AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರನ ಹತ್ಯೆ ಮಾಡಿದ ಪಾಕ್​ ನೌಕಾಪಡೆ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ; ಹಿರಿಯ ರಾಜತಾಂತ್ರಿಕನಿಗೆ ಖಡಕ್​ ಎಚ್ಚರಿಕೆ​

ಗುಜರಾತ್​​ನ ದ್ವಾರಕಾದ ಬಳಿ ಮೀನುಗಾರಿಕೆಗೆ ಜಲ್​ಪರಿ ಎಂಬ ದೋಣಿಯಲ್ಲಿ ತೆರಳಿದ್ದ ಭಾರತೀಯ ಮೀನುಗಾರರ ಮೇಲೆ ಪಾಕಿಸ್ತಾನ ನೌಕಾಪಡೆ ದಾಳಿ ನಡೆಸಿತ್ತು. ಈ ದೋಣಿಯಲ್ಲಿ ಏಳು ಮೀನುಗಾರರು ಇದ್ದು, ಅದರಲ್ಲೊಬ್ಬ ಮೃತಪಟ್ಟಿದ್ದ.

ಮೀನುಗಾರನ ಹತ್ಯೆ ಮಾಡಿದ ಪಾಕ್​ ನೌಕಾಪಡೆ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ; ಹಿರಿಯ ರಾಜತಾಂತ್ರಿಕನಿಗೆ ಖಡಕ್​ ಎಚ್ಚರಿಕೆ​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 08, 2021 | 10:45 PM

Share

ಗುಜರಾತ್​​ನ ಕರಾವಳಿ ತೀರದಲ್ಲಿ ಭಾರತೀಯ ಮೀನುಗಾರನೊಬ್ಬನನ್ನು ನಿನ್ನೆ ಪಾಕಿಸ್ತಾನ ನೌಕಾಪಡೆ ಹತ್ಯೆ ಮಾಡಿದೆ. ಗುಜರಾತ್​​ನ ದ್ವಾರಕಾದ ಓಖಾ ಪಟ್ಟಣದ ಬಳಿ ಘಟನೆ ನಡೆದಿತ್ತು. ಜಲ್​ಪರಿ ಎಂಬ ಹೆಸರಿನ ಬೋಟ್​ ಮೇಲೆ ಪಾಕಿಸ್ತಾನ ನೇವಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಮೀನುಗಾರನೊಬ್ಬ ಹತನಾಗಿದ್ದ. ಈ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇಂದು ಭಾರತದಲ್ಲಿರುವ ಪಾಕಿಸ್ತಾನದ ಹೈ ಕಮೀಷನ್​​ನ ಹಿರಿಯ ರಾಯಭಾರಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕರೆಸಿತ್ತು. ಅಲ್ಲದೆ ಘಟನೆಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮುಗ್ಧ ಮೀನುಗಾರರ ಮೇಲೆ ದಾಳಿ ನಡೆಸಿದ್ಯಾಕೆಂದು ಕಟುವಾಗಿ ಪ್ರಶ್ನಿಸಿದೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಪಾಕಿಸ್ತಾನ ಭಾರತದ ಮೀನುಗಾರಿಕಾ ಬೋಟ್​ ಮೇಲೆ ಗುಂಡಿನ ದಾಳಿ ನಡೆಸಿದ್ದು ನಿಜಕ್ಕೂ ಶೋಚನೀಯ. ಇದರಿಂದಾಗಿ ಒಬ್ಬ ಮೀನುಗಾರನ ಪ್ರಾಣವೇ ಹೋಗಿದೆ. ಹೀಗೆ ಅನಗತ್ಯವಾಗಿ ಗುಂಡಿನ ದಾಳಿ ಮಾಡುವ ಮೂಲಕ ಪಾಕಿಸ್ತಾನ ಎಲ್ಲ ಅಂತಾರಾಷ್ಟ್ರೀಯ ನಿಯಮಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳನ್ನೂ ಮೀರಿದೆ ಎಂದು ಕೇಂದ್ರ ಸರ್ಕಾರ ಕಿಡಿ ಕಾರಿದೆ ಎನ್ನಲಾಗಿದೆ.  ಹಾಗೇ, ಇಂಥ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸದಂತೆ ಪಾಕಿಸ್ತಾನ ಸರ್ಕಾರ ತನ್ನ ಸೇನಾ ಪಡೆಗಳಿಗೆ ಸೂಚನೆ ನೀಡಬೇಕು ಎಂದು ಕೂಡ ಆಗ್ರಹಿಸಿದೆ.

ದ್ವಾರಕಾದ ಬಳಿ ಮೀನುಗಾರಿಕೆಗೆ ಜಲ್​ಪರಿ ಎಂಬ ದೋಣಿಯಲ್ಲಿ ತೆರಳಿದ್ದ ಭಾರತೀಯ ಮೀನುಗಾರರ ಮೇಲೆ ಪಾಕಿಸ್ತಾನ ನೌಕಾಪಡೆ ದಾಳಿ ನಡೆಸಿತ್ತು. ಈ ದೋಣಿಯಲ್ಲಿ ಏಳು ಮೀನುಗಾರರು ಇದ್ದು, ಅದರಲ್ಲೊಬ್ಬ ಮೃತಪಟ್ಟಿದ್ದ. ಇನ್ನುಳಿದ ಆರೂ ಮಂದಿಯನ್ನು ಪಾಕಿಸ್ತಾನಿ ಪಡೆಗಳು ಬಂಧಿಸಿದ್ದು ಎಂದೂ ಕೂಡ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.  ಇನ್ನು ಘಟನೆಗೆ ಸಂಬಂಧಪಟ್ಟಂತೆ ಪಾಕಿಸ್ತಾನದ ನೌಕಾಪಡೆಯ 10 ಸಿಬ್ಬಂದಿ ವಿರುದ್ಧ ಪೋರ್​ಬಂದರ್​ ನೇವಿ ಪೊಲೀಸರು ಎಫ್​​ಐಆರ್​ ದಾಖಲು ಮಾಡಿದ್ದಾರೆ.

ಇದನ್ನೂ ಓದಿ: Virat Kohli: ನಿರಾಸೆಯೊಂದಿಗೆ ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?