Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ

India-Tanzania friendly run: ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗವಹಿಸಿದ್ದರು.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ
ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 31, 2023 | 8:23 PM

ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟ (India-Tanzania friendly run) ವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್, ಬಾಲಿವುಡ್ ನಟ ಮಿಲಿಂದ್ ಸೋಮನ್ ಅವರು ತಾಂಜಾನಿಯಾ ಮತ್ತು ಭಾರತ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದರು. 4 ಸಾವಿರಕ್ಕೂ ಹೆಚ್ಚು ಜನರು ಈ ಒಂದು ಸ್ನೇಹದ ಓಟದಲ್ಲಿ ಭಾಗವಹಿಸಿದ್ದರು.

ತಾಂಜಾನಿಯಾದ ಕಾನೂನು ಮತ್ತು ಸಾಂವಿಧಾನಿಕ ವ್ಯವಹಾರಗಳ ಸಚಿವ ಡಾ. ಪಿಂಡಿ ಚಾನಾ ಅವರು ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ್ದು, ಉಭಯ ದೇಶಗಳ ಈ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಆಯುಕ್ತೆ ಬಿನಯ ಎಸ್. ಪ್ರಧಾನ್​, ಜನರ ನಡುವಿನ ಸಂಬಂಧವನ್ನು ಉತ್ತೇಜಿಸಲು ಮತ್ತು ಫಿಟ್ ಇಂಡಿಯಾ ಆಂದೋಲನವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಉಪಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ತಾಂಜಾನಿಯಾದ ಜನರ ನಡುವೆ ಪರಸ್ಪರ ವ್ಯಾಪಾರ ಸಂಬಂಧ ಹೊಂದಿರುವ ಸುದೀರ್ಘ ಇತಿಹಾಸವಿದೆ. ಈ ವರ್ಷ ಭಾರತ ಮತ್ತು ತಾಂಜಾನಿಯಾ ನಡುವಿನ ಸಂಬಂಧಕ್ಕೆ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಾನಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್

ಕಳೆದ ತಿಂಗಳು ನವೆಂಬರ್‌ನಲ್ಲಿ, ಐಐಟಿ ಮದ್ರಾಸ್‌ನ ಮೊದಲ ಕಡಲಾಚೆಯ ಕ್ಯಾಂಪಸ್​ನ್ನು ಸಹ ಜಂಜಿಬಾರ್‌ನಲ್ಲಿ ಉದ್ಘಾಟಿಸಲಾಗಿತ್ತು. ಇದು ತಾಂಜಾನಿಯಾದೊಂದಿಗಿನ ಭಾರತದ ಸಂಬಂಧವನ್ನು ಮತ್ತು ಜಾಗತಿಕ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:22 pm, Sun, 31 December 23

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು