AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!

Rihanna tweet ಭಾರತದ ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ್ದರೂ ಭಾರತ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಆಕೆಯ ದೇಶಕ್ಕೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!
ಪಾಪ್​ ಗಾಯಕಿ ರಿಹಾನ್ನಾ
Skanda
|

Updated on:Feb 06, 2021 | 3:32 PM

Share

ಕೃಷಿ ಕಾಯ್ದೆ (Farm Laws) ತಿದ್ದುಪಡಿ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿರುವ ವಿದೇಶಿ ಪಾಪ್​ ಗಾಯಕಿ ರಿಹಾನ್ನಾ (Rihanna) ಅವರ ದೇಶ ಬಾರ್ಬಡೋಸ್​ಗೆ (Barbados) ಭಾರತ ಕೊರೊನಾ ಲಸಿಕೆ (Corona Vaccine) ವಿತರಿಸಿರುವುದು ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಭಾರತದ ಆಂತರಿಕ ವಿಚಾರದ ಬಗ್ಗೆ ಮೂಗು ತೂರಿಸಿದರೆಂಬ ಕಾರಣಕ್ಕೆ ರಿಹಾನ್ನಾ ಅವರು ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಅಲ್ಲದೇ, ಈ ಬಗ್ಗೆ ದೇಶದೊಳಗೂ ಪರ-ವಿರೋಧ ಚರ್ಚೆ ತಾರಕಕ್ಕೇರಿದ್ದು, ಬೇರೆ ಬೇರೆ ಆಯಾಮಗಳನ್ನೂ ಪಡೆದಿವೆ.

ಇಷ್ಟೆಲ್ಲಾ ಅಸಮಾಧಾನದ ನಡುವೆಯೂ ಭಾರತ ಬಾರ್ಬಡೋಸ್​ ದೇಶಕ್ಕೆ ಕೊರೊನಾ ಲಸಿಕೆ ರಫ್ತು ಮಾಡುವ ಮೂಲಕ ಮಾನವೀಯತೆಯೇ ದೊಡ್ಡದು ಎಂದು ಸಾರಿದೆ. ಇದೇ ಭಾರತದ ಸೌಂದರ್ಯ ಎಂದು ಅನೇಕರು ಹಾಡಿ ಹೊಗಳುತ್ತಿದ್ದಾರೆ. ಇನ್ನೊಂದೆಡೆ ಬಾರ್ಬಡೋಸ್​ ಪ್ರಧಾನ ಮಂತ್ರಿ ಮಿಯಾ ಅಮೋರ್ ಮೊಟ್ಲಿ ಕೂಡಾ ಭಾರತಕ್ಕೆ ಧನ್ಯವಾದ ತಿಳಿಸಿದ್ದು, ಕೊರೊನಾ ಲಸಿಕೆಯಂತಹ ಅತ್ಯಮೂಲ್ಯ ಉಡುಗೊರೆಗಾಗಿ ನಾವು ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ.

ಆಕ್ಸ್​ಫರ್ಡ್​ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿ, ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ತಯಾರಾದ ಕೊವಿಶೀಲ್ಡ್​ ಕೊರೊನಾ ಲಸಿಕೆಯನ್ನು ಬಾರ್ಬಡೋಸ್​ ದೇಶಕ್ಕೆ ಕಳುಹಿಸಿಕೊಟ್ಟಿದೆ. ಇತ್ತೀಚೆಗಷ್ಟೇ ಬಾರ್ಬಡೋಸ್​ ಮೂಲದ ಹಾಡುಗಾರ್ತಿ ರಿಹಾನ್ನಾ ಭಾರತದ ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ್ದರೂ ಭಾರತ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಆಕೆಯ ದೇಶಕ್ಕೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್

Published On - 12:01 pm, Sat, 6 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್