AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು ಬರೋಬ್ಬರಿ 58,097 ಕೊರೊನಾ ಸೋಂಕಿನ ಕೇಸ್​ಗಳು ದಾಖಲು; 534 ಮಂದಿ ಸಾವು, 2000 ದಾಟಿದ ಒಮಿಕ್ರಾನ್​ ಸೋಂಕಿತರ ಸಂಖ್ಯೆ

ಒಮಿಕ್ರಾನ್​ ಸೋಂಕಿತರ ಸಂಖ್ಯೆ 2135ಕ್ಕೆ ತಲುಪಿದ್ದು, ಅದರಲ್ಲಿ 828 ಮಂದಿ ಗುಣಮುಖರಾಗಿದ್ದಾರೆ. ಒಮಿಕ್ರಾನ್​ ಸೋಂಕಿನ ಸಂಖ್ಯೆ ಮಹಾರಾಷ್ಟ್ರದಲ್ಲಿಯೇ ಅತ್ಯಂತ ಹೆಚ್ಚಾಗಿದ್ದು, 653 ಮಂದಿ ಇದ್ದಾರೆ.

ದೇಶದಲ್ಲಿ ಇಂದು ಬರೋಬ್ಬರಿ 58,097 ಕೊರೊನಾ ಸೋಂಕಿನ ಕೇಸ್​ಗಳು ದಾಖಲು; 534 ಮಂದಿ ಸಾವು, 2000 ದಾಟಿದ ಒಮಿಕ್ರಾನ್​ ಸೋಂಕಿತರ ಸಂಖ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jan 05, 2022 | 10:21 AM

Share

ದೆಹಲಿ: ಭಾರತದಲ್ಲಿ ಕೊವಿಡ್ 19 (Covid 19) ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ 20 ಸಾವಿರಗಳಷ್ಟು ಏರಿಕೆಯಾಗುತ್ತಿದೆ. ನಿನ್ನೆ 37, 379  ಸೋಂಕಿನ ಪ್ರಕರಣಗಳು ದಾಖಲಾಗಿದ್ದವು. ಆದರೆ ಇಂದು, ಕೇವಲ 24ಗಂಟೆಯಲ್ಲಿ ಬರೋಬ್ಬರಿ 58,097 ಕೊರೊನಾ ಸೋಂಕಿನ ಕೇಸ್​ಗಳು ಪತ್ತೆಯಾಗಿವೆ. ಇದು ನಿನ್ನೆಗಿಂತಲೂ ಶೇ.55ರಷ್ಟು ಅಧಿಕವಾದ ಹಾಗಾಗಿದೆ.  ಒಟ್ಟಾರೆ ಕೊರೊನಾ ಕೇಸ್(Corona Cases)​ಗಳಲ್ಲಿ 18,466 ಕೇಸ್​ಗಳು ಮಹಾರಾಷ್ಟ್ರದಲ್ಲೇ ಪತ್ತೆಯಾಗಿವೆ. ಕಳೆದ 24ಗಂಟೆಯಲ್ಲಿ 534 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.  ಹಾಗೇ, ಒಮಿಕ್ರಾನ್​ ಸೋಂಕಿತರ ಸಂಖ್ಯೆ ದೇಶದಲ್ಲಿ 2135ಕ್ಕೆ ತಲುಪಿದೆ.  

ದೇಶದಲ್ಲಿ 24 ಗಂಟೆಯಲ್ಲಿ 15,389 ಕೊರೊನಾ ಸೋಂಕಿತರು ಗುಣಮುಖರಾಗಿ, ಡಿಸ್​ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2,14,004 ಆಗಿದೆ. ಹಾಗೇ, ಭಾರತದಲ್ಲಿ ಸದ್ಯ ಕೊರೊನಾದಿಂದ ಒಟ್ಟಾರೆ ಚೇತರಿಸಿಕೊಂಡವರು 3,43,21,803 ಜನರು. ಸಾವಿನ ಸಂಖ್ಯೆ 4,82,551ಕ್ಕೆ ಏರಿಕೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.​ 4.18 ಮತ್ತು ವಾರದ ಪಾಸಿಟಿವಿಟಿ ಪ್ರಮಾಣ ಶೇ.2.60 ರಷ್ಟಿದೆ. ಹಾಗೇ ಚೇತರಿಕೆ ಪ್ರಮಾಣ ಶೇ.98.01ಕ್ಕೆ ನಿಂತಿದೆ.

ಒಮಿಕ್ರಾನ್ ಮಹಾರಾಷ್ಟ್ರದಲ್ಲೇ ಹೆಚ್ಚು ಒಮಿಕ್ರಾನ್​ ಸೋಂಕಿತರ ಸಂಖ್ಯೆ 2135ಕ್ಕೆ ತಲುಪಿದ್ದು, ಅದರಲ್ಲಿ 828 ಮಂದಿ ಗುಣಮುಖರಾಗಿದ್ದಾರೆ. ಒಮಿಕ್ರಾನ್​ ಸೋಂಕಿನ ಸಂಖ್ಯೆ ಮಹಾರಾಷ್ಟ್ರದಲ್ಲಿಯೇ ಅತ್ಯಂತ ಹೆಚ್ಚಾಗಿದ್ದು, 653 ಮಂದಿ ಇದ್ದಾರೆ. ಇಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆಯೂ ಅಧಿಕವಾಗಿದೆ. ಅದು ಬಿಟ್ಟರೆ ದೆಹಲಿಯಲ್ಲಿ 464, ಕೇರಳದಲ್ಲಿ 185, ರಾಜಸ್ಥಾನ 174 , ಗುಜರಾತ್​ 154, ತಮಿಳುನಾಡಿನಲ್ಲಿ 124 ಸೋಂಕಿತರಿದ್ದಾರೆ. ಇನ್ನೂ 18 ರಾಜ್ಯಗಳಲ್ಲಿ ಒಮಿಕ್ರಾನ್ ಸೋಂಕಿನ ಕೇಸ್​ಗಳಿದ್ದು, 100 ಕೆಳಗೆ ಇದೆ.

ಕೊವಿಡ್​ 19 ಮೂರನೇ ಅಲೆ ಉತ್ತುಂಗಕ್ಕೆ ಒಮಿಕ್ರಾನ್​ ಸೋಂಕು ಮಾರಣಾಂತಿಕವಲ್ಲದೆ ಇದ್ದರೂ, ಪ್ರಸರಣದ ವೇಗ ಅತ್ಯಂತ ಹೆಚ್ಚು ಎಂಬುದನ್ನು ಈಗಾಗಲೇ ತಜ್ಞರು ಹೇಳಿದ್ದಾರೆ. ಅದಕ್ಕೆ ತಕ್ಕಂತೆ ವೇಗವಾಗಿ ಹಬ್ಬುತ್ತಿದೆ. ಭಾರತದಲ್ಲಿ ಒಮಿಕ್ರಾನ್​ ತಳಿಯ ಕಾರಣದಿಂದ ಕೊವಿಡ್​ 19 ಸೋಂಕಿನ ಸಂಖ್ಯೆಯಲ್ಲಿ ವಿಪರೀತ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಬಾರಿ ಡೆಲ್ಟಾ ರೂಪಾಂತರ ಬಂದಾಗ ಹೇಗೆ ಕೊರೊನಾ ಎರಡನೇ ಅಲೆ ಅತ್ಯಂತ ಹೆಚ್ಚಾಗಿ ಬಾಧಿಸಿತ್ತೋ, ಹಾಗೇ ಈ ಒಮಿಕ್ರಾನ್​ ಕಾರಣದಿಂದ ಜನವರಿ ಕೊನೇ ವಾರ ಅಥವಾ ಫೆಬ್ರವರಿ ಹೊತ್ತಿಗೆ ಕೊರೊನಾ ಸೋಂಕಿತರ ಸಂಖ್ಯೆ ಉತ್ತುಂಗಕ್ಕೆ ಏರಬಹುದು ಎಂದು ವಾಷಿಂಗ್ಟನ್ ವಿಶ್ವವಿದ್ಯಾನಿಲಯದಲ್ಲಿ ಆರೋಗ್ಯ ಮೆಟ್ರಿಕ್ಸ್ ವಿಜ್ಞಾನಗಳ ಅಧ್ಯಕ್ಷ ಡಾ. ಕ್ರಿಸ್ಟೋಫರ್​ ಮುರ್ರೆ ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಹುಟ್ಟೂರಿನ ಮೇಲಿನ ಪ್ರೀತಿ ಮೆರೆದ ಸೋನು ಸೂದ್​; ಹೆಣ್ಣುಮಕ್ಕಳಿಗೆ ಸಾವಿರ ಸೈಕಲ್​ ನೀಡಿದ ರಿಯಲ್​ ಹೀರೋ

Published On - 9:53 am, Wed, 5 January 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು