AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ

India-Tanzania friendly run: ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗವಹಿಸಿದ್ದರು.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ
ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್
TV9 Web
| Edited By: |

Updated on:Dec 31, 2023 | 8:23 PM

Share

ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟ (India-Tanzania friendly run) ವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್, ಬಾಲಿವುಡ್ ನಟ ಮಿಲಿಂದ್ ಸೋಮನ್ ಅವರು ತಾಂಜಾನಿಯಾ ಮತ್ತು ಭಾರತ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದರು. 4 ಸಾವಿರಕ್ಕೂ ಹೆಚ್ಚು ಜನರು ಈ ಒಂದು ಸ್ನೇಹದ ಓಟದಲ್ಲಿ ಭಾಗವಹಿಸಿದ್ದರು.

ತಾಂಜಾನಿಯಾದ ಕಾನೂನು ಮತ್ತು ಸಾಂವಿಧಾನಿಕ ವ್ಯವಹಾರಗಳ ಸಚಿವ ಡಾ. ಪಿಂಡಿ ಚಾನಾ ಅವರು ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ್ದು, ಉಭಯ ದೇಶಗಳ ಈ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಆಯುಕ್ತೆ ಬಿನಯ ಎಸ್. ಪ್ರಧಾನ್​, ಜನರ ನಡುವಿನ ಸಂಬಂಧವನ್ನು ಉತ್ತೇಜಿಸಲು ಮತ್ತು ಫಿಟ್ ಇಂಡಿಯಾ ಆಂದೋಲನವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಉಪಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ತಾಂಜಾನಿಯಾದ ಜನರ ನಡುವೆ ಪರಸ್ಪರ ವ್ಯಾಪಾರ ಸಂಬಂಧ ಹೊಂದಿರುವ ಸುದೀರ್ಘ ಇತಿಹಾಸವಿದೆ. ಈ ವರ್ಷ ಭಾರತ ಮತ್ತು ತಾಂಜಾನಿಯಾ ನಡುವಿನ ಸಂಬಂಧಕ್ಕೆ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಾನಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್

ಕಳೆದ ತಿಂಗಳು ನವೆಂಬರ್‌ನಲ್ಲಿ, ಐಐಟಿ ಮದ್ರಾಸ್‌ನ ಮೊದಲ ಕಡಲಾಚೆಯ ಕ್ಯಾಂಪಸ್​ನ್ನು ಸಹ ಜಂಜಿಬಾರ್‌ನಲ್ಲಿ ಉದ್ಘಾಟಿಸಲಾಗಿತ್ತು. ಇದು ತಾಂಜಾನಿಯಾದೊಂದಿಗಿನ ಭಾರತದ ಸಂಬಂಧವನ್ನು ಮತ್ತು ಜಾಗತಿಕ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:22 pm, Sun, 31 December 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ