
ನವದೆಹಲಿ, ಮೇ 25: ಇಂದು ಇಡೀ ದೇಶವು ಭಯೋತ್ಪಾದನೆ(Terrorism)ಯ ವಿರುದ್ಧ ಒಗ್ಗಟ್ಟಾಗಿದೆ, ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂದು ಜನರು ದೃಢನಿಶ್ಚಯ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಮನ್ ಕಿ ಬಾತ್ನಲ್ಲಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬ ಭಾರತೀಯನೂ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕು ಎಂಬ ಸಂಕಲ್ಪವನ್ನು ಹೊಂದಿದ್ದಾನೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮ ಸೇನೆಯು ಪ್ರದರ್ಶಿಸಿದ ಶೌರ್ಯವು ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದೆ ಎಂದರು.
ಆಪರೇಷನ್ ಸಿಂಧೂರ್ ಪ್ರಪಂಚದಾದ್ಯಂತ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಆಪರೇಷನ್ ಸಿಂಧೂರ್ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಇದು ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರ.
ನಮ್ಮ ಸೈನಿಕರು ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದರು, ಅದು ಅವರ ಅದಮ್ಯ ಧೈರ್ಯ ಮತ್ತು ಇದು ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳು, ಉಪಕರಣಗಳು ಮತ್ತು ತಂತ್ರಜ್ಞಾನದ ಶಕ್ತಿಯನ್ನು ಒಳಗೊಂಡಿತ್ತು. ಇದು ‘ಸ್ವಾವಲಂಬಿ ಭಾರತ’ದ ಸಂಕಲ್ಪವನ್ನೂ ಹೊಂದಿತ್ತು. ನಮ್ಮ ಎಂಜಿನಿಯರ್ಗಳು, ನಮ್ಮ ತಂತ್ರಜ್ಞರು, ಪ್ರತಿಯೊಬ್ಬರ ಬೆವರು ಈ ವಿಜಯದಲ್ಲಿ ಸೇರಿದೆ.
ಮತ್ತಷ್ಟು ಓದಿ: ನಾವಿನ್ನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ, ಅಮೆರಿಕದಲ್ಲಿ ಭಯೋತ್ಪಾದನೆ, ಪಾಕಿಸ್ತಾನದ ವಿರುದ್ಧ ಶಶಿ ತರೂರ್ ವಾಗ್ದಾಳಿ
ಆಪರೇಷನ್ ಸಿಂಧೂರ್ ದೇಶದ ಜನರ ಮೇಲೆ ಎಷ್ಟೊಂದು ಪ್ರಭಾವ ಬೀರಿದೆ ಎಂದರೆ, ಅನೇಕ ಕುಟುಂಬಗಳು ಅದನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡಿವೆ. ಬಿಹಾರದ ಕತಿಹಾರ್, ಉತ್ತರ ಪ್ರದೇಶದ ಕುಶಿನಗರ ಮತ್ತು ಇತರ ಹಲವಾರು ನಗರಗಳಲ್ಲಿ, ಆ ಅವಧಿಯಲ್ಲಿ ಜನಿಸಿದ ಮಗುವಿಗೆ ಸಿಂಧೂರಿ ಎಂದು ಹೆಸರಿಸಲಾಯಿತು.
ಮನ್ ಕಿ ಬಾತ್ ಕಾರ್ಯಕ್ರಮವನ್ನು ಅಕ್ಟೋಬರ್ 3, 2014 ರಂದು ಪ್ರಾರಂಭಿಸಲಾಯಿತು. ಇದು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ದರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲದೆ 22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳಲ್ಲಿ ಪ್ರಸಾರವಾಗುತ್ತದೆ. ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋದ 500 ಕ್ಕೂ ಹೆಚ್ಚು ಕೇಂದ್ರಗಳು ಪ್ರಸಾರ ಮಾಡುತ್ತಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:23 am, Sun, 25 May 25