ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ಇಲ್ಲಿಯವರೆಗೆ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳು ಪೋಲ್ಯಾಂಡ್, ರೊಮೇನಿಯಾ, ಹಂಗೇರಿ ಇನ್ನಿತರ ಗಡಿಭಾಗಗಳಿಗೆ ಸಮೀಪದಲ್ಲಿ ಇದ್ದವರೇ ಆಗಿದ್ದರು. ಆದರೆ ಕೀವ್​, ಖಾರ್ಕೀವ್​​ಗಳೆಲ್ಲ ಈ ಗಡಿ ಪ್ರದೇಶಗಳಿಂದ ತುಂಬ ದೂರದಲ್ಲಿದ್ದು, ಇವರಿಗೆ ರಷ್ಯಾ ಗಡಿಯೇ ಸಮೀಪ ಇದೆ.

ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ
ಮೃತ ವಿದ್ಯಾರ್ಥಿ ನವೀನ್​
Follow us
| Updated By: Lakshmi Hegde

Updated on: Mar 01, 2022 | 6:01 PM

ಉಕ್ರೇನ್​​ನಲ್ಲಿದ್ದ ಭಾರತದ (ಕರ್ನಾಟಕದ ಹಾವೇರಿ) ವಿದ್ಯಾರ್ಥಿ ನವೀನ್ (Karnataka Student Died in Ukraine)​ ರಷ್ಯಾ ದಾಳಿಗೆ ಮೃತಪಡುತ್ತಿದ್ದಂತೆ ಕೇಂದ್ರ ಸರ್ಕಾರ ಫುಲ್​ ಅಲರ್ಟ್ ಆಗಿದೆ. ಈಗಾಗಲೇ ಆಪರೇಶನ್​ ಗಂಗಾ (Operation Ganga) ಮೂಲಕ ಅನೇಕ ವಿದ್ಯಾರ್ಥಿಗಳನ್ನು ಉಕ್ರೇನ್​ನಿಂದ ಭಾರತಕ್ಕೆ ಕರೆತರಲಾಗಿದೆ. ಆದರೆ ಇದೊಂದು ದುರಂತ ನಡೆದ ಬೆನ್ನಲ್ಲೇ ಮತ್ತಷ್ಟು ಕ್ರಮ ಕೈಗೊಳ್ಳಲು ಮುಂದಾಗಿದೆ. ಖಾರ್ಕೀವ್​​ನ ಬಂಕರ್​​ವೊಂದರಲ್ಲಿ ಆಶ್ರಯ ಪಡೆದಿದ್ದ ನವೀನ್​ ಇಂದು ಮುಂಜಾನೆ ಏನಾದರೂ ತಿನ್ನಲು ತರಬೇಕು ಎಂದು ಅಲ್ಲಿಯೇ ಸಮೀಪ ಇದ್ದ ಸೂಪರ್​​ ಮಾರ್ಕೆಟ್​ಗೆ ಹೋಗಿದ್ದಾಗ, ರಷ್ಯಾದ ಶೆಲ್​ ದಾಳಿಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈಗಾಗಲೇ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಇನ್ನು ಉಕ್ರೇನ್​​ನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಕೇಂದ್ರ ಸರ್ಕಾರ, ಭಾರತದಲ್ಲಿರುವ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚಿಸಿದೆ. ಅಷ್ಟೇ ಅಲ್ಲ, ರಷ್ಯಾ ಮತ್ತು ಉಕ್ರೇನ್​​ನಲ್ಲಿರುವ ಭಾರತದ ರಾಯಭಾರಿಗಳಾದ ಪವನ್​ ಕಪೂರ್​ ಮತ್ತು ಪಾರ್ಥ ಸತ್ಪತಿ ಆಯಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಸಹಕರಿಸಬೇಕು. ಸುರಕ್ಷಿತ ಮಾರ್ಗದಲ್ಲಿ ಅವರನ್ನು ಸ್ವದೇಶಕ್ಕೆ ಕಳಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿಯವರೆಗೆ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳು ಪೋಲ್ಯಾಂಡ್, ರೊಮೇನಿಯಾ, ಹಂಗೇರಿ ಇನ್ನಿತರ ಗಡಿಭಾಗಗಳಿಗೆ ಸಮೀಪದಲ್ಲಿ ಇದ್ದವರೇ ಆಗಿದ್ದರು. ಆದರೆ ಕೀವ್​, ಖಾರ್ಕೀವ್​​ಗಳೆಲ್ಲ ಈ ಗಡಿ ಪ್ರದೇಶಗಳಿಂದ ತುಂಬ ದೂರದಲ್ಲಿದ್ದು, ಇವರಿಗೆ ರಷ್ಯಾ ಗಡಿಯೇ ಸಮೀಪ ಇದೆ. ಸದ್ಯ ರಷ್ಯಾ ಕಾರ್ಖೀವ್​​ನಲ್ಲಿ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಈ ನಿಟ್ಟಿನಲ್ಲಿ ಕೀವ್​, ಖಾರ್ಕಿವ್​​ನಲ್ಲಿರುವ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರವೂ ಕೂಡ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು