AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಒಂದೇ ಯಾಕೆ? ಇನ್ನೂ 4 ರಾಜಧಾನಿಗಳಿರಲಿ: ಮಮತಾ ಬ್ಯಾನರ್ಜಿ ಹೊಸ ರಾಗ

ಮೋದಿ ಸರ್ಕಾರ ರದ್ದುಗೊಳಿಸಿದ ಯೋಜನಾ ಆಯೋಗವನ್ನು ಪುನಃ ರಚಿಸಬೇಕು. ನೀತಿ ಆಯೋಗ ಮತ್ತು ಯೋಜನಾ ಆಯೋಗಗಳು ಒಟ್ಟಿಗೆ ಕೆಲಸ ನಿರ್ವಹಿಸಬಹುದಾಗಿದೆ. ಅದರಲ್ಲೂ ಯೋಜನಾ ಆಯೋಗ ನೇತಾಜಿಯವರ ಪರಿಕಲ್ಪನೆಯಾಗಿತ್ತು ಎಂದು ದೀದಿ ಹೇಳಿದರು.

ದೆಹಲಿ ಒಂದೇ ಯಾಕೆ? ಇನ್ನೂ 4 ರಾಜಧಾನಿಗಳಿರಲಿ: ಮಮತಾ ಬ್ಯಾನರ್ಜಿ ಹೊಸ ರಾಗ
ಮಮತಾ ಬ್ಯಾನರ್ಜಿ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Jan 23, 2021 | 4:35 PM

Share

ಕೋಲ್ಕತ್ತಾ: ಭಾರತಕ್ಕೆ ಯಾಕೆ ಒಂದೇ ರಾಜಧಾನಿ ಇರಬೇಕು? ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್ 125ನೇ ಜನ್ಮದಿನದ ಪ್ರಯುಕ್ತ ಇಂದು ಕೋಲ್ಕತ್ತಾದ ನೇತಾಜಿ ಭವನ್​ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತಕ್ಕೆ ದೆಹಲಿ ಮಾತ್ರ ರಾಜಧಾನಿ ಇರಬಾರದು. ಪರ್ಯಾಯವಾಗಿ ಒಟ್ಟು 4 ರಾಜಧಾನಿಗಳನ್ನು ಹೊಂದಬೇಕು ಎಂದು ಆಗ್ರಹಿಸಿದರು. ಹಾಗೇ, ಬ್ರಿಟಿಷರು ನಮ್ಮ ದೇಶಕ್ಕೆ ಬಂದಾಗ ಅವರ ರಾಜಧಾನಿ ಕೋಲ್ಕತ್ತಾ ಆಗಿತ್ತು. ಅಲ್ಲಿಂದ ಇಡೀ ದೇಶವನ್ನು ಆಳಿದ್ದರು ಎಂಬುದನ್ನೂ ನೆನಪಿಸಿದರು.

ಯೋಜನಾ ಆಯೋಗವನ್ನು ಪುನಃ ರಚಿಸಬೇಕು: ಹಾಗೇ ಮೋದಿ ಸರ್ಕಾರ ರದ್ದುಗೊಳಿಸಿದ ಯೋಜನಾ ಆಯೋಗವನ್ನು ಪುನಃ ರಚಿಸಬೇಕು. ನೀತಿ ಆಯೋಗ ಮತ್ತು ಯೋಜನಾ ಆಯೋಗಗಳು ಒಟ್ಟಿಗೆ ಕೆಲಸ ನಿರ್ವಹಿಸಬಹುದಾಗಿದೆ. ಅದರಲ್ಲೂ ಯೋಜನಾ ಆಯೋಗ ನೇತಾಜಿಯವರ ಪರಿಕಲ್ಪನೆಯಾಗಿತ್ತು. ಶೀಘ್ರವೇ ಅದನ್ನು ಸ್ಥಾಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದರು. ಹಾಗೇ ನೇತಾಜಿ ಜನ್ಮದಿನದಂದು ರಾಷ್ಟ್ರೀಯ ರಜಾ ದಿನ ಎಂದು ಘೋಷಿಸುವಂತೆಯೂ ಹೇಳಿದ್ದಾರೆ.

ಸುಭಾಷ್​ ಚಂದ್ರ ಬೋಸ್​ರು ಭಾರತೀಯ ಸೇನೆಯನ್ನು ರೂಪಿಸಿದಾಗ ಗುಜರಾತ್​, ಪಶ್ಚಿಮ ಬಂಗಾಳ, ತಮಿಳುನಾಡು ಎಲ್ಲ ಕಡೆಯಿಂದಲೂ ಜನರನ್ನು ಸೇರಿಸಿಕೊಂಡರು. ಅವರು ಬ್ರಿಟಿಷರ ಒಡೆದು ಆಳುವ ನೀತಿಯನ್ನು ವಿರೋಧಿಸಿದ್ದರು. ಅಂಥ ಧೀಮಂತ ವ್ಯಕ್ತಿಯ ಸ್ಮಾರಕವನ್ನು ನಾವು ಕೋಲ್ಕತ್ತಾದಲ್ಲಿ ಆಜಾದ್​ ಹಿಂದ್ ಹೆಸರಿನಲ್ಲಿ ನಿರ್ಮಾಣ ಮಾಡಲಿದ್ದೇವೆ ಎಂದು ತಿಳಿಸಿದರು.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!