AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi-2: ಒಡಿಶಾದ ಕರಾವಳಿ ತಟದಲ್ಲಿ ಪೃಥ್ವಿ-2 ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಭಾರತ

ಭಾರತವು ಒಡಿಶಾದ ಚಾಂದೀಪುರದಲ್ಲಿ 250 ಕಿ.ಮೀಗೂ ಹೆಚ್ಚು ಸ್ಟ್ರೈಕ್ ರೇಂಜ್ ಹೊಂದಿರುವ ಪೃಥ್ವಿ 2 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. DRDO ಅಭಿವೃದ್ಧಿಪಡಿಸಿದ ಈ ಕ್ಷಿಪಣಿಯು ಈಗಾಗಲೇ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಭಾಗವಾಗಿದೆ.

Prithvi-2: ಒಡಿಶಾದ ಕರಾವಳಿ ತಟದಲ್ಲಿ ಪೃಥ್ವಿ-2 ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಭಾರತ
Prithvi 2 Missile
TV9 Web
| Updated By: ನಯನಾ ರಾಜೀವ್|

Updated on: Jun 16, 2022 | 10:04 AM

Share

ಭಾರತವು ಒಡಿಶಾದ ಚಾಂದೀಪುರದಲ್ಲಿ 250 ಕಿ.ಮೀಗೂ ಹೆಚ್ಚು ಸ್ಟ್ರೈಕ್ ರೇಂಜ್ ಹೊಂದಿರುವ ಪೃಥ್ವಿ 2 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. DRDO ಅಭಿವೃದ್ಧಿಪಡಿಸಿದ ಈ ಕ್ಷಿಪಣಿಯು ಈಗಾಗಲೇ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಭಾಗವಾಗಿದೆ. “ಈ ಬ್ಯಾಲಿಸ್ಟಿಕ್ ಕ್ಷಿಪಣಿ ಪೃಥ್ವಿ-2 ಅನ್ನು ಜೂನ್ 15 ರಂದು ಸಂಜೆ 7.30 ರ ಸುಮಾರಿಗೆ ಒಡಿಶಾದ ಚಾಂದೀಪುರದಲ್ಲಿರುವ ಪರೀಕ್ಷಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು” ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಪೃಥ್ವಿ 2 ಕ್ಷಿಪಣಿ ನ್ಯೂಕ್ಲಿಯರ್ ವೆಪನ್​ಗಳನ್ನು ಹೊತ್ತೊಯ್ಯಬಲ್ಲದ್ದಾಗಿದೆ, ಒಂದೊಮ್ಮೆ ರಾತ್ರಿ ಸಮಯದಲ್ಲಿ ಶತ್ರುಗಳು ಆಕ್ರಮಣ ಮಾಡಿದರೂ ಸುಲಭವಾಗಿ ಅವರನ್ನೆಲ್ಲಾ ಹೊಡೆದೋಡಿಸುವ ಸಾಮರ್ಥ್ಯ ಹೊಂದಿದೆ.

ಈ ಮೊದಲು 2018ರ ಫೆಬ್ರವರಿ 21ರ ರಾತ್ರಿ ಪೃಥ್ವಿ 2 ಕ್ಷಿಪಣಿಯನ್ನು ಉಡಾವಣೆ ಮಾಡಲಾಯಿತು. ಬಳಿಕ 2019ರ ನವೆಂಬರ್ 20ರಂದು ಮತ್ತೊಮ್ಮೆ ಕ್ಷಿಪಣಿ ಪರೀಕ್ಷೆ ನಡೆಯಿತು. ಇವೆಲ್ಲವೂ ಚಾಂದೀಪುರದಲ್ಲಿಯೇ ನಡೆದಿದೆ.

ಈ ಹಿಂದೆ ಈ ಕ್ಷಿಪಣಿಯನ್ನು ಒಡಿಶಾದ ಬಾಲಸೋರ್ ಕರಾವಳಿಯಲ್ಲಿಯೇ ಪರೀಕ್ಷಿಸಲಾಗಿತ್ತು, ಎಲ್ಲಾ ನಿಯತಾಂಕಗಳನ್ನು ಸಾಧಿಸಿ ಪರೀಕ್ಷೆಯು ಯಶಸ್ವಿಯಾಗಿತ್ತು. ಮಾಹಿತಿಯ ಪ್ರಕಾರ, ಈ ಕ್ಷಿಪಣಿಯು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.

ಇದು ದ್ರವ ಎಂಜಿನ್​ಗಳನ್ನು ಒಳಗೊಂಡಿದೆ. ಪರೀಕ್ಷಾರ್ಥ ಉಡಾವಣೆ ವೇಳೆ ಕ್ಷಿಪಣಿಯು ನಿಖರವಾಗಿ ತನ್ನ ಗುರಿ ತಲುಪಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಹಾಗೆಯೇ ಭಾರತವು ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-4 ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಈ ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ದೇಶದ ಮಿಲಿಟರಿ ವ್ಯವಸ್ಥೆಗೆ ಬಲ ಎಂದೇ ಹೇಳಬಹುದು. ಈ ಕ್ಷಿಪಣಿಯು ಸುಮಾರು 4,000 ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ ಮತ್ತು ಪ್ರಾಥಮಿಕವಾಗಿ ಚೀನಾದ ವಿರುದ್ಧ ಭಾರತದ ಪ್ರತಿಬಂಧಕವಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ