AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24ಗಂಟೆಯಲ್ಲಿ 50 ಸಾವಿರಕ್ಕೂ ಕಡಿಮೆ ಕೊರೊನಾ ಕೇಸ್​ಗಳು ದಾಖಲು; 1,183ಮಂದಿ ಸಾವು

Covid 19 Updates In India: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾಟಾದಲ್ಲಿ ಉಲ್ಲೇಖವಾಗಿರುವಂತೆ ಇದುವರೆಗೆ 40,18,11,892 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಜೂ.25ರಂದು 17,45,809 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.

ದೇಶದಲ್ಲಿ 24ಗಂಟೆಯಲ್ಲಿ 50 ಸಾವಿರಕ್ಕೂ ಕಡಿಮೆ ಕೊರೊನಾ ಕೇಸ್​ಗಳು ದಾಖಲು; 1,183ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 26, 2021 | 11:49 AM

Share

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣ ಇಳಿಮುಖವಾಗುತ್ತಿದೆ. ಶನಿವಾರ 50 ಸಾವಿರಕ್ಕಿಂತಲೂ ಕಡಿಮೆ ಹೊಸ ಕೇಸ್​​ಗಳು ಪತ್ತೆಯಾಗಿದ್ದು, 24ಗಂಟೆಯಲ್ಲಿ 1,183 ಮಂದಿ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತ ಬಂದಿದ್ದರೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರಲಿಲ್ಲ. ಇದೀಗ ದಾಖಲಾಗುವ ಸಾವಿನಸಂಖ್ಯೆಯಲ್ಲೂ ತುಸು ಕಡಿಮೆಯಾಗುತ್ತಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,01,83,143ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24ಗಂಟೆಯಲ್ಲಿ 48,698 ಹೊಸ ಕೊರೊನಾ ಕೇಸ್​​ಗಳು ದಾಖಲಾಗಿದ್ದು, 64,818 ಮಂದಿ ಕೊವಿಡ್​-19ನಿಂದ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,91,93,085 ಆಗಿದೆ. ದೇಶದಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 5,95,565 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾಟಾದಲ್ಲಿ ಉಲ್ಲೇಖವಾಗಿರುವಂತೆ ಇದುವರೆಗೆ 40,18,11,892 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಜೂ.25ರಂದು 17,45,809 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಹಾಗೇ, ಕೊರೊನಾ ಲಸಿಕೆ ಅಭಿಯಾನ ಕೂಡ ವೇಗದಿಂದ ನಡೆಯುತ್ತಿದೆ. ಈಗಾಗಲೇ 31 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಜೂ.21ರಿಂದ ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗಿದೆ. ಶುಕ್ರವಾರ ಒಂದೇ ದಿನ 60 ಲಕ್ಷ ಜನರಿಗೆ ಕೊವಿಡ್​ 19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: 7th Pay Commission: ಕೇಂದ್ರದಿಂದ ಉದ್ಯೋಗಿಗಳಿಗೆ ಡಿಎ, ಡಿಆರ್​ ಬಾಕಿ ಪಾವತಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ