AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ಇಲ್ಲಿಯವರೆಗೆ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳು ಪೋಲ್ಯಾಂಡ್, ರೊಮೇನಿಯಾ, ಹಂಗೇರಿ ಇನ್ನಿತರ ಗಡಿಭಾಗಗಳಿಗೆ ಸಮೀಪದಲ್ಲಿ ಇದ್ದವರೇ ಆಗಿದ್ದರು. ಆದರೆ ಕೀವ್​, ಖಾರ್ಕೀವ್​​ಗಳೆಲ್ಲ ಈ ಗಡಿ ಪ್ರದೇಶಗಳಿಂದ ತುಂಬ ದೂರದಲ್ಲಿದ್ದು, ಇವರಿಗೆ ರಷ್ಯಾ ಗಡಿಯೇ ಸಮೀಪ ಇದೆ.

ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ
ಮೃತ ವಿದ್ಯಾರ್ಥಿ ನವೀನ್​
TV9 Web
| Edited By: |

Updated on: Mar 01, 2022 | 6:01 PM

Share

ಉಕ್ರೇನ್​​ನಲ್ಲಿದ್ದ ಭಾರತದ (ಕರ್ನಾಟಕದ ಹಾವೇರಿ) ವಿದ್ಯಾರ್ಥಿ ನವೀನ್ (Karnataka Student Died in Ukraine)​ ರಷ್ಯಾ ದಾಳಿಗೆ ಮೃತಪಡುತ್ತಿದ್ದಂತೆ ಕೇಂದ್ರ ಸರ್ಕಾರ ಫುಲ್​ ಅಲರ್ಟ್ ಆಗಿದೆ. ಈಗಾಗಲೇ ಆಪರೇಶನ್​ ಗಂಗಾ (Operation Ganga) ಮೂಲಕ ಅನೇಕ ವಿದ್ಯಾರ್ಥಿಗಳನ್ನು ಉಕ್ರೇನ್​ನಿಂದ ಭಾರತಕ್ಕೆ ಕರೆತರಲಾಗಿದೆ. ಆದರೆ ಇದೊಂದು ದುರಂತ ನಡೆದ ಬೆನ್ನಲ್ಲೇ ಮತ್ತಷ್ಟು ಕ್ರಮ ಕೈಗೊಳ್ಳಲು ಮುಂದಾಗಿದೆ. ಖಾರ್ಕೀವ್​​ನ ಬಂಕರ್​​ವೊಂದರಲ್ಲಿ ಆಶ್ರಯ ಪಡೆದಿದ್ದ ನವೀನ್​ ಇಂದು ಮುಂಜಾನೆ ಏನಾದರೂ ತಿನ್ನಲು ತರಬೇಕು ಎಂದು ಅಲ್ಲಿಯೇ ಸಮೀಪ ಇದ್ದ ಸೂಪರ್​​ ಮಾರ್ಕೆಟ್​ಗೆ ಹೋಗಿದ್ದಾಗ, ರಷ್ಯಾದ ಶೆಲ್​ ದಾಳಿಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈಗಾಗಲೇ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಇನ್ನು ಉಕ್ರೇನ್​​ನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಕೇಂದ್ರ ಸರ್ಕಾರ, ಭಾರತದಲ್ಲಿರುವ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚಿಸಿದೆ. ಅಷ್ಟೇ ಅಲ್ಲ, ರಷ್ಯಾ ಮತ್ತು ಉಕ್ರೇನ್​​ನಲ್ಲಿರುವ ಭಾರತದ ರಾಯಭಾರಿಗಳಾದ ಪವನ್​ ಕಪೂರ್​ ಮತ್ತು ಪಾರ್ಥ ಸತ್ಪತಿ ಆಯಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಸಹಕರಿಸಬೇಕು. ಸುರಕ್ಷಿತ ಮಾರ್ಗದಲ್ಲಿ ಅವರನ್ನು ಸ್ವದೇಶಕ್ಕೆ ಕಳಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿಯವರೆಗೆ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳು ಪೋಲ್ಯಾಂಡ್, ರೊಮೇನಿಯಾ, ಹಂಗೇರಿ ಇನ್ನಿತರ ಗಡಿಭಾಗಗಳಿಗೆ ಸಮೀಪದಲ್ಲಿ ಇದ್ದವರೇ ಆಗಿದ್ದರು. ಆದರೆ ಕೀವ್​, ಖಾರ್ಕೀವ್​​ಗಳೆಲ್ಲ ಈ ಗಡಿ ಪ್ರದೇಶಗಳಿಂದ ತುಂಬ ದೂರದಲ್ಲಿದ್ದು, ಇವರಿಗೆ ರಷ್ಯಾ ಗಡಿಯೇ ಸಮೀಪ ಇದೆ. ಸದ್ಯ ರಷ್ಯಾ ಕಾರ್ಖೀವ್​​ನಲ್ಲಿ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಈ ನಿಟ್ಟಿನಲ್ಲಿ ಕೀವ್​, ಖಾರ್ಕಿವ್​​ನಲ್ಲಿರುವ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರವೂ ಕೂಡ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ