ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಭಾರತ

ಭಾರತದಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರ ಹೇಳಿಕೆಗಳಿಗೆ ನಾವು ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸುತ್ತೇವೆ. ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ, ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಭಾರತ
ವಿದೇಶಾಂಗ ಸಚಿವಾಲಯಕ್ಕೆ ಬಂದ ಯುನೈಟೆಡ್ ಸ್ಟೇಟ್ಸ್‌ನ ಕಾರ್ಯನಿರ್ವಾಹಕ ಉಪ ಮುಖ್ಯಸ್ಥರಾದ ಗ್ಲೋರಿಯಾ ಬರ್ಬೆನಾ
Follow us
|

Updated on: Mar 27, 2024 | 2:18 PM

ದೆಹಲಿ ಮಾರ್ಚ್ 27 : ದೆಹಲಿಯ (Delhi) ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (Ministry of External Affairs) ಕಚೇರಿಗೆ ಕರೆಸಲಾದ ಯುನೈಟೆಡ್ ಸ್ಟೇಟ್ಸ್‌ನ ಕಾರ್ಯನಿರ್ವಾಹಕ ಉಪ ಮುಖ್ಯಸ್ಥರಾದ ಗ್ಲೋರಿಯಾ ಬರ್ಬೆನಾ ಜತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ 40 ನಿಮಿಷಗಳ ಸಭೆ ನಡೆಸಿದ್ದಾರೆ. ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಬಂಧನದ ವರದಿಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದ ಒಂದು ದಿನದ ನಂತರ ಈ ಸಭೆ ಬಂದಿದೆ. ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತಂತೆ ಪ್ರತಿಕ್ರಿಯಿಸಿದ ಅಮೆರಿಕ, ಕಾನೂನು ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿತ್ತು.

ಅಮೆರಿಕ ಹೇಳಿಕೆಗೆ ಭಾರತ ಪ್ರತಿಕ್ರಿಯೆ

ಭಾರತದಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರ ಹೇಳಿಕೆಗಳಿಗೆ ನಾವು ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸುತ್ತೇವೆ. ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಸಹವರ್ತಿ ಪ್ರಜಾಪ್ರಭುತ್ವಗಳ ಸಂದರ್ಭದಲ್ಲಿ ಈ ಜವಾಬ್ದಾರಿ ಇನ್ನೂ ಹೆಚ್ಚು. ಇದು ಇಲ್ಲದಿದ್ದರೆ ಯಾವುದೂ ಸರಿಹೊಂದಲ್ಲ. ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ನ್ಯಾಯಾಂಗವನ್ನು ಆಧರಿಸಿವೆ. ಅದರ ಮೇಲೆ ಹೇಳಿಕೆ ನೀಡುವುದು ಅನಗತ್ಯ ಎಂದಿದೆ.

ಆರೋಪ ಎದುರಿಸುತ್ತಿರುವ ಯಾವುದೇ ಭಾರತೀಯ ಪ್ರಜೆಯಂತೆ ಕೇಜ್ರಿವಾಲ್ ಕೂಡ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆಗೆ ಅರ್ಹರು ಎಂದು ಜರ್ಮನಿಯ ವಿದೇಶಾಂಗ ಕಚೇರಿ ಒತ್ತಿ ಹೇಳಿದ ದಿನಗಳ ನಂತರ ಅಮೆರಿಕ ಈ ರೀತಿ ಪ್ರತಿಕ್ರಿಯಿಸಿತ್ತು.

ಭಾರತ ಸರ್ಕಾರವು ಜರ್ಮನ್ ರಾಯಭಾರಿಯನ್ನು ಕರೆಸಿದ್ದು, ಇದು “ಆಂತರಿಕ ವಿಷಯಗಳಲ್ಲಿ ಅನಗತ್ಯ ಹಸ್ತಕ್ಷೇಪ” ಎಂದು ಹೇಳಿತು. ನಾವು ನಮ್ಮ ನ್ಯಾಯಾಂಗ ಪ್ರಕ್ರಿಯೆಯ ಆಂತರಿಕ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಮತ್ತು ನ್ಯಾಯಾಂಗ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದನ್ನು ಖಂಡಿಸುತ್ತೇವೆ. ಇಂತಹ ಪಕ್ಷಪಾತದ ಊಹೆಗಳು ಅನಗತ್ಯವಾದವು” ಎಂದು ಭಾರತ ಜರ್ಮನಿ ಹೇಳಿಕೆಯನ್ನು ಖಂಡಿಸಿತ್ತು.

ಇದನ್ನೂ ಓದಿ:ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿಯ ಹೇಳಿಕೆ ‘ಅನಗತ್ಯ ಹಸ್ತಕ್ಷೇಪ’: ಕೇಂದ್ರ ಸರ್ಕಾರ 

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ವಾರ ಜಾರಿ ನಿರ್ದೇಶನಾಲಯವು ಬಂಧಿಸಿದ್ದು ಮಾರ್ಚ್ 28 ರವರೆಗೆ ವಶದಲ್ಲಿರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​