AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus India Update: ಕಳೆದ 24 ಗಂಟೆಗಳಲ್ಲಿ 96,517 ಕೊವಿಡ್ ಪ್ರಕರಣ ಪತ್ತೆ, 445 ಸಾವು

Covid 19 India Cases : ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು 47,288 ಹೊಸ ಪ್ರಕರಣಗಳು ವರದಿಯಾಗಿವೆ. ಛತ್ತೀಸಗಡದಲ್ಲಿ 7,302 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 7,000 ಸೋಂಕು ಪ್ರಕರಣಗಳ ಗಡಿ ದಾಟಿದ ಎರಡನೇ ರಾಜ್ಯವಾಗಿದೆ

Coronavirus India Update: ಕಳೆದ 24 ಗಂಟೆಗಳಲ್ಲಿ 96,517 ಕೊವಿಡ್ ಪ್ರಕರಣ ಪತ್ತೆ, 445 ಸಾವು
ದೆಹಲಿಯಲ್ಲಿ ಸ್ವಾಬ್ ಟೆಸ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 06, 2021 | 10:14 AM

Share

ದೆಹಲಿಭಾರತದಲ್ಲಿ ಸೋಮವಾರ 96,517 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಭಾನುವಾರ ದೇಶದಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿತ್ತು. ಕಳೆದ 24 ಗಂಟೆಗಳಲ್ಲಿ 445 ಮಂದಿ ಕೊವಿಡ್​ನಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು 47,288 ಹೊಸ ಪ್ರಕರಣಗಳು ವರದಿಯಾಗಿವೆ. ಛತ್ತೀಸಗಡದಲ್ಲಿ 7,302 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 7,000 ಸೋಂಕು ಪ್ರಕರಣಗಳ ಗಡಿ ದಾಟಿದ ಎರಡನೇ ರಾಜ್ಯವಾಗಿದೆ .ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮಾಹಿತಿ ಪ್ರಕಾರ ಏಪ್ರಿಲ್ 5ರವರೆಗೆ 25,02,31,269 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಸೋಮವಾರ 12,11,612 ಮಾದರಿಗಳನ್ನು ಪರೀಕ್ಷಿಸಲಾಗಿದೆ.ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೆಬ್​ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 741830 ಆಗಿದೆ. ಇಲ್ಲಿಯವರೆಗೆ 1,16,82,136 ಮಂದಿ ಚೇತರಿಸಿಕೊಂಡಿದ್ದು , 1,65,101 ಮಂದಿ ಸಾವಿಗೀಡಾಗಿದ್ದಾರೆ.

ದೆಹಲಿಯಲ್ಲಿ ಕೊವಿಡ್ ಲಸಿಕೆ ಕೇಂದ್ರ 24ಗಂಟೆಗಳ ಕಾಲವೂ ತೆರೆದಿರಲಿದೆ ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ 24ಗಂಟೆಗಳ ಕಾಲವೂ ಲಸಿಕೆ ಕೇಂದ್ರ ತೆರೆದು ಕಾರ್ಯವೆಸಗಲಿದೆ. ದೆಹಲಿ ಆರೋಗ್ಯ ಸಚಿವಾಲಯವು ಇಂದು ಈ ಆದೇಶ ನೀಡಿದ್ದು, ನಾಳೆಯಿಂದ ಎಲ್ಲ ಲಸಿಕೆ ಕೇಂದ್ರಗಳು 24ಗಂಟೆಗಳ ಕಾಲ ತೆರೆದಿರಲಿದೆ.

ಕೊವಿಡ್ 2ನೇ ಅಲೆ: ದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಸಾಧ್ಯತೆ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರ ಕಚೇರಿ ಇಲ್ಲಿಯವರೆ ಪ್ರತಿಕ್ರಿಯೆ ನೀಡಿಲ್ಲ

ಬಂಗಾಳ: 5 ದಿನಗಳಲ್ಲಿ 6,700 ಕೊವಿಡ್ ಪ್ರಕರಣ  ಪತ್ತೆ ಪಶ್ಚಿಮ ಬಂಗಾಳದಲ್ಲಿ ಸೋಮವಾರ ಅತೀ ಹೆಚ್ಚು ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಇಲ್ಲಿ 1,957 ಪ್ರಕರಣಗಳು ವರದಿಯಾಗಿದ್ದು, 5 ದಿನಗಳ ಅವಧಿಯಲ್ಲಿ 6,700 ಮಂದಿಗೆ ಕೊವಿಡ್ ರೋಗ ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಮಹಾರಾಷ್ಟ್ರ , ಛತ್ತೀಸಗಡ ಮತ್ತು ಪಂಜಾಬ್  ನಲ್ಲಿ ಕೊವಿಡ್ ಪ್ರಕರಣ ಏರಿಕೆಯಾಗುತ್ತಿರುವುದನ್ನು ನಿಯಂತ್ರಿಸಲು  ಕೇಂದ್ರ ಸರ್ಕಾರ  50 ಉನ್ನತ ಮಟ್ಟದ ಸಾರ್ವಜನಿಕ ಆರೋಗ್ಯ ಕಾರ್ಯಕರ್ಚರ ತಂಡವನ್ನು  ಕಳುಹಿಸಿದೆ.

ಗೋವಾದಲ್ಲಿ ಕೊವಿಡ್ ನಿರ್ಬಂಧ ಬಗ್ಗೆ ಚಿಂತನೆ: ವಿಶ್ವಜಿತ್ ರಾಣೆ ಗೋವಾದಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಇದನ್ನು ನಿಯಂತ್ರಿಸಲು ನಿರ್ಬಂಧ ಹೇರುವ ಬಗ್ಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಗೋವಾದಲ್ಲಿ ಲಾಕ್​ಡೌನ್ ಅಥವಾ ಕರ್ಫ್ಯೂ ಹೇರುವ ಯಾವುದೇ ಚಿಂತನೆ ಇಲ್ಲ ಎಂದು ಸೋಮವಾರ ಹೇಳಿದ್ದ ಸಾವಂತ್ ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದಿದ್ದಾರೆ. ಸೋಮವಾರ ಗೋವಾದಲ್ಲಿ 24 ಹೊಸ ಪ್ರಕರಣಗಳು ಪತ್ತೆ ಆಗಿದ್ದು ಇಲ್ಲಿಯವರೆಗೆ 59,315 ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ: Covid-19 India Update: ಭಾರತದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು, ಗುರುವಾರ ಮುಖ್ಯಮಂತ್ರಿಗಳೊಂದಿಗೆ ನರೇಂದ್ರ ಮೋದಿ ಸಭೆ

Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ

(India sees 96 500 daily Coronavirus cases 445 Covid deaths were reported in the last 24 hours)

Published On - 10:10 am, Tue, 6 April 21

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ