AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಒಂದೇ ಯಾಕೆ? ಇನ್ನೂ 4 ರಾಜಧಾನಿಗಳಿರಲಿ: ಮಮತಾ ಬ್ಯಾನರ್ಜಿ ಹೊಸ ರಾಗ

ಮೋದಿ ಸರ್ಕಾರ ರದ್ದುಗೊಳಿಸಿದ ಯೋಜನಾ ಆಯೋಗವನ್ನು ಪುನಃ ರಚಿಸಬೇಕು. ನೀತಿ ಆಯೋಗ ಮತ್ತು ಯೋಜನಾ ಆಯೋಗಗಳು ಒಟ್ಟಿಗೆ ಕೆಲಸ ನಿರ್ವಹಿಸಬಹುದಾಗಿದೆ. ಅದರಲ್ಲೂ ಯೋಜನಾ ಆಯೋಗ ನೇತಾಜಿಯವರ ಪರಿಕಲ್ಪನೆಯಾಗಿತ್ತು ಎಂದು ದೀದಿ ಹೇಳಿದರು.

ದೆಹಲಿ ಒಂದೇ ಯಾಕೆ? ಇನ್ನೂ 4 ರಾಜಧಾನಿಗಳಿರಲಿ: ಮಮತಾ ಬ್ಯಾನರ್ಜಿ ಹೊಸ ರಾಗ
ಮಮತಾ ಬ್ಯಾನರ್ಜಿ
Lakshmi Hegde
| Edited By: |

Updated on: Jan 23, 2021 | 4:35 PM

Share

ಕೋಲ್ಕತ್ತಾ: ಭಾರತಕ್ಕೆ ಯಾಕೆ ಒಂದೇ ರಾಜಧಾನಿ ಇರಬೇಕು? ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್ 125ನೇ ಜನ್ಮದಿನದ ಪ್ರಯುಕ್ತ ಇಂದು ಕೋಲ್ಕತ್ತಾದ ನೇತಾಜಿ ಭವನ್​ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತಕ್ಕೆ ದೆಹಲಿ ಮಾತ್ರ ರಾಜಧಾನಿ ಇರಬಾರದು. ಪರ್ಯಾಯವಾಗಿ ಒಟ್ಟು 4 ರಾಜಧಾನಿಗಳನ್ನು ಹೊಂದಬೇಕು ಎಂದು ಆಗ್ರಹಿಸಿದರು. ಹಾಗೇ, ಬ್ರಿಟಿಷರು ನಮ್ಮ ದೇಶಕ್ಕೆ ಬಂದಾಗ ಅವರ ರಾಜಧಾನಿ ಕೋಲ್ಕತ್ತಾ ಆಗಿತ್ತು. ಅಲ್ಲಿಂದ ಇಡೀ ದೇಶವನ್ನು ಆಳಿದ್ದರು ಎಂಬುದನ್ನೂ ನೆನಪಿಸಿದರು.

ಯೋಜನಾ ಆಯೋಗವನ್ನು ಪುನಃ ರಚಿಸಬೇಕು: ಹಾಗೇ ಮೋದಿ ಸರ್ಕಾರ ರದ್ದುಗೊಳಿಸಿದ ಯೋಜನಾ ಆಯೋಗವನ್ನು ಪುನಃ ರಚಿಸಬೇಕು. ನೀತಿ ಆಯೋಗ ಮತ್ತು ಯೋಜನಾ ಆಯೋಗಗಳು ಒಟ್ಟಿಗೆ ಕೆಲಸ ನಿರ್ವಹಿಸಬಹುದಾಗಿದೆ. ಅದರಲ್ಲೂ ಯೋಜನಾ ಆಯೋಗ ನೇತಾಜಿಯವರ ಪರಿಕಲ್ಪನೆಯಾಗಿತ್ತು. ಶೀಘ್ರವೇ ಅದನ್ನು ಸ್ಥಾಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದರು. ಹಾಗೇ ನೇತಾಜಿ ಜನ್ಮದಿನದಂದು ರಾಷ್ಟ್ರೀಯ ರಜಾ ದಿನ ಎಂದು ಘೋಷಿಸುವಂತೆಯೂ ಹೇಳಿದ್ದಾರೆ.

ಸುಭಾಷ್​ ಚಂದ್ರ ಬೋಸ್​ರು ಭಾರತೀಯ ಸೇನೆಯನ್ನು ರೂಪಿಸಿದಾಗ ಗುಜರಾತ್​, ಪಶ್ಚಿಮ ಬಂಗಾಳ, ತಮಿಳುನಾಡು ಎಲ್ಲ ಕಡೆಯಿಂದಲೂ ಜನರನ್ನು ಸೇರಿಸಿಕೊಂಡರು. ಅವರು ಬ್ರಿಟಿಷರ ಒಡೆದು ಆಳುವ ನೀತಿಯನ್ನು ವಿರೋಧಿಸಿದ್ದರು. ಅಂಥ ಧೀಮಂತ ವ್ಯಕ್ತಿಯ ಸ್ಮಾರಕವನ್ನು ನಾವು ಕೋಲ್ಕತ್ತಾದಲ್ಲಿ ಆಜಾದ್​ ಹಿಂದ್ ಹೆಸರಿನಲ್ಲಿ ನಿರ್ಮಾಣ ಮಾಡಲಿದ್ದೇವೆ ಎಂದು ತಿಳಿಸಿದರು.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ