AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Pakistan War: ಶ್ರೀನಗರ ಬಳಿ ಪಾಕಿಸ್ತಾನದ 2 ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಭಾರತೀಯ ವಾಯುಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ತಡೆದಿರುವ ಭಾರತ ಪ್ರತೀಕಾರದ ದಾಳಿಯನ್ನೂ ನಡೆಸುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಗುಂಡಿನ ಚಕಮಕಿಯೂ ನಡೆಯುತ್ತಿದೆ.

India Pakistan War: ಶ್ರೀನಗರ ಬಳಿ ಪಾಕಿಸ್ತಾನದ 2 ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:May 10, 2025 | 10:29 AM

ನವದೆಹಲಿ, ಮೇ 10: ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ (India Pakistan War) ಮತ್ತಷ್ಟು ಬಿಗಡಾಯಿಸುತ್ತಿದೆ. ಇದೇ ಸಂದರ್ಭದಲ್ಲಿ ಭಾರತೀಯ ಸೇನಾ ಪಡೆ (Indian Army) ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಮೂಲಗಳ ಪ್ರಕಾರ, 2 ಪಾಕಿಸ್ತಾನಿ ಜೆಟ್‌ಗಳನ್ನು ಶ್ರೀನಗರದ ಬಳಿ ಹೊಡೆದುರುಳಿಸಲಾಗಿದೆ.

ಶ್ರೀನಗರದ ಬುದ್ಗಾ-ಬಾರಾಮುಲ್ಲಾಪ್ರದೇಶದಲ್ಲಿ ಎರಡು ಪಾಕಿಸ್ತಾನಿ ಜೆಟ್​​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಅವುಗಳಲ್ಲಿದ್ದ ಪೈಲಟ್​ಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಸಾಲ ನೀಡುವ ನಿಲುವಳಿಗೆ ಭಾರತ ಮತದಾನ ಮಾಡದ್ದು ಯಾಕೆ?
Image
ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಸಾಲ ಕೊಟ್ಟ IMF
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ ಹೊಡೆದುರುಳಿಸಿರುವುದು F-16 ಜೆಟ್‌ಗಳು ಎಂದು ವರದಿಯಾಗಿದೆ. ಏತನ್ಮಧ್ಯೆ, ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವಣ ದಾಳಿ, ಪ್ರತಿದಾಳಿ ಮುಂದುವರಿದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.

ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ಆದರೆ, ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಫತೇಹ್-1 ಕ್ಷಿಪಣಿಯನ್ನು ಪಾಕಿಸ್ತಾನದಿಂದ ಹಾರಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ. ಉಧಮ್‌ಪುರದ ಹಲವು ಪ್ರದೇಶಗಳಲ್ಲಿ ಸ್ಫೋಟಗಳ ಶಬ್ದ ಇನ್ನೂ ಕೇಳಿಬರುತ್ತಿದೆ.

ಶುಕ್ರವಾರ ರಾತ್ರಿ ಪಾಕಿಸ್ತಾನ 26 ಸ್ಥಳಗಳ ಮೇಲೆ ದಾಳಿ ಮಾಡಿತು. ಇದಾದ ನಂತರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಎಲ್‌ಒಸಿಯಲ್ಲಿ ಹಲವು ಸ್ಥಳಗಳಲ್ಲಿ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ.

ಪಾಕಿಸ್ತಾನ ಮತ್ತೊಮ್ಮೆ ಪಂಜಾಬ್‌ನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಪಂಜಾಬ್‌ನ ಅಮೃತಸರದಲ್ಲಿ ಭಾರತೀಯ ವಾಯು ರಕ್ಷಣಾ ಪಡೆಗಳು ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ತಟಸ್ಥಗೊಳಿಸಿವೆ.

ಡ್ರೋನ್​ ಹೊಡೆದುರುಳಿಸಿದ ವಿಡಿಯೋ

ಭಾರತವು ಆಪರೇಷನ್ ಸಿಂಧೂರ್ ಪ್ರಾರಂಭಿಸಿದಾಗಿನಿಂದ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಪಾಕಿಸ್ತಾನವು ಸತತ ನಾಲ್ಕನೇ ದಿನವಾದ ಇಂದು ಕೂಡ ಭಾರತದ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ನಡೆಸಿದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಾಲ ನೀಡುವ ಐಎಂಎಫ್ ವೋಟಿಂಗ್​ನಲ್ಲಿ ಭಾರತ ಮತದಾನ ಮಾಡದ್ದು ಯಾಕೆ? ಇಲ್ಲಿದೆ ಕಾರಣ

ಜಮ್ಮು ಮತ್ತು ಕಾಶ್ಮೀರದ ಪಠಾಣ್‌ಕೋಟ್ ಮತ್ತು ಶ್ರೀನಗರ ವಾಯುನೆಲೆಗಳಲ್ಲಿ ಭಾರಿ ಸ್ಫೋಟಗಳ ಶಬ್ದ ಕೇಳಿಬಂದಿದೆ. ಭಾರತವೂ ಸೂಕ್ತ ತಿರುಗೇಟು ನೀಡುತ್ತಿದೆ. ಜಲಂಧರ್‌ನ ಕಾಂಗ್ನಿವಾಲ್ ಗ್ರಾಮದಲ್ಲಿ ಸ್ಫೋಟದ ನಂತರ ಪಾಕಿಸ್ತಾನಿ ಡ್ರೋನ್‌ನ ಅವಶೇಷಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:08 am, Sat, 10 May 25

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ