AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!

Rihanna tweet ಭಾರತದ ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ್ದರೂ ಭಾರತ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಆಕೆಯ ದೇಶಕ್ಕೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!
ಪಾಪ್​ ಗಾಯಕಿ ರಿಹಾನ್ನಾ
Follow us
Skanda
|

Updated on:Feb 06, 2021 | 3:32 PM

ಕೃಷಿ ಕಾಯ್ದೆ (Farm Laws) ತಿದ್ದುಪಡಿ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿರುವ ವಿದೇಶಿ ಪಾಪ್​ ಗಾಯಕಿ ರಿಹಾನ್ನಾ (Rihanna) ಅವರ ದೇಶ ಬಾರ್ಬಡೋಸ್​ಗೆ (Barbados) ಭಾರತ ಕೊರೊನಾ ಲಸಿಕೆ (Corona Vaccine) ವಿತರಿಸಿರುವುದು ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಭಾರತದ ಆಂತರಿಕ ವಿಚಾರದ ಬಗ್ಗೆ ಮೂಗು ತೂರಿಸಿದರೆಂಬ ಕಾರಣಕ್ಕೆ ರಿಹಾನ್ನಾ ಅವರು ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಅಲ್ಲದೇ, ಈ ಬಗ್ಗೆ ದೇಶದೊಳಗೂ ಪರ-ವಿರೋಧ ಚರ್ಚೆ ತಾರಕಕ್ಕೇರಿದ್ದು, ಬೇರೆ ಬೇರೆ ಆಯಾಮಗಳನ್ನೂ ಪಡೆದಿವೆ.

ಇಷ್ಟೆಲ್ಲಾ ಅಸಮಾಧಾನದ ನಡುವೆಯೂ ಭಾರತ ಬಾರ್ಬಡೋಸ್​ ದೇಶಕ್ಕೆ ಕೊರೊನಾ ಲಸಿಕೆ ರಫ್ತು ಮಾಡುವ ಮೂಲಕ ಮಾನವೀಯತೆಯೇ ದೊಡ್ಡದು ಎಂದು ಸಾರಿದೆ. ಇದೇ ಭಾರತದ ಸೌಂದರ್ಯ ಎಂದು ಅನೇಕರು ಹಾಡಿ ಹೊಗಳುತ್ತಿದ್ದಾರೆ. ಇನ್ನೊಂದೆಡೆ ಬಾರ್ಬಡೋಸ್​ ಪ್ರಧಾನ ಮಂತ್ರಿ ಮಿಯಾ ಅಮೋರ್ ಮೊಟ್ಲಿ ಕೂಡಾ ಭಾರತಕ್ಕೆ ಧನ್ಯವಾದ ತಿಳಿಸಿದ್ದು, ಕೊರೊನಾ ಲಸಿಕೆಯಂತಹ ಅತ್ಯಮೂಲ್ಯ ಉಡುಗೊರೆಗಾಗಿ ನಾವು ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ.

ಆಕ್ಸ್​ಫರ್ಡ್​ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿ, ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ತಯಾರಾದ ಕೊವಿಶೀಲ್ಡ್​ ಕೊರೊನಾ ಲಸಿಕೆಯನ್ನು ಬಾರ್ಬಡೋಸ್​ ದೇಶಕ್ಕೆ ಕಳುಹಿಸಿಕೊಟ್ಟಿದೆ. ಇತ್ತೀಚೆಗಷ್ಟೇ ಬಾರ್ಬಡೋಸ್​ ಮೂಲದ ಹಾಡುಗಾರ್ತಿ ರಿಹಾನ್ನಾ ಭಾರತದ ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ್ದರೂ ಭಾರತ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಆಕೆಯ ದೇಶಕ್ಕೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್

Published On - 12:01 pm, Sat, 6 February 21

ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ