AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccination ದೇಶದಲ್ಲಿ 12-14 ವಯಸ್ಸಿನ ಎಲ್ಲಾ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಿಕೆ ಬುಧವಾರ ಆರಂಭ

ದೇಶದಲ್ಲಿ 12-14 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಿಕೆ ಬುಧವಾರದಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

Covid Vaccination ದೇಶದಲ್ಲಿ 12-14 ವಯಸ್ಸಿನ ಎಲ್ಲಾ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಿಕೆ ಬುಧವಾರ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Mar 14, 2022 | 2:36 PM

Share

ದೆಹಲಿ: ದೇಶದಲ್ಲಿ 12-14 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆ (Covid Vaccine) ನೀಡಿಕೆ ಮಾರ್ಚ್ 16 ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಹೇಳಿದ್ದಾರೆ. “ಅಲ್ಲದೆ, 60 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಈಗ ಮುನ್ನೆಚ್ಚರಿಕೆ ಡೋಸ್ ಪಡೆಯಲು ಸಾಧ್ಯವಾಗುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಹಿಂದಿಯಲ್ಲಿ ಟ್ವೀಟ್‌ ಮಾಡಿದ ಸಚಿವರು “ಮಕ್ಕಳು ಸುರಕ್ಷಿತವಾಗಿದ್ದರೆ ದೇಶ ಸುರಕ್ಷಿತವಾಗಿರುತ್ತದೆ. ಮಾರ್ಚ್ 16 ರಿಂದ 12 ರಿಂದ 13 ಮತ್ತು 13 ರಿಂದ 14 ರ ವಯೋಮಾನದ ಮಕ್ಕಳಿಗೆ ಕೊವಿಡ್ ಲಸಿಕೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಅಲ್ಲದೆ 60+ ವರ್ಷ ವಯಸ್ಸಿನ ಪ್ರತಿಯೊಬ್ಬರೂ ಈಗ ಮುನ್ನೆಚ್ಚರಿಕೆ ಪ್ರಮಾಣವನ್ನು ಪಡೆಯಲು ಸಾಧ್ಯವಾಗುತ್ತದೆ. ಮಕ್ಕಳ ಕುಟುಂಬಗಳು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಭಾರತವು ಜನವರಿ 3 ರಿಂದ 15-18 ವರ್ಷ ವಯಸ್ಸಿನವರಿಗೆ ಲಸಿಕೆ ಹಾಕಲು ಪ್ರಾರಂಭಿಸಿತು. ಇಲ್ಲಿಯವರೆಗೆ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆ ನೀಡಲಾಗುತ್ತಿತ್ತು. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ 15 ರಿಂದ 18 ವರ್ಷ ವಯಸ್ಸಿನ 3,37,70,605 ಮಕ್ಕಳು ಎರಡನೇ ಡೋಸ್ ಪಡೆದಿದ್ದಾರೆ.

ಕಳೆದ ವಾರ ಬಯಾಲಾಜಿಕಲ್ ಇ ತನ್ನ ಕೊವಿಡ್ -19 ಲಸಿಕೆ ಕಾರ್ಬೆವಾಕ್ಸ್‌ಗಾಗಿ 5-12 ವರ್ಷ ವಯಸ್ಸಿನವರಿಗೆ ತುರ್ತು ಬಳಕೆಯ ಅಧಿಕಾರಕ್ಕಾಗಿ (ಇಯುಎ) ಅರ್ಜಿ ಸಲ್ಲಿಸಿತ್ತು. ಫಾರ್ಮಾ ಕಂಪನಿಯು ವಿಷಯ ತಜ್ಞರ ಸಮಿತಿಗೆ ಡೇಟಾವನ್ನು ಸಲ್ಲಿಸಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ಮಾರ್ಚ್ 9 ರಂದು ವರದಿ ಮಾಡಿತ್ತು.

ಕೊವಿಡ್-19 ವಿರುದ್ಧ ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಿಸೆಪ್ಟರ್ ಬೈಂಡಿಂಗ್ ಡೊಮೈನ್ (RBD) ಪ್ರೋಟೀನ್ ಸಬ್ ಯೂನಿಟ್ ಲಸಿಕೆಯಾದ Corbevax 12 ರಿಂದ 18 ವರ್ಷ ವಯಸ್ಸಿನವರಿಗೆ ಭಾರತದ ಔಷಧ ನಿಯಂತ್ರಕದಿಂದ ತುರ್ತು ಬಳಕೆಯ ಅಧಿಕಾರವನ್ನು (EUA) ಪಡೆದುಕೊಂಡಿದೆ.

ಇದನ್ನೂ ಓದಿ:ಚೀನಾದಲ್ಲಿ ಮತ್ತೆ ಕೊವಿಡ್: ದೊಡ್ಡ ನಗರಗಳಲ್ಲಿ ಮತ್ತೆ ಲಾಕ್​ಡೌನ್ ಘೋಷಣೆ, ವಿಶ್ವದಲ್ಲಿ ಮರುಕಳಿಸಿದ ಆತಂಕ

Published On - 2:05 pm, Mon, 14 March 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!