AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಲಿಕಾಂ ಕಂಪನಿಗಳಿಗೆ ಭಾರಿ ನಷ್ಟ, ಉಂಟಾಗಿದೆ ಮುಚ್ಚುವ ಭೀತಿ

ದೆಹಲಿ: ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಕಂಪನಿ ಕ್ರಾಂತಿಯನ್ನೇ ಮಾಡಿದ್ರೆ. ಇನ್ನುಳಿದ ಕಂಪನಿಗಳು ಮುಚ್ಚೋ ಭೀತಿಯಲ್ಲಿವೆ. ಅದ್ರಲ್ಲೂ ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಳೆದ ಕೆಲ ತಿಂಗಳಿಂದ ಭಾರಿ ನಷ್ಟಕ್ಕೀಡಾಗಿವೆ. ಎಷ್ಟರ ಮಟ್ಟಿಗೆ ಅಂದ್ರೆ, ಕೇಂದ್ರ ಸರ್ಕಾರ ನೆರವಿನ ಪ್ಯಾಕೇಜ್ ನೀಡಿದ್ರೆ ಮಾತ್ರ ವಹಿವಾಟು ಮುಂದುವರಿಸಲು ಸಾಧ್ಯ ಅಂತ ವೊಡಾಫೋನ್‌ ಐಡಿಯಾ ಅಸಹಾಯಕತೆ ಹೊರಹಾಕಿದೆ. ಎಷ್ಟು ನಷ್ಟ..? ಎಷ್ಟು ಬಾಕಿ..? ವೊಡಾಫೋನ್ ಐಡಿಯಾ ನೀಡಿರುವ ಮಾಹಿತಿ ಪ್ರಕಾರ ಕಂಪನಿಯು ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು […]

ಟೆಲಿಕಾಂ ಕಂಪನಿಗಳಿಗೆ ಭಾರಿ ನಷ್ಟ, ಉಂಟಾಗಿದೆ ಮುಚ್ಚುವ ಭೀತಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 16, 2019 | 10:49 PM

Share

ದೆಹಲಿ: ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಕಂಪನಿ ಕ್ರಾಂತಿಯನ್ನೇ ಮಾಡಿದ್ರೆ. ಇನ್ನುಳಿದ ಕಂಪನಿಗಳು ಮುಚ್ಚೋ ಭೀತಿಯಲ್ಲಿವೆ. ಅದ್ರಲ್ಲೂ ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಳೆದ ಕೆಲ ತಿಂಗಳಿಂದ ಭಾರಿ ನಷ್ಟಕ್ಕೀಡಾಗಿವೆ. ಎಷ್ಟರ ಮಟ್ಟಿಗೆ ಅಂದ್ರೆ, ಕೇಂದ್ರ ಸರ್ಕಾರ ನೆರವಿನ ಪ್ಯಾಕೇಜ್ ನೀಡಿದ್ರೆ ಮಾತ್ರ ವಹಿವಾಟು ಮುಂದುವರಿಸಲು ಸಾಧ್ಯ ಅಂತ ವೊಡಾಫೋನ್‌ ಐಡಿಯಾ ಅಸಹಾಯಕತೆ ಹೊರಹಾಕಿದೆ.

ಎಷ್ಟು ನಷ್ಟ..? ಎಷ್ಟು ಬಾಕಿ..? ವೊಡಾಫೋನ್ ಐಡಿಯಾ ನೀಡಿರುವ ಮಾಹಿತಿ ಪ್ರಕಾರ ಕಂಪನಿಯು ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ ಒಟ್ಟಾರೆ 50,922 ಕೋಟಿ ರೂಪಾಯಿ ನಷ್ಟ ಎದುರಿಸಿದೆ. ಇದೇ ಅವಧಿಯಲ್ಲಿ ವೊಡಾಫೋನ್‌ ಚಂದಾದಾರರ ಸಂಖ್ಯೆ 32 ಕೋಟಿಯಿಂದ 31.1 ಕೋಟಿಗೆ ಇಳಿಕೆಯಾಗಿದೆ.

ಇನ್ನು ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾಗಿರುವ ಏರ್​ಟೆಲ್ ಕಂಪನಿ ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ 23,045 ಕೋಟಿ ರೂಪಾಯಿ ನಿವ್ವಳ ನಷ್ಟ ಎದುರಿಸಿದೆ. ಇದಲ್ಲದೆ ದೂರಸಂಪರ್ಕ ಇಲಾಖೆಗೆ ಎರಡೂ ಕಂಪನಿಗಳು 92 ಸಾವಿರ ಕೋಟಿಗೂ ಹೆಚ್ಚು ಬಾಕಿ ನೀಡಬೇಕಾಗಿದೆ.

ಕೇಂದ್ರದ ಕೈಯಲ್ಲಿದೆ ಕಂಪನಿಗಳ ಅಳಿವು, ಉಳಿವು..! ಒಂದ್ಕಡೆ ಎರಡೂ ಕಂಪನಿಗಳ ನಷ್ಟವೇ 74 ಸಾವಿರ ಕೋಟಿ ದಾಟಿದೆ. ಇದ್ರ ಜೊತೆಗೆ ಗ್ರಾಸ್ ಅಡ್ಜಸ್ಟ್​ಮೆಂಟ್ ರೆವೆನ್ಯೂದಿಂದ 92 ಸಾವಿರ ಕೋಟಿ ರೂಪಾಯಿ ಬಾಕಿ ಮೊತ್ತ ನೀಡಬೇಕಿರೋದು ಟೆಲಿಕಾಂ ಕಂಪನಿಗಳ ಆರ್ಥಿಕ ಹೊರೆ ಹೆಚ್ಚಾಗುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳನ್ನ ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ‌ಕೇಂದ್ರ ಸರ್ಕಾರ ಸಮಿತಿಯೊಂದನ್ನ ರಚಿಸಿತ್ತು.

ಕಾಲ್ ದರ ನಿಗದಿಪಡಿಸಲು ಸಮಿತಿ ನೀಡಿರೋ ವರದಿಯನ್ನ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಜಿಯೋ ಹೊರತುಪಡಿಸಿ ಉಳಿದೆಲ್ಲಾ ಟೆಲಿಕಾಂ ಕಂಪನಿಗಳು ‌ನಷ್ಟದಲ್ಲಿವೆ‌‌. ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಟೆಲಿಕಾಂ ಕಂಪನಿಗಳ ನೆರವಿಗೆ ಕೇಂದ್ರದ ಮೋದಿ ಸರ್ಕಾರ ನಿಲ್ಲಬೇಕಿದೆ.

Published On - 9:05 pm, Sat, 16 November 19

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ