AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

ವಿಶೇಷ ಸಂಸತ್​​ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದೆ ಪ್ರಧಾನಿ ಮೋದಿ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್​​ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 18, 2023 | 11:07 AM

Share

ದೆಹಲಿ, ಸೆ.18: ಇಂದಿನಿಂದ ಐದು ದಿನಗಳ ಕಾಲ ಸಂಸತ್​​ ವಿಶೇಷ ಅಧಿವೇಶನ (Parliament Special Session) ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು 11.00 ಗಂಟೆಗೆ ಸಂಸತ್​​ನಲ್ಲಿ ಭಾಷಣ ಮಾಡಲಿದ್ದಾರೆ. ಈಗಾಗಲೇ ಸಂಸತ್​​​ ಅಧಿವೇಶಕ್ಕೆ ಆಗಮಿಸಿದ ಮೋದಿ, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್​​ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

ಇನ್ನು ಮೋದಿ ಅವರು ಜಿ-20 ಯಶಸ್ವಿನ ಬಗ್ಗೆಯು ಮಾಧ್ಯಮಗಳೊಂದಿದೆ ಮಾತನಾಡಿದರು. ಜಿ-20 ಶೃಂಗಸಭೆಯು ಜಾಗತಿಕ ದಕ್ಷಿಣದ ಧ್ವನಿಯಾಗಿದೆ. ಈ ಸಭೆಯಲ್ಲಿ ಆಫ್ರಿಕನ್ ಯೂನಿಯನ್​ ಜಿ-20ಯಲ್ಲಿ ಖಾಯಂ ಸದಸ್ಯತ್ವ ಪಡೆದಿದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ಇನ್ನು ನಿನ್ನೆ ‘ಯಶೋಭೂಮಿ’ ಅಂತರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ

ಇಂದು ನಡೆಯುವ ಅಧಿವೇಶನ ಚಿಕ್ಕದ್ದು, ಆದರೆ ಇದರ ಸಮಯ ದೊಡ್ಡದು, ಇದು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿವೇಶನವಾಗಿದೆ. ಈ ಅಧಿವೇಶನ ಒಂದು ವಿಶೇಷತೆ ಎಂದರೆ 75 ವರ್ಷಗಳ ಪ್ರಯಾಣ. ಇನ್ನು ಈ ಹೊಸ ಗಮ್ಯಸ್ಥಾನ ಈ ಪ್ರಯಾಣವನ್ನು ಮಾಡಲಿದೆ. ಅಂದರೆ ಹೊಸ ಸಂಸತ್​​ ಭವನಕ್ಕೆ ಹೋಗುತ್ತಿದೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮಾಡಬೇಕು. ಇದಕ್ಕಾಗಿ ಮುಂದೆ ಎಲ್ಲ ನಿರ್ಧಾರವನ್ನು ಹೊಸ ಸಂಸತ್​​ ಭವನದಲ್ಲಿ ತೆಗೆದುಕೊಳ್ಳಲಾಗುತ್ತದೆ.

ನಾಳೆ ಗಣೇಶ ಚತುರ್ಥಿ, ಈ ಶುಭ ದಿನದಂದು ನಮ್ಮ ಎಲ್ಲ ವಿಚಾರಗಳ ಜತೆಗೆ ಹೊಸ ಸಂಸತ್ತಿಗೆ ತೆರಳಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಣಪತಿಯನ್ನು ವಿಘ್ನಹರ್ತ ಎಂದೂ ಕರೆಯಲಾಗುತ್ತದೆ, ಈಗ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲದೆ, ನಿರ್ವಿಘ್ನವಾಗಿ ಭಾರತದ ಎಲ್ಲ ಸಂಕಲ್ಪ ಪರಿಪೂರ್ಣಗೊಳ್ಳಬೇಕು. ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಇದು ಐತಿಹಾಸಿಕವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:04 am, Mon, 18 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ