AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ ಕುರಿತು ಅಮೆರಿಕದೊಂದಿಗೆ ಮಾತುಕತೆ ನಡೆದಿಲ್ಲ; ಭಾರತ ಸ್ಪಷ್ಟನೆ

ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ಹಡಡುಗಳನ್ನು ನಿಯೋಜನೆ ಮಾಡುವ ಕುರಿತು ಅಮೆರಿಕದೊಂದಿಗೆ ದ್ವಿಪಕ್ಷೀಯ ಮಾತುಕತೆ ಇಲ್ಲ ಎಂದು ಭಾರತ ಸ್ಪಷ್ಟನೆ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಹಾರ್ಮುಜ್ ಜಲಸಂಧಿಯ ಮೂಲಕ ವ್ಯಾಪಾರಿ ಹಡಗುಗಳ ಸುರಕ್ಷಿತ ಸಾಗಣೆಗಾಗಿ ನೌಕಾ ಪಡೆಗಳನ್ನು ನಿಯೋಜಿಸುವ ಕುರಿತು ಅಮೆರಿಕದೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿಲ್ಲ ಎಂದು ಭಾರತ ಹೇಳಿದೆ. ಈ ಮೂಲಕ ಇರಾನ್ ವಿರುದ್ಧ ಯುದ್ಧನೌಕೆಗಳನ್ನು ಕಳುಹಿಸಲು ಕೋರಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮನವಿಯನ್ನು ಭಾರತ ತಳ್ಳಿಹಾಕಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ ಕುರಿತು ಅಮೆರಿಕದೊಂದಿಗೆ ಮಾತುಕತೆ ನಡೆದಿಲ್ಲ; ಭಾರತ ಸ್ಪಷ್ಟನೆ
Randhir Jaiswal Image Credit source: PTI
ಸುಷ್ಮಾ ಚಕ್ರೆ
|

Updated on:Mar 16, 2026 | 9:14 PM

Share

ನವದೆಹಲಿ, ಮಾರ್ಚ್ 16: ತೈಲ ಟ್ಯಾಂಕರ್‌ಗಳ ಸುರಕ್ಷಿತ ಸಾಗಾಟವನ್ನು ಖಚಿತಪಡಿಸಿಕೊಳ್ಳಲು ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ನೌಕಾ ಹಡಗುಗಳ ನಿಯೋಜನೆಯ ಕುರಿತು ಅಮೆರಿಕದೊಂದಿಗೆ ಯಾವುದೇ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಜಗತ್ತಿನ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತ ಮತ್ತು ಮುಕ್ತವಾಗಿಡಲು ಈ ಪ್ರದೇಶಕ್ಕೆ ಯುದ್ಧನೌಕೆಗಳನ್ನು ಕಳುಹಿಸುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ, ಫ್ರಾನ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ತಾನು ಈ ವಿಚಾರದಲ್ಲಿ ಅಮೆರಿಕದೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಖಚಿತಪಡಿಸಿದೆ.

ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಸಾಗಾಟದಲ್ಲಿ ಇರಾನ್ ಹಸ್ತಕ್ಷೇಪಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅನೇಕ ದೇಶಗಳು ತೊಡಗಿಸಿಕೊಂಡಿದ್ದರೂ ಭಾರತವು ಈ ವಿಷಯದ ಕುರಿತು ಅಮೆರಿಕದೊಂದಿಗೆ ಯಾವುದೇ ಚರ್ಚೆಗಳನ್ನು ನಡೆಸಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಿಗ್ಬಂಧನ ವಿಧಿಸಿದ ನಂತರ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯವು ಭಾರತೀಯ ಹಡಗುಗಳ ಚಲನವಲನದ ಕುರಿತು ಅಪ್​ಡೇಟ್ ನೀಡಿದೆ. ಸಚಿವಾಲಯದ ಪ್ರಕಾರ, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಸರಕು ಕಾರ್ಯಾಚರಣೆಗಳು ಸರಾಗವಾಗಿ ಮುಂದುವರೆದಿವೆ. ಭಾರತದ ಎಲ್ಲಾ ನಾವಿಕರು ಸುರಕ್ಷಿತವಾಗಿದ್ದಾರೆ, ಕಳೆದ 24 ಗಂಟೆಗಳಲ್ಲಿ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಸಂಚರಿಸುವ ಹಡಗುಗಳಲ್ಲಿ ಭಾರತೀಯ ಹಡಗು ಶಿವಾಲಿಕ್ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿ ಮುಂದ್ರಾ ಬಂದರನ್ನು ತಲುಪಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಕಚ್ಚಾ ತೈಲ ಸರಕುಗಳೊಂದಿಗೆ ಹೊರಟ ಜಗ್ ಲಾಡ್ಕಿ ಎಂಬ ಮತ್ತೊಂದು ಹಡಗು ಭಾರತದ ಕಡೆಗೆ ಸುರಕ್ಷಿತವಾಗಿ ಆಗಮಿಸುತ್ತಿದೆ. ಅದು ನಾಳೆ ಮುಂದ್ರಾ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ಪ್ರಧಾನಿ ನರೇಂದ್ರ ಮೋದಿ ಮತ್ತು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್, ಭಾರತದ ವಿದೇಶಾಂಗ ಸಚಿವ ಜೈಶಂಕರ್ ಮತ್ತು ಇರಾನ್ ಸಚಿವ ಸಯ್ಯದ್ ಅಬ್ಬಾಸ್ ಅರಗ್ಚಿ ನಡುವಿನ ಫೋನ್ ಕರೆಗಳ ನಂತರ ಶನಿವಾರ ಮುಂಜಾನೆ 92,712 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ 2 ಭಾರತೀಯ ಧ್ವಜ ಹೊಂದಿರುವ ಎಲ್‌ಪಿಜಿ ವಾಹಕಗಳಾದ ಶಿವಾಲಿಕ್ ಮತ್ತು ನಂದಾ ದೇವಿ ಹಾರ್ಮುಜ್ ಜಲಸಂಧಿಯನ್ನು ದಾಟಿದ್ದವು. ಹೀಗಾಗಿ, ಸದ್ಯಕ್ಕಂತೂ ಭಾರತಕ್ಕೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್​ನಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Mon, 16 March 26

Follow Us
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್