AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24ಗಂಟೆಯಲ್ಲಿ 50 ಸಾವಿರಕ್ಕೂ ಕಡಿಮೆ ಕೊರೊನಾ ಕೇಸ್​ಗಳು ದಾಖಲು; 1,183ಮಂದಿ ಸಾವು

Covid 19 Updates In India: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾಟಾದಲ್ಲಿ ಉಲ್ಲೇಖವಾಗಿರುವಂತೆ ಇದುವರೆಗೆ 40,18,11,892 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಜೂ.25ರಂದು 17,45,809 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.

ದೇಶದಲ್ಲಿ 24ಗಂಟೆಯಲ್ಲಿ 50 ಸಾವಿರಕ್ಕೂ ಕಡಿಮೆ ಕೊರೊನಾ ಕೇಸ್​ಗಳು ದಾಖಲು; 1,183ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jun 26, 2021 | 11:49 AM

Share

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣ ಇಳಿಮುಖವಾಗುತ್ತಿದೆ. ಶನಿವಾರ 50 ಸಾವಿರಕ್ಕಿಂತಲೂ ಕಡಿಮೆ ಹೊಸ ಕೇಸ್​​ಗಳು ಪತ್ತೆಯಾಗಿದ್ದು, 24ಗಂಟೆಯಲ್ಲಿ 1,183 ಮಂದಿ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತ ಬಂದಿದ್ದರೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರಲಿಲ್ಲ. ಇದೀಗ ದಾಖಲಾಗುವ ಸಾವಿನಸಂಖ್ಯೆಯಲ್ಲೂ ತುಸು ಕಡಿಮೆಯಾಗುತ್ತಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,01,83,143ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24ಗಂಟೆಯಲ್ಲಿ 48,698 ಹೊಸ ಕೊರೊನಾ ಕೇಸ್​​ಗಳು ದಾಖಲಾಗಿದ್ದು, 64,818 ಮಂದಿ ಕೊವಿಡ್​-19ನಿಂದ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,91,93,085 ಆಗಿದೆ. ದೇಶದಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 5,95,565 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾಟಾದಲ್ಲಿ ಉಲ್ಲೇಖವಾಗಿರುವಂತೆ ಇದುವರೆಗೆ 40,18,11,892 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಜೂ.25ರಂದು 17,45,809 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಹಾಗೇ, ಕೊರೊನಾ ಲಸಿಕೆ ಅಭಿಯಾನ ಕೂಡ ವೇಗದಿಂದ ನಡೆಯುತ್ತಿದೆ. ಈಗಾಗಲೇ 31 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಜೂ.21ರಿಂದ ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗಿದೆ. ಶುಕ್ರವಾರ ಒಂದೇ ದಿನ 60 ಲಕ್ಷ ಜನರಿಗೆ ಕೊವಿಡ್​ 19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: 7th Pay Commission: ಕೇಂದ್ರದಿಂದ ಉದ್ಯೋಗಿಗಳಿಗೆ ಡಿಎ, ಡಿಆರ್​ ಬಾಕಿ ಪಾವತಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!