AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ

India-Tanzania friendly run: ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗವಹಿಸಿದ್ದರು.

ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್: ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಭಾಗಿ
ಭಾರತ-ತಾಂಜಾನಿಯಾ ಫ್ರೆಂಡ್ಲಿ ರನ್
TV9 Web
| Edited By: |

Updated on:Dec 31, 2023 | 8:23 PM

Share

ಆಫ್ರಿಕನ್ ದೇಶವಾದ ತಾಂಜಾನಿಯಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ತಾಂಜಾನಿಯಾದ ಸಂಸ್ಕೃತಿ, ಕ್ರೀಡೆ ಮತ್ತು ಕಲೆಗಳ ಸಚಿವಾಲಯವು ನಿನ್ನೆ 120 ಕಿಲೋಮೀಟರ್ ಭಾರತ ಮತ್ತು ತಾಂಜಾನಿಯಾ ಸ್ನೇಹ ಓಟ (India-Tanzania friendly run) ವನ್ನು ಆಯೋಜಿಸಲಾಗಿತ್ತು. ಭಾರತೀಯ ಫಿಟ್‌ನೆಸ್ ಐಕಾನ್, ಬಾಲಿವುಡ್ ನಟ ಮಿಲಿಂದ್ ಸೋಮನ್ ಅವರು ತಾಂಜಾನಿಯಾ ಮತ್ತು ಭಾರತ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದರು. 4 ಸಾವಿರಕ್ಕೂ ಹೆಚ್ಚು ಜನರು ಈ ಒಂದು ಸ್ನೇಹದ ಓಟದಲ್ಲಿ ಭಾಗವಹಿಸಿದ್ದರು.

ತಾಂಜಾನಿಯಾದ ಕಾನೂನು ಮತ್ತು ಸಾಂವಿಧಾನಿಕ ವ್ಯವಹಾರಗಳ ಸಚಿವ ಡಾ. ಪಿಂಡಿ ಚಾನಾ ಅವರು ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ್ದು, ಉಭಯ ದೇಶಗಳ ಈ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಆಯುಕ್ತೆ ಬಿನಯ ಎಸ್. ಪ್ರಧಾನ್​, ಜನರ ನಡುವಿನ ಸಂಬಂಧವನ್ನು ಉತ್ತೇಜಿಸಲು ಮತ್ತು ಫಿಟ್ ಇಂಡಿಯಾ ಆಂದೋಲನವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಉಪಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ತಾಂಜಾನಿಯಾದ ಜನರ ನಡುವೆ ಪರಸ್ಪರ ವ್ಯಾಪಾರ ಸಂಬಂಧ ಹೊಂದಿರುವ ಸುದೀರ್ಘ ಇತಿಹಾಸವಿದೆ. ಈ ವರ್ಷ ಭಾರತ ಮತ್ತು ತಾಂಜಾನಿಯಾ ನಡುವಿನ ಸಂಬಂಧಕ್ಕೆ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಾನಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್

ಕಳೆದ ತಿಂಗಳು ನವೆಂಬರ್‌ನಲ್ಲಿ, ಐಐಟಿ ಮದ್ರಾಸ್‌ನ ಮೊದಲ ಕಡಲಾಚೆಯ ಕ್ಯಾಂಪಸ್​ನ್ನು ಸಹ ಜಂಜಿಬಾರ್‌ನಲ್ಲಿ ಉದ್ಘಾಟಿಸಲಾಗಿತ್ತು. ಇದು ತಾಂಜಾನಿಯಾದೊಂದಿಗಿನ ಭಾರತದ ಸಂಬಂಧವನ್ನು ಮತ್ತು ಜಾಗತಿಕ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:22 pm, Sun, 31 December 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ