AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi-2: ಒಡಿಶಾದ ಕರಾವಳಿ ತಟದಲ್ಲಿ ಪೃಥ್ವಿ-2 ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಭಾರತ

ಭಾರತವು ಒಡಿಶಾದ ಚಾಂದೀಪುರದಲ್ಲಿ 250 ಕಿ.ಮೀಗೂ ಹೆಚ್ಚು ಸ್ಟ್ರೈಕ್ ರೇಂಜ್ ಹೊಂದಿರುವ ಪೃಥ್ವಿ 2 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. DRDO ಅಭಿವೃದ್ಧಿಪಡಿಸಿದ ಈ ಕ್ಷಿಪಣಿಯು ಈಗಾಗಲೇ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಭಾಗವಾಗಿದೆ.

Prithvi-2: ಒಡಿಶಾದ ಕರಾವಳಿ ತಟದಲ್ಲಿ ಪೃಥ್ವಿ-2 ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಭಾರತ
Prithvi 2 Missile
TV9 Web
| Edited By: |

Updated on: Jun 16, 2022 | 10:04 AM

Share

ಭಾರತವು ಒಡಿಶಾದ ಚಾಂದೀಪುರದಲ್ಲಿ 250 ಕಿ.ಮೀಗೂ ಹೆಚ್ಚು ಸ್ಟ್ರೈಕ್ ರೇಂಜ್ ಹೊಂದಿರುವ ಪೃಥ್ವಿ 2 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. DRDO ಅಭಿವೃದ್ಧಿಪಡಿಸಿದ ಈ ಕ್ಷಿಪಣಿಯು ಈಗಾಗಲೇ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಭಾಗವಾಗಿದೆ. “ಈ ಬ್ಯಾಲಿಸ್ಟಿಕ್ ಕ್ಷಿಪಣಿ ಪೃಥ್ವಿ-2 ಅನ್ನು ಜೂನ್ 15 ರಂದು ಸಂಜೆ 7.30 ರ ಸುಮಾರಿಗೆ ಒಡಿಶಾದ ಚಾಂದೀಪುರದಲ್ಲಿರುವ ಪರೀಕ್ಷಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು” ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಪೃಥ್ವಿ 2 ಕ್ಷಿಪಣಿ ನ್ಯೂಕ್ಲಿಯರ್ ವೆಪನ್​ಗಳನ್ನು ಹೊತ್ತೊಯ್ಯಬಲ್ಲದ್ದಾಗಿದೆ, ಒಂದೊಮ್ಮೆ ರಾತ್ರಿ ಸಮಯದಲ್ಲಿ ಶತ್ರುಗಳು ಆಕ್ರಮಣ ಮಾಡಿದರೂ ಸುಲಭವಾಗಿ ಅವರನ್ನೆಲ್ಲಾ ಹೊಡೆದೋಡಿಸುವ ಸಾಮರ್ಥ್ಯ ಹೊಂದಿದೆ.

ಈ ಮೊದಲು 2018ರ ಫೆಬ್ರವರಿ 21ರ ರಾತ್ರಿ ಪೃಥ್ವಿ 2 ಕ್ಷಿಪಣಿಯನ್ನು ಉಡಾವಣೆ ಮಾಡಲಾಯಿತು. ಬಳಿಕ 2019ರ ನವೆಂಬರ್ 20ರಂದು ಮತ್ತೊಮ್ಮೆ ಕ್ಷಿಪಣಿ ಪರೀಕ್ಷೆ ನಡೆಯಿತು. ಇವೆಲ್ಲವೂ ಚಾಂದೀಪುರದಲ್ಲಿಯೇ ನಡೆದಿದೆ.

ಈ ಹಿಂದೆ ಈ ಕ್ಷಿಪಣಿಯನ್ನು ಒಡಿಶಾದ ಬಾಲಸೋರ್ ಕರಾವಳಿಯಲ್ಲಿಯೇ ಪರೀಕ್ಷಿಸಲಾಗಿತ್ತು, ಎಲ್ಲಾ ನಿಯತಾಂಕಗಳನ್ನು ಸಾಧಿಸಿ ಪರೀಕ್ಷೆಯು ಯಶಸ್ವಿಯಾಗಿತ್ತು. ಮಾಹಿತಿಯ ಪ್ರಕಾರ, ಈ ಕ್ಷಿಪಣಿಯು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.

ಇದು ದ್ರವ ಎಂಜಿನ್​ಗಳನ್ನು ಒಳಗೊಂಡಿದೆ. ಪರೀಕ್ಷಾರ್ಥ ಉಡಾವಣೆ ವೇಳೆ ಕ್ಷಿಪಣಿಯು ನಿಖರವಾಗಿ ತನ್ನ ಗುರಿ ತಲುಪಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಹಾಗೆಯೇ ಭಾರತವು ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-4 ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಈ ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ದೇಶದ ಮಿಲಿಟರಿ ವ್ಯವಸ್ಥೆಗೆ ಬಲ ಎಂದೇ ಹೇಳಬಹುದು. ಈ ಕ್ಷಿಪಣಿಯು ಸುಮಾರು 4,000 ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ ಮತ್ತು ಪ್ರಾಥಮಿಕವಾಗಿ ಚೀನಾದ ವಿರುದ್ಧ ಭಾರತದ ಪ್ರತಿಬಂಧಕವಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್