Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

ವಿಶೇಷ ಸಂಸತ್​​ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದೆ ಪ್ರಧಾನಿ ಮೋದಿ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್​​ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 18, 2023 | 11:07 AM

ದೆಹಲಿ, ಸೆ.18: ಇಂದಿನಿಂದ ಐದು ದಿನಗಳ ಕಾಲ ಸಂಸತ್​​ ವಿಶೇಷ ಅಧಿವೇಶನ (Parliament Special Session) ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು 11.00 ಗಂಟೆಗೆ ಸಂಸತ್​​ನಲ್ಲಿ ಭಾಷಣ ಮಾಡಲಿದ್ದಾರೆ. ಈಗಾಗಲೇ ಸಂಸತ್​​​ ಅಧಿವೇಶಕ್ಕೆ ಆಗಮಿಸಿದ ಮೋದಿ, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್​​ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

ಇನ್ನು ಮೋದಿ ಅವರು ಜಿ-20 ಯಶಸ್ವಿನ ಬಗ್ಗೆಯು ಮಾಧ್ಯಮಗಳೊಂದಿದೆ ಮಾತನಾಡಿದರು. ಜಿ-20 ಶೃಂಗಸಭೆಯು ಜಾಗತಿಕ ದಕ್ಷಿಣದ ಧ್ವನಿಯಾಗಿದೆ. ಈ ಸಭೆಯಲ್ಲಿ ಆಫ್ರಿಕನ್ ಯೂನಿಯನ್​ ಜಿ-20ಯಲ್ಲಿ ಖಾಯಂ ಸದಸ್ಯತ್ವ ಪಡೆದಿದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ಇನ್ನು ನಿನ್ನೆ ‘ಯಶೋಭೂಮಿ’ ಅಂತರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ

ಇಂದು ನಡೆಯುವ ಅಧಿವೇಶನ ಚಿಕ್ಕದ್ದು, ಆದರೆ ಇದರ ಸಮಯ ದೊಡ್ಡದು, ಇದು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿವೇಶನವಾಗಿದೆ. ಈ ಅಧಿವೇಶನ ಒಂದು ವಿಶೇಷತೆ ಎಂದರೆ 75 ವರ್ಷಗಳ ಪ್ರಯಾಣ. ಇನ್ನು ಈ ಹೊಸ ಗಮ್ಯಸ್ಥಾನ ಈ ಪ್ರಯಾಣವನ್ನು ಮಾಡಲಿದೆ. ಅಂದರೆ ಹೊಸ ಸಂಸತ್​​ ಭವನಕ್ಕೆ ಹೋಗುತ್ತಿದೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮಾಡಬೇಕು. ಇದಕ್ಕಾಗಿ ಮುಂದೆ ಎಲ್ಲ ನಿರ್ಧಾರವನ್ನು ಹೊಸ ಸಂಸತ್​​ ಭವನದಲ್ಲಿ ತೆಗೆದುಕೊಳ್ಳಲಾಗುತ್ತದೆ.

ನಾಳೆ ಗಣೇಶ ಚತುರ್ಥಿ, ಈ ಶುಭ ದಿನದಂದು ನಮ್ಮ ಎಲ್ಲ ವಿಚಾರಗಳ ಜತೆಗೆ ಹೊಸ ಸಂಸತ್ತಿಗೆ ತೆರಳಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಣಪತಿಯನ್ನು ವಿಘ್ನಹರ್ತ ಎಂದೂ ಕರೆಯಲಾಗುತ್ತದೆ, ಈಗ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲದೆ, ನಿರ್ವಿಘ್ನವಾಗಿ ಭಾರತದ ಎಲ್ಲ ಸಂಕಲ್ಪ ಪರಿಪೂರ್ಣಗೊಳ್ಳಬೇಕು. ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಇದು ಐತಿಹಾಸಿಕವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:04 am, Mon, 18 September 23

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...