AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!

Rihanna tweet ಭಾರತದ ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ್ದರೂ ಭಾರತ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಆಕೆಯ ದೇಶಕ್ಕೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!
ಪಾಪ್​ ಗಾಯಕಿ ರಿಹಾನ್ನಾ
Skanda
|

Updated on:Feb 06, 2021 | 3:32 PM

Share

ಕೃಷಿ ಕಾಯ್ದೆ (Farm Laws) ತಿದ್ದುಪಡಿ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿರುವ ವಿದೇಶಿ ಪಾಪ್​ ಗಾಯಕಿ ರಿಹಾನ್ನಾ (Rihanna) ಅವರ ದೇಶ ಬಾರ್ಬಡೋಸ್​ಗೆ (Barbados) ಭಾರತ ಕೊರೊನಾ ಲಸಿಕೆ (Corona Vaccine) ವಿತರಿಸಿರುವುದು ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಭಾರತದ ಆಂತರಿಕ ವಿಚಾರದ ಬಗ್ಗೆ ಮೂಗು ತೂರಿಸಿದರೆಂಬ ಕಾರಣಕ್ಕೆ ರಿಹಾನ್ನಾ ಅವರು ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಅಲ್ಲದೇ, ಈ ಬಗ್ಗೆ ದೇಶದೊಳಗೂ ಪರ-ವಿರೋಧ ಚರ್ಚೆ ತಾರಕಕ್ಕೇರಿದ್ದು, ಬೇರೆ ಬೇರೆ ಆಯಾಮಗಳನ್ನೂ ಪಡೆದಿವೆ.

ಇಷ್ಟೆಲ್ಲಾ ಅಸಮಾಧಾನದ ನಡುವೆಯೂ ಭಾರತ ಬಾರ್ಬಡೋಸ್​ ದೇಶಕ್ಕೆ ಕೊರೊನಾ ಲಸಿಕೆ ರಫ್ತು ಮಾಡುವ ಮೂಲಕ ಮಾನವೀಯತೆಯೇ ದೊಡ್ಡದು ಎಂದು ಸಾರಿದೆ. ಇದೇ ಭಾರತದ ಸೌಂದರ್ಯ ಎಂದು ಅನೇಕರು ಹಾಡಿ ಹೊಗಳುತ್ತಿದ್ದಾರೆ. ಇನ್ನೊಂದೆಡೆ ಬಾರ್ಬಡೋಸ್​ ಪ್ರಧಾನ ಮಂತ್ರಿ ಮಿಯಾ ಅಮೋರ್ ಮೊಟ್ಲಿ ಕೂಡಾ ಭಾರತಕ್ಕೆ ಧನ್ಯವಾದ ತಿಳಿಸಿದ್ದು, ಕೊರೊನಾ ಲಸಿಕೆಯಂತಹ ಅತ್ಯಮೂಲ್ಯ ಉಡುಗೊರೆಗಾಗಿ ನಾವು ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ.

ಆಕ್ಸ್​ಫರ್ಡ್​ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿ, ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ತಯಾರಾದ ಕೊವಿಶೀಲ್ಡ್​ ಕೊರೊನಾ ಲಸಿಕೆಯನ್ನು ಬಾರ್ಬಡೋಸ್​ ದೇಶಕ್ಕೆ ಕಳುಹಿಸಿಕೊಟ್ಟಿದೆ. ಇತ್ತೀಚೆಗಷ್ಟೇ ಬಾರ್ಬಡೋಸ್​ ಮೂಲದ ಹಾಡುಗಾರ್ತಿ ರಿಹಾನ್ನಾ ಭಾರತದ ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ್ದರೂ ಭಾರತ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಆಕೆಯ ದೇಶಕ್ಕೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್

Published On - 12:01 pm, Sat, 6 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ