AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ಇಲ್ಲಿಯವರೆಗೆ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳು ಪೋಲ್ಯಾಂಡ್, ರೊಮೇನಿಯಾ, ಹಂಗೇರಿ ಇನ್ನಿತರ ಗಡಿಭಾಗಗಳಿಗೆ ಸಮೀಪದಲ್ಲಿ ಇದ್ದವರೇ ಆಗಿದ್ದರು. ಆದರೆ ಕೀವ್​, ಖಾರ್ಕೀವ್​​ಗಳೆಲ್ಲ ಈ ಗಡಿ ಪ್ರದೇಶಗಳಿಂದ ತುಂಬ ದೂರದಲ್ಲಿದ್ದು, ಇವರಿಗೆ ರಷ್ಯಾ ಗಡಿಯೇ ಸಮೀಪ ಇದೆ.

ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ
ಮೃತ ವಿದ್ಯಾರ್ಥಿ ನವೀನ್​
TV9 Web
| Edited By: |

Updated on: Mar 01, 2022 | 6:01 PM

Share

ಉಕ್ರೇನ್​​ನಲ್ಲಿದ್ದ ಭಾರತದ (ಕರ್ನಾಟಕದ ಹಾವೇರಿ) ವಿದ್ಯಾರ್ಥಿ ನವೀನ್ (Karnataka Student Died in Ukraine)​ ರಷ್ಯಾ ದಾಳಿಗೆ ಮೃತಪಡುತ್ತಿದ್ದಂತೆ ಕೇಂದ್ರ ಸರ್ಕಾರ ಫುಲ್​ ಅಲರ್ಟ್ ಆಗಿದೆ. ಈಗಾಗಲೇ ಆಪರೇಶನ್​ ಗಂಗಾ (Operation Ganga) ಮೂಲಕ ಅನೇಕ ವಿದ್ಯಾರ್ಥಿಗಳನ್ನು ಉಕ್ರೇನ್​ನಿಂದ ಭಾರತಕ್ಕೆ ಕರೆತರಲಾಗಿದೆ. ಆದರೆ ಇದೊಂದು ದುರಂತ ನಡೆದ ಬೆನ್ನಲ್ಲೇ ಮತ್ತಷ್ಟು ಕ್ರಮ ಕೈಗೊಳ್ಳಲು ಮುಂದಾಗಿದೆ. ಖಾರ್ಕೀವ್​​ನ ಬಂಕರ್​​ವೊಂದರಲ್ಲಿ ಆಶ್ರಯ ಪಡೆದಿದ್ದ ನವೀನ್​ ಇಂದು ಮುಂಜಾನೆ ಏನಾದರೂ ತಿನ್ನಲು ತರಬೇಕು ಎಂದು ಅಲ್ಲಿಯೇ ಸಮೀಪ ಇದ್ದ ಸೂಪರ್​​ ಮಾರ್ಕೆಟ್​ಗೆ ಹೋಗಿದ್ದಾಗ, ರಷ್ಯಾದ ಶೆಲ್​ ದಾಳಿಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈಗಾಗಲೇ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಇನ್ನು ಉಕ್ರೇನ್​​ನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಕೇಂದ್ರ ಸರ್ಕಾರ, ಭಾರತದಲ್ಲಿರುವ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚಿಸಿದೆ. ಅಷ್ಟೇ ಅಲ್ಲ, ರಷ್ಯಾ ಮತ್ತು ಉಕ್ರೇನ್​​ನಲ್ಲಿರುವ ಭಾರತದ ರಾಯಭಾರಿಗಳಾದ ಪವನ್​ ಕಪೂರ್​ ಮತ್ತು ಪಾರ್ಥ ಸತ್ಪತಿ ಆಯಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಸಹಕರಿಸಬೇಕು. ಸುರಕ್ಷಿತ ಮಾರ್ಗದಲ್ಲಿ ಅವರನ್ನು ಸ್ವದೇಶಕ್ಕೆ ಕಳಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿಯವರೆಗೆ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳು ಪೋಲ್ಯಾಂಡ್, ರೊಮೇನಿಯಾ, ಹಂಗೇರಿ ಇನ್ನಿತರ ಗಡಿಭಾಗಗಳಿಗೆ ಸಮೀಪದಲ್ಲಿ ಇದ್ದವರೇ ಆಗಿದ್ದರು. ಆದರೆ ಕೀವ್​, ಖಾರ್ಕೀವ್​​ಗಳೆಲ್ಲ ಈ ಗಡಿ ಪ್ರದೇಶಗಳಿಂದ ತುಂಬ ದೂರದಲ್ಲಿದ್ದು, ಇವರಿಗೆ ರಷ್ಯಾ ಗಡಿಯೇ ಸಮೀಪ ಇದೆ. ಸದ್ಯ ರಷ್ಯಾ ಕಾರ್ಖೀವ್​​ನಲ್ಲಿ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಈ ನಿಟ್ಟಿನಲ್ಲಿ ಕೀವ್​, ಖಾರ್ಕಿವ್​​ನಲ್ಲಿರುವ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರವೂ ಕೂಡ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು

Follow Us
Web contact
Web contact

TV9 Kannada

Read More
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​