AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯನ್ನು ಹಿಂದಿಕ್ಕಿದ ಭಾರತ!

ದೆಹಲಿ: ಕೊವಿಡ್-19 ವ್ಯಾಧಿಗೆ ಸಂಬಂಧಿಸಿದ ಸಾವುಗಳಲ್ಲಿ ಭಾರತ, ಯುರೋಪಿಯನ್ ರಾಷ್ರ ಇಟಲಿಯನ್ನು ಹಿಂದಟ್ಟಿ ಅತಿಹೆಚ್ಚು ಸಾವುಗಳನ್ನು ಕಂಡಿರುವ ದೇಶಗಳ ಪೈಕಿ ಐದನೇ ಸ್ಥಾನಕ್ಕೇರಿದೆ. ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿಯ ಕೊವಿಡ್-19 ಟ್ರ್ಯಾಕರ್ ಪ್ರಕಾರ, ಇದುವರೆಗೆ ಐದನೇ ಸ್ಥಾನದಲ್ಲಿದ್ದ ಇಟಲಿಯಲ್ಲಿ 35,132 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಕೊವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಇಂದು 36,007 ಕ್ಕೇರಿದೆ. ಯೂನಿವರ್ಸಿಟಿ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಸಾವುಗಳ ಸಂಖ್ಯೆ ಅಮೆರಿಕದಲ್ಲಿ ಅತ್ಯಧಿಕವಾಗಿದೆ. ಇವತ್ತಿನವರೆಗೆ ಆ ರಾಷ್ರದಲ್ಲಿ 1,54,000 ಕ್ಕಿಂತ ಹೆಚ್ಚು ಜನ ವೈರಸ್ […]

ಇಟಲಿಯನ್ನು ಹಿಂದಿಕ್ಕಿದ ಭಾರತ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 01, 2020 | 11:38 AM

Share

ದೆಹಲಿ: ಕೊವಿಡ್-19 ವ್ಯಾಧಿಗೆ ಸಂಬಂಧಿಸಿದ ಸಾವುಗಳಲ್ಲಿ ಭಾರತ, ಯುರೋಪಿಯನ್ ರಾಷ್ರ ಇಟಲಿಯನ್ನು ಹಿಂದಟ್ಟಿ ಅತಿಹೆಚ್ಚು ಸಾವುಗಳನ್ನು ಕಂಡಿರುವ ದೇಶಗಳ ಪೈಕಿ ಐದನೇ ಸ್ಥಾನಕ್ಕೇರಿದೆ.

ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿಯ ಕೊವಿಡ್-19 ಟ್ರ್ಯಾಕರ್ ಪ್ರಕಾರ, ಇದುವರೆಗೆ ಐದನೇ ಸ್ಥಾನದಲ್ಲಿದ್ದ ಇಟಲಿಯಲ್ಲಿ 35,132 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಕೊವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಇಂದು 36,007 ಕ್ಕೇರಿದೆ.

ಯೂನಿವರ್ಸಿಟಿ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಸಾವುಗಳ ಸಂಖ್ಯೆ ಅಮೆರಿಕದಲ್ಲಿ ಅತ್ಯಧಿಕವಾಗಿದೆ. ಇವತ್ತಿನವರೆಗೆ ಆ ರಾಷ್ರದಲ್ಲಿ 1,54,000 ಕ್ಕಿಂತ ಹೆಚ್ಚು ಜನ ವೈರಸ್ ಬಲಿಯಾಗಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 91,416 ಜನ ಮರಣಿಸಿದ್ದಾರೆ. ಮೆಕ್ಸಿಕೊ ದೇಶದಲ್ಲಿ ಇವತ್ತಿನವರೆಗೆ, 46,000 ಕ್ಕಿಂತ ಜಾಸ್ತಿ ಜನ ಸತ್ತಿದ್ದಾರೆ. ಯುನೈಟೆಟ್ ಕಿಂಗ್ಡಮ್ನಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 46,000 ದಷ್ಟಿದೆ (45,999).

ಭಾರತದಲ್ಲಿ ಜುಲೈ 31ರವರೆಗೆ, 16,68,613 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮೇಲೆ ಹೇಳಿರುವಂತೆ 36,007 ಜನ ಸೋಂಕಿಗೆ ಬಲಿಯಾಗಿದ್ದಾರೆ. 10,74,984 ಸೋಂಕಿತರು ಗುಣಮುಖರಾಗಿ ಮನೆಗಳಿಗೆ ವಾಪಸ್ಸು ಹೋಗಿದ್ದಾರೆ. ಐದೂವರೆ ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಸೋಂಕಿತರು, ದೇಶದ ನಾನಾ ಭಾಗಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!