AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

ವಿಶೇಷ ಸಂಸತ್​​ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದೆ ಪ್ರಧಾನಿ ಮೋದಿ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್​​ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 18, 2023 | 11:07 AM

Share

ದೆಹಲಿ, ಸೆ.18: ಇಂದಿನಿಂದ ಐದು ದಿನಗಳ ಕಾಲ ಸಂಸತ್​​ ವಿಶೇಷ ಅಧಿವೇಶನ (Parliament Special Session) ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು 11.00 ಗಂಟೆಗೆ ಸಂಸತ್​​ನಲ್ಲಿ ಭಾಷಣ ಮಾಡಲಿದ್ದಾರೆ. ಈಗಾಗಲೇ ಸಂಸತ್​​​ ಅಧಿವೇಶಕ್ಕೆ ಆಗಮಿಸಿದ ಮೋದಿ, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್​​ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

ಇನ್ನು ಮೋದಿ ಅವರು ಜಿ-20 ಯಶಸ್ವಿನ ಬಗ್ಗೆಯು ಮಾಧ್ಯಮಗಳೊಂದಿದೆ ಮಾತನಾಡಿದರು. ಜಿ-20 ಶೃಂಗಸಭೆಯು ಜಾಗತಿಕ ದಕ್ಷಿಣದ ಧ್ವನಿಯಾಗಿದೆ. ಈ ಸಭೆಯಲ್ಲಿ ಆಫ್ರಿಕನ್ ಯೂನಿಯನ್​ ಜಿ-20ಯಲ್ಲಿ ಖಾಯಂ ಸದಸ್ಯತ್ವ ಪಡೆದಿದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ಇನ್ನು ನಿನ್ನೆ ‘ಯಶೋಭೂಮಿ’ ಅಂತರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ

ಇಂದು ನಡೆಯುವ ಅಧಿವೇಶನ ಚಿಕ್ಕದ್ದು, ಆದರೆ ಇದರ ಸಮಯ ದೊಡ್ಡದು, ಇದು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿವೇಶನವಾಗಿದೆ. ಈ ಅಧಿವೇಶನ ಒಂದು ವಿಶೇಷತೆ ಎಂದರೆ 75 ವರ್ಷಗಳ ಪ್ರಯಾಣ. ಇನ್ನು ಈ ಹೊಸ ಗಮ್ಯಸ್ಥಾನ ಈ ಪ್ರಯಾಣವನ್ನು ಮಾಡಲಿದೆ. ಅಂದರೆ ಹೊಸ ಸಂಸತ್​​ ಭವನಕ್ಕೆ ಹೋಗುತ್ತಿದೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮಾಡಬೇಕು. ಇದಕ್ಕಾಗಿ ಮುಂದೆ ಎಲ್ಲ ನಿರ್ಧಾರವನ್ನು ಹೊಸ ಸಂಸತ್​​ ಭವನದಲ್ಲಿ ತೆಗೆದುಕೊಳ್ಳಲಾಗುತ್ತದೆ.

ನಾಳೆ ಗಣೇಶ ಚತುರ್ಥಿ, ಈ ಶುಭ ದಿನದಂದು ನಮ್ಮ ಎಲ್ಲ ವಿಚಾರಗಳ ಜತೆಗೆ ಹೊಸ ಸಂಸತ್ತಿಗೆ ತೆರಳಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಣಪತಿಯನ್ನು ವಿಘ್ನಹರ್ತ ಎಂದೂ ಕರೆಯಲಾಗುತ್ತದೆ, ಈಗ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲದೆ, ನಿರ್ವಿಘ್ನವಾಗಿ ಭಾರತದ ಎಲ್ಲ ಸಂಕಲ್ಪ ಪರಿಪೂರ್ಣಗೊಳ್ಳಬೇಕು. ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಇದು ಐತಿಹಾಸಿಕವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:04 am, Mon, 18 September 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ