AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 5 ದಿನಗಳಲ್ಲಿ ತಾಪಮಾನ ಏರಿಕೆಗೆ ಭಾರತ ಸಾಕ್ಷಿಯಾಗಲಿದೆ- ಭಾರತೀಯ ಹವಾಮಾನ ಇಲಾಖೆ

ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ಏಪ್ರಿಲ್‌ನಿಂದ ಜೂನ್‌ವರೆಗೆ ದೇಶದ ಹಲವಾರು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಮುಂದಿನ 5 ದಿನಗಳಲ್ಲಿ ತಾಪಮಾನ ಏರಿಕೆಗೆ ಭಾರತ ಸಾಕ್ಷಿಯಾಗಲಿದೆ- ಭಾರತೀಯ ಹವಾಮಾನ ಇಲಾಖೆ
India To Witness Rise In TemperatureImage Credit source: NDTV
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:Apr 08, 2023 | 5:53 PM

Share

ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು (Temperature) ಕ್ರಮೇಣವಾಗಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಂದು ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ (Thunderstorm) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವಾರು ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

“ಮುಂದಿನ 2 ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ನಂತರ ಕಡಿಮೆಯಾಗುತ್ತದೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಮಹಾರಾಷ್ಟ್ರ, ಗುಜರಾತ್, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಗಣನೀಯವಾಗಿ ಹೆಚ್ಚಿನ ಸಂಖ್ಯೆಯ ಶಾಖದ ದಿನಗಳನ್ನು ಊಹಿಸಲಾಗಿದೆ” ಎಂದು IMD ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮಹಾಪಾತ್ರ ಹೇಳಿದ್ದಾರೆ.

ಹವಾಮಾನ ಬದಲಾವಣೆಯು ಜಾಗತಿಕ ತಾಪಮಾನವನ್ನು ಹೆಚ್ಚಿಸುತ್ತಿದೆ ಮತ್ತು ತೀವ್ರ ಹವಾಮಾನಾಡಿಂದ ಆಗುವ ತೊಂದರೆಗಳು ಹೆಚ್ಚು ಸಂಭವಿಸಬಹುದು ಎಂದು ವರದಿಗಳು ತಿಳಿಸಿವೆ.

IMD ಪ್ರಕಾರ, 1901 ರಲ್ಲಿ ರೆಕಾರ್ಡ್-ಕೀಪಿಂಗ್ ಪ್ರಾರಂಭವಾದಾಗಿನಿಂದ ಭಾರತವು ಈ ವರ್ಷ ದಾಖಲೆ ತಾಪಮಾನವನ್ನು ಫೆಬ್ರವರಿಯಲ್ಲಿ ದಾಖಲಿಸಿದೆ. ಆದಾಗ್ಯೂ, ಪ್ರತಿಕೂಲ ವಾತಾವರಣದಿಂದ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾದ್ದರಿಂದ, ಇದು ಮಾರ್ಚ್‌ನಲ್ಲಿ ತಾಪಮಾನವನ್ನು ನಿಯಂತ್ರಣದಲ್ಲಿ ಇರಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಜನ ಸಾವು

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ, ಗುಡುಗು, ಆಲಿಕಲ್ಲು ಮಳೆ ಮತ್ತು ಮಿಂಚಿನ ಹೊಡೆತಗಳು ಬೆಳೆಗಳನ್ನು ಹಾನಿಗೊಳಿಸಿವೆ.

Published On - 5:52 pm, Sat, 8 April 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು