AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗ್ರಹಾಗಾರದಿಂದ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಲಿರುವ ಭಾರತ; ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಒತ್ತಡ ಹೇರಲು ಈ ಕ್ರಮ 

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತವಾಗಿದ್ದು, ಭಾರತ ತನ್ನ ಸಂಗ್ರಹದಲ್ಲಿರುವ 5 ಮಿಲಿಯನ್ ಬ್ಯಾರೆಲ್ ತೈಲವನ್ನು ಬಿಡುಗಡೆ ಮಾಡಲು ಯೋಜಿಸಿದೆ.

ಸಂಗ್ರಹಾಗಾರದಿಂದ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಲಿರುವ ಭಾರತ; ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಒತ್ತಡ ಹೇರಲು ಈ ಕ್ರಮ 
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 23, 2021 | 4:18 PM

Share

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 79 ಡಾಲರ್​​ಗೆ ಕುಸಿತವಾಗಿದೆ. ಇದರಿಂದ ತೈಲ ಸಂಗ್ರಹಾಗಾರಗಳಲ್ಲಿ ಇರುವ ಕಚ್ಚಾತೈಲ ಬಿಡುಗಡೆಯ ಬಗ್ಗೆ ದೇಶಗಳ ನಡುವೆ ಚರ್ಚೆ ನಡೆದಿದೆ. ಅಮೆರಿಕ, ಜಪಾನ್, ಭಾರತ, ಆಸ್ಟ್ರೇಲಿಯಾ ನಡುವೆ ಚರ್ಚೆ ನಡೆದಿದ್ದು, ಭಾರತ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಭಾರತದಲ್ಲಿ ಸದ್ಯ 26 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವಿದೆ. ‘ಭಾರತದಿಂದ ಸಂಗ್ರಹಾಗಾರದಲ್ಲಿರುವ 5 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಬಿಡುಗಡೆ ಮಾಡಿ ದೇಶದ ಜನರ ಬಳಕೆಗೆ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧರಿಸಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಒತ್ತಡ ಹೇರಲು ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಬಳಕೆಗೆ ಸಂಗ್ರಹಿಸಿದ್ದ ಕಚ್ಚಾ ತೈಲ ಬಳಕೆಗೆ ಬಿಡುಗಡೆ ಮಾಡಲಾಗಿದ್ದು, ಭಾರತ, ಆಮೆರಿಕಾ , ಜಪಾನ್, ದಕ್ಷಿಣ ಕೊರಿಯಾ ಸೇರಿದಂತೆ ಪ್ರಮುಖ ದೇಶಗಳು ಕೂಡ ಇದೇ ರೀತಿಯ ತೀರ್ಮಾನ ತೆಗೆದುಕೊಳ್ಳಲಿವೆ’ ಎಂದು ಮೂಲಗಳು ತಿಳಿಸಿವೆ.

ಸರ್ಕಾರಿ ಉನ್ನತ ಅಧಿಕಾರಿಯೋರ್ವರು ತಿಳಿಸಿರುವ ಮಾಹಿತಿಯಂತೆ, ಭಾರತವು ಯುಎಸ್, ಜಪಾನ್ ಮತ್ತು ಇತರ ಪ್ರಮುಖ ಆರ್ಥಿಕತೆಗಳೊಂದಿಗೆ ಬೆಲೆಯನ್ನು ಕಡಿಮೆಗೊಳಿಸಲು ತನ್ನ ತುರ್ತು ದಾಸ್ತಾನುಗಳಿಂದ ಸುಮಾರು 5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಬಿಡುಗಡೆ ಮಾಡಲು ಯೋಜಿಸಿದೆ. ಭಾರತವು ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಮೂರು ಸ್ಥಳಗಳಲ್ಲಿ ಭೂಗತ ಪ್ರದೇಶದಲ್ಲಿ ಸುಮಾರು 38 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಸಂಗ್ರಹಿಸುತ್ತದೆ. ಸದ್ಯ 26 ಮಿಲಿಯನ್ ಬ್ಯಾರೆಲ್ ಕಚ್ಚಾತೈಲವಿದೆ ಎನ್ನಲಾಗಿದ್ದು, ಅದರಲ್ಲಿ 5 ಮಿಲಿಯನ್ ಬ್ಯಾರೆಲ್ ಬಿಡುಗಡೆ ಮಾಡಲು ಯೋಜಿಸಲಾಗಿದೆ.

ಬಳಕೆಗೆ ಬಿಡುಗಡೆ ಮಾಡುವ ಸಂಗ್ರಹವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಗೆ ಮಾರಾಟ ಮಾಡಲಾಗುತ್ತದೆ. ಇವುಗಳನ್ನು ಆಯಕಟ್ಟಿನ ಮೀಸಲುಗಳಿಗೆ ಪೈಪ್‌ಲೈನ್ ಮೂಲಕ ಸಂಪರ್ಕಿಸಲಾಗಿದೆ. ನಾವು ಕೆಲ ಕಾಲದ ನಂತರ ಸಂಗ್ರಹದಲ್ಲಿರುವ ಹೆಚ್ಚಿನ ತೈಲವನ್ನು ಬಿಡುಗಡೆ ಮಾಡುವುದನ್ನು ನಿರೀಕ್ಷಿಸಬಹುದು ಎಂದು ಅಧಿಕಾರಿ ತಿಳಿಸಿದ್ದು, ಅಧಿಕೃತ ಪ್ರಕಟಣೆಯನ್ನು ಸದ್ಯದಲ್ಲೇ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:

ಪಿಎಂ ಮೋದಿ ಟೀಂನಿಂದ ರಾಜಕೀಯಕ್ಕೆ ಬರುವಂತೆ ಪುನೀತ್​ಗೆ ಬಂದಿತ್ತು ಆಹ್ವಾನ; ನಕ್ಕು ಎದ್ದು ಹೋಗಿದ್ದ ಅಪ್ಪು

ಲೈಮ್ ಸ್ಟೋನ್ ಗಣಿಗಾರಿಕೆಯಲ್ಲಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡ ಮೈ ಹೋಮ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್​

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್