AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11ರ ಮಾಸ್ಟರ್ ಮೈಂಡ್ ಹಫೀಜ್ ಸಯೀದ್​​ನ್ನು ಹಸ್ತಾಂತರಿಸುವಂತೆ ಪಾಕ್​​​ಗೆ ಭಾರತ ಮನವಿ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ವ್ಯಕ್ತಿ ಮತ್ತು ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕನಾಗಿದ್ದಾನೆ. ಒಂದು ನಿರ್ದಿಷ್ಟ ಪ್ರಕರಣದಲ್ಲಿ ವಿಚಾರಣೆಯನ್ನು ನಡೆಸಲು ಆತನನ್ನುಭಾರತಕ್ಕೆ ಹಸ್ತಾಂತರಿಸುವಂತೆ ನಾವು ಪಾಕಿಸ್ತಾನ ಸರ್ಕಾರಕ್ಕೆ ಸಂಬಂಧಿತ ದಾಖಲೆಗಳೊಂದಿಗೆ ವಿನಂತಿಯನ್ನು ರವಾನಿಸಿದ್ದೇವೆ" ಎಂದು ಹೇಳಿದ್ದಾರೆ.

26/11ರ ಮಾಸ್ಟರ್ ಮೈಂಡ್ ಹಫೀಜ್ ಸಯೀದ್​​ನ್ನು ಹಸ್ತಾಂತರಿಸುವಂತೆ ಪಾಕ್​​​ಗೆ ಭಾರತ ಮನವಿ
ಹಫೀಜ್ ಸಯೀದ್‌
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 29, 2023 | 5:38 PM

Share

ದೆಹಲಿ ಡಿಸೆಂಬರ್ 29: 26/11ರ ಮುಂಬೈ ಭಯೋತ್ಪಾದನಾ ದಾಳಿಯ ( 26/11 Mumbai terror attacks)ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ್ನು (Hafiz Saeed) ವಿಚಾರಣೆ ಎದುರಿಸಲು ಹಸ್ತಾಂತರಿಸುವಂತೆ ಭಾರತವು ಪಾಕಿಸ್ತಾನ ಸರ್ಕಾರಕ್ಕೆ ಮನವಿಯನ್ನು ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ, ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ವ್ಯಕ್ತಿ ಮತ್ತು ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕನಾಗಿದ್ದಾನೆ.

“ಒಂದು ನಿರ್ದಿಷ್ಟ ಪ್ರಕರಣದಲ್ಲಿ ವಿಚಾರಣೆಯನ್ನು ನಡೆಸಲು ಆತನನ್ನುಭಾರತಕ್ಕೆ ಹಸ್ತಾಂತರಿಸುವಂತೆ ನಾವು ಪಾಕಿಸ್ತಾನ ಸರ್ಕಾರಕ್ಕೆ ಸಂಬಂಧಿತ ದಾಖಲೆಗಳೊಂದಿಗೆ ವಿನಂತಿಯನ್ನು ರವಾನಿಸಿದ್ದೇವೆ” ಎಂದು ಹೇಳಿದ್ದಾರೆ.

ಹಫೀಜ್ ಸಯೀದ್‌ನ ಚಟುವಟಿಕೆಗಳ ವಿಷಯವನ್ನು ಸರ್ಕಾರವು ಎತ್ತಿದ್ದು ಇದು ಇತ್ತೀಚಿನ ವಿನಂತಿಯಾಗಿದೆ ಎಂದು ಬಾಗ್ಚಿ ಹೇಳಿದರು. ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಸ್ಥಾಪಕ ಸಯೀದ್, ನಿಷೇಧಿತ ಜಮಾತ್-ಉದ್-ದವಾ (ಜೆಯುಡಿ) ಯ ಇತರ ಕೆಲವು ನಾಯಕರೊಂದಿಗೆ ಅನೇಕ ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಹಲವಾರು ವರ್ಷಗಳಿಂದ ಶಿಕ್ಷೆಗೊಳಗಾದ ನಂತರ 2019 ರಿಂದ ಪಾಕಿಸ್ತಾನದ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಮುಂಬೈ ದಾಳಿಯ ಮಾಸ್ಟರ್​ಮೈಂಡ್​ ಹಫೀಜ್​ನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನವನ್ನು ಕೇಳಿದ ಭಾರತ

ವಿಶ್ವಸಂಸ್ಥೆಯಿಂದ ಗೊತ್ತುಪಡಿಸಿದ ಭಯೋತ್ಪಾದಕ ಸಯೀದ್‌ ಸೆರೆಹಿಡಿದರೆ USD 10 ಮಿಲಿಯನ್ ಬಹುಮಾನ ಘೋಷಿಸಿತ್ತು ಅಮೆರಿಕ. ಸಯೀದ್ ನೇತೃತ್ವದ ಜೆಯುಡಿಯು ಲಷ್ಕರ್-ಎ-ತೈಬಾ (ಎಲ್‌ಇಟಿ)ಸಂಘಟನೆಯಾಗಿದ್ದು, ಇದು ಆರು ಅಮೆರಿಕನ್ನರು ಸೇರಿದಂತೆ 166 ಜನರನ್ನು ಕೊಂದ 2008 ರ ಮುಂಬೈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ