವಾರ ಒಂದೇ ದಿನ 60 ಲಕ್ಷ ಜನರಿಗೆ ಕೊವಿಡ್​ 19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: 7th Pay Commission: ಕೇಂದ್ರದಿಂದ ಉದ್ಯೋಗಿಗಳಿಗೆ ಡಿಎ, ಡಿಆರ್​ ಬಾಕಿ ಪಾವತಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!