AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ

India-Tanzania friendly run: ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗವಹಿಸಿದ್ದರು.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ
ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್
TV9 Web
| Edited By: |

Updated on:Dec 31, 2023 | 8:23 PM

Share

ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟ (India-Tanzania friendly run) ವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್, ಬಾಲಿವುಡ್ ನಟ ಮಿಲಿಂದ್ ಸೋಮನ್ ಅವರು ತಾಂಜಾನಿಯಾ ಮತ್ತು ಭಾರತ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದರು. 4 ಸಾವಿರಕ್ಕೂ ಹೆಚ್ಚು ಜನರು ಈ ಒಂದು ಸ್ನೇಹದ ಓಟದಲ್ಲಿ ಭಾಗವಹಿಸಿದ್ದರು.

ತಾಂಜಾನಿಯಾದ ಕಾನೂನು ಮತ್ತು ಸಾಂವಿಧಾನಿಕ ವ್ಯವಹಾರಗಳ ಸಚಿವ ಡಾ. ಪಿಂಡಿ ಚಾನಾ ಅವರು ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ್ದು, ಉಭಯ ದೇಶಗಳ ಈ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಆಯುಕ್ತೆ ಬಿನಯ ಎಸ್. ಪ್ರಧಾನ್​, ಜನರ ನಡುವಿನ ಸಂಬಂಧವನ್ನು ಉತ್ತೇಜಿಸಲು ಮತ್ತು ಫಿಟ್ ಇಂಡಿಯಾ ಆಂದೋಲನವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಉಪಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ತಾಂಜಾನಿಯಾದ ಜನರ ನಡುವೆ ಪರಸ್ಪರ ವ್ಯಾಪಾರ ಸಂಬಂಧ ಹೊಂದಿರುವ ಸುದೀರ್ಘ ಇತಿಹಾಸವಿದೆ. ಈ ವರ್ಷ ಭಾರತ ಮತ್ತು ತಾಂಜಾನಿಯಾ ನಡುವಿನ ಸಂಬಂಧಕ್ಕೆ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಾನಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್

ಕಳೆದ ತಿಂಗಳು ನವೆಂಬರ್‌ನಲ್ಲಿ, ಐಐಟಿ ಮದ್ರಾಸ್‌ನ ಮೊದಲ ಕಡಲಾಚೆಯ ಕ್ಯಾಂಪಸ್​ನ್ನು ಸಹ ಜಂಜಿಬಾರ್‌ನಲ್ಲಿ ಉದ್ಘಾಟಿಸಲಾಗಿತ್ತು. ಇದು ತಾಂಜಾನಿಯಾದೊಂದಿಗಿನ ಭಾರತದ ಸಂಬಂಧವನ್ನು ಮತ್ತು ಜಾಗತಿಕ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:22 pm, Sun, 31 December 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್