AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗ್ರಹಾಗಾರದಿಂದ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಲಿರುವ ಭಾರತ; ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಒತ್ತಡ ಹೇರಲು ಈ ಕ್ರಮ 

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತವಾಗಿದ್ದು, ಭಾರತ ತನ್ನ ಸಂಗ್ರಹದಲ್ಲಿರುವ 5 ಮಿಲಿಯನ್ ಬ್ಯಾರೆಲ್ ತೈಲವನ್ನು ಬಿಡುಗಡೆ ಮಾಡಲು ಯೋಜಿಸಿದೆ.

ಸಂಗ್ರಹಾಗಾರದಿಂದ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಲಿರುವ ಭಾರತ; ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಒತ್ತಡ ಹೇರಲು ಈ ಕ್ರಮ 
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 23, 2021 | 4:18 PM

Share

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 79 ಡಾಲರ್​​ಗೆ ಕುಸಿತವಾಗಿದೆ. ಇದರಿಂದ ತೈಲ ಸಂಗ್ರಹಾಗಾರಗಳಲ್ಲಿ ಇರುವ ಕಚ್ಚಾತೈಲ ಬಿಡುಗಡೆಯ ಬಗ್ಗೆ ದೇಶಗಳ ನಡುವೆ ಚರ್ಚೆ ನಡೆದಿದೆ. ಅಮೆರಿಕ, ಜಪಾನ್, ಭಾರತ, ಆಸ್ಟ್ರೇಲಿಯಾ ನಡುವೆ ಚರ್ಚೆ ನಡೆದಿದ್ದು, ಭಾರತ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಭಾರತದಲ್ಲಿ ಸದ್ಯ 26 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವಿದೆ. ‘ಭಾರತದಿಂದ ಸಂಗ್ರಹಾಗಾರದಲ್ಲಿರುವ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಿ ದೇಶದ ಜನರ ಬಳಕೆಗೆ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧರಿಸಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಒತ್ತಡ ಹೇರಲು ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಬಳಕೆಗೆ ಸಂಗ್ರಹಿಸಿದ್ದ ಕಚ್ಚಾ ತೈಲ ಬಳಕೆಗೆ ಬಿಡುಗಡೆ ಮಾಡಲಾಗಿದ್ದು, ಭಾರತ, ಆಮೆರಿಕಾ , ಜಪಾನ್, ದಕ್ಷಿಣ ಕೊರಿಯಾ ಸೇರಿದಂತೆ ಪ್ರಮುಖ ದೇಶಗಳು ಕೂಡ ಇದೇ ರೀತಿಯ ತೀರ್ಮಾನ ತೆಗೆದುಕೊಳ್ಳಲಿವೆ’ ಎಂದು ಮೂಲಗಳು ತಿಳಿಸಿವೆ.

ಸರ್ಕಾರಿ ಉನ್ನತ ಅಧಿಕಾರಿಯೋರ್ವರು ತಿಳಿಸಿರುವ ಮಾಹಿತಿಯಂತೆ, ಭಾರತವು ಯುಎಸ್, ಜಪಾನ್ ಮತ್ತು ಇತರ ಪ್ರಮುಖ ಆರ್ಥಿಕತೆಗಳೊಂದಿಗೆ ಬೆಲೆಯನ್ನು ಕಡಿಮೆಗೊಳಿಸಲು ತನ್ನ ತುರ್ತು ದಾಸ್ತಾನುಗಳಿಂದ ಸುಮಾರು 5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಬಿಡುಗಡೆ ಮಾಡಲು ಯೋಜಿಸಿದೆ. ಭಾರತವು ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಮೂರು ಸ್ಥಳಗಳಲ್ಲಿ ಭೂಗತ ಪ್ರದೇಶದಲ್ಲಿ ಸುಮಾರು 38 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಸಂಗ್ರಹಿಸುತ್ತದೆ. ಸದ್ಯ 26 ಮಿಲಿಯನ್ ಬ್ಯಾರೆಲ್ ಕಚ್ಚಾತೈಲವಿದೆ ಎನ್ನಲಾಗಿದ್ದು, ಅದರಲ್ಲಿ 5 ಮಿಲಿಯನ್ ಬ್ಯಾರೆಲ್ ಬಿಡುಗಡೆ ಮಾಡಲು ಯೋಜಿಸಲಾಗಿದೆ.

ಬಳಕೆಗೆ ಬಿಡುಗಡೆ ಮಾಡುವ ಸಂಗ್ರಹವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಗೆ ಮಾರಾಟ ಮಾಡಲಾಗುತ್ತದೆ. ಇವುಗಳನ್ನು ಆಯಕಟ್ಟಿನ ಮೀಸಲುಗಳಿಗೆ ಪೈಪ್‌ಲೈನ್ ಮೂಲಕ ಸಂಪರ್ಕಿಸಲಾಗಿದೆ. ನಾವು ಕೆಲ ಕಾಲದ ನಂತರ ಸಂಗ್ರಹದಲ್ಲಿರುವ ಹೆಚ್ಚಿನ ತೈಲವನ್ನು ಬಿಡುಗಡೆ ಮಾಡುವುದನ್ನು ನಿರೀಕ್ಷಿಸಬಹುದು ಎಂದು ಅಧಿಕಾರಿ ತಿಳಿಸಿದ್ದು, ಅಧಿಕೃತ ಪ್ರಕಟಣೆಯನ್ನು ಸದ್ಯದಲ್ಲೇ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:

ಪಿಎಂ ಮೋದಿ ಟೀಂನಿಂದ ರಾಜಕೀಯಕ್ಕೆ ಬರುವಂತೆ ಪುನೀತ್​ಗೆ ಬಂದಿತ್ತು ಆಹ್ವಾನ; ನಕ್ಕು ಎದ್ದು ಹೋಗಿದ್ದ ಅಪ್ಪು

ಲೈಮ್ ಸ್ಟೋನ್ ಗಣಿಗಾರಿಕೆಯಲ್ಲಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡ ಮೈ ಹೋಮ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್​

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ