AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ ಘೋಷಿಸಲು ರಷ್ಯಾ-ಉಕ್ರೇನ್​ಗೆ ಒತ್ತಾಯಿಸಿದ ಭಾರತ; ವಿದ್ಯಾರ್ಥಿಗಳ ಸ್ಥಳಾಂತರಕ್ಕಾಗಿ ಈ ಬೇಡಿಕೆ

ಖಾರ್ಕೀವ್​ ಮತ್ತು ಸುಮಿ ವಲಯಗಳಲ್ಲಿ ಸಿಲುಕಿರುವ ಇನ್ನೂ ಸುಮಾರು 3 ಸಾವಿರ ಭಾರತೀಯ ನಾಗರಿಕರನ್ನು ತುರ್ತಾಗಿ ಸುರಕ್ಷಿತಗೊಳಿಸಬೇಕಾಗಿದೆ. ಆದರೆ ಇಲ್ಲಿ ನಿರಂತರವಾಗಿ ಶೆಲ್​ ದಾಳಿ, ಬಾಂಬ್​ ಸ್ಫೋಟಗಳು ಉಂಟಾಗುತ್ತಿದ್ದು, ವಿದ್ಯಾರ್ಥಿಗಳು ಹೊರಬೀಳುವುದೇ ಕಷ್ಟವಾಗಿದೆ.

ಕದನ ವಿರಾಮ ಘೋಷಿಸಲು ರಷ್ಯಾ-ಉಕ್ರೇನ್​ಗೆ ಒತ್ತಾಯಿಸಿದ ಭಾರತ; ವಿದ್ಯಾರ್ಥಿಗಳ  ಸ್ಥಳಾಂತರಕ್ಕಾಗಿ ಈ ಬೇಡಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Mar 05, 2022 | 5:39 PM

Share

ಯುದ್ಧ ಬೇಡ ಶಾಂತಿ ಮಾತುಕತೆ ಮೂಲಕ ಬಿಕ್ಕಟ್ಟು ಪರಿಹರಿಸಿಕೊಳ್ಳಿ ಎಂದು ರಷ್ಯಾ-ಉಕ್ರೇನ್​​ (Russia-Ukraine)ಗಳಿಗೆ ಭಾರತ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಈಗಂತೂ ಪರಿಸ್ಥಿತಿ ಕೈಮೀರಿ ಹೋಗಿದೆ. ರಷ್ಯಾ ತನ್ನ ನೆರೆರಾಷ್ಟ್ರ ಉಕ್ರೇನ್​ ಮೇಲೆ ದಾಳಿ ನಡೆಸಿ 10ದಿನಗಳೇ ಕಳೆದು ಹೋಗಿವೆ. ಈ ಮಧ್ಯೆ ಭಾರತ, ಕದನ ವಿರಾಮ ಘೋಷಿಸುವಂತೆ ರಷ್ಯಾ ಮತ್ತು ಉಕ್ರೇನ್​ಗಳಿಗೆ ಒತ್ತಾಯಿಸಿದೆ. ಯುದ್ಧ ತೀವ್ರವಾಗಿರುವ ಅದರಲ್ಲೂ ಖಾರ್ಕೀವ್​ ಮತ್ತು ಸುಮಿ ವಲಯಗಳಲ್ಲಿ ಸಿಲುಕಿರುವ ಇನ್ನೂ ಸುಮಾರು 3 ಸಾವಿರ ಭಾರತೀಯ ನಾಗರಿಕರನ್ನು ತುರ್ತಾಗಿ ಸುರಕ್ಷಿತಗೊಳಿಸಬೇಕಾಗಿದೆ. ಆದರೆ ಇಲ್ಲಿ ನಿರಂತರವಾಗಿ ಶೆಲ್​ ದಾಳಿ, ಬಾಂಬ್​ ಸ್ಫೋಟಗಳು ಉಂಟಾಗುತ್ತಿದ್ದು, ವಿದ್ಯಾರ್ಥಿಗಳು ಹೊರಬೀಳುವುದೇ ಕಷ್ಟವಾಗಿದೆ. ನೀವು ಈ ಸ್ಥಳಗಳಲ್ಲಿ ಕದನ ವಿರಾಮ ಘೋಷಿಸಿದರೆ, ನಮಗೆ ಸ್ಥಳಾಂತರ ಕಾರ್ಯ ಸುಲಭವಾಗುತ್ತದೆ ಎಂದು ಭಾರತ ಹೇಳಿದ್ದಾಗಿ ವರದಿಯಾಗಿದೆ.

ಉಕ್ರೇನ್​ನ ಸುಮಿ   ಯುದ್ಧವಲಯದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಮಗೆ ಕಾಳಜಿಯಿದೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಯುದ್ಧ ತೀವ್ರತೆ ಹೆಚ್ಚಾಗಿರುವ ಸುಮಿಯಲ್ಲಿ ಇರುವ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಹೊರಬೀಳಬೇಡಿ. ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಶೆಲ್ಟರ್​​ಗಳ ಒಳಗೇ ಇರಿ. ಎಲ್ಲರನ್ನೂ ರಕ್ಷಣೆ ಮಾಡುವ ಸಲುವಾಗಿ, ಕದನ ವಿರಾಮ ಘೋಷಿಸಿ ಸುರಕ್ಷಿತ ಕಾರಿಡಾರ್​ ಸೃಷ್ಟಿಸಿಕೊಡುವಂತೆ ಭಾರತ ರಷ್ಯಾ ಮತ್ತು ಉಕ್ರೇನ್​ಗೆ ನಾವು ಒತ್ತಾಯಿಸಿದ್ದೇವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಹಾಗೇ, ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಘರ್ಷಣೆಯ ನಡುವೆ, ಭಾರತೀಯ ವಿದ್ಯಾರ್ಥಿಗಳು ಮತ್ತು ಉಕ್ರೇನ್​ನಲ್ಲಿ ಸಿಲುಕಿರುವ ಇತರ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ಪೂರ್ವ ಉಕ್ರೇನ್ ನಗರಗಳಾದ ಖಾರ್ಕಿವ್ ಮತ್ತು ಸುಮಿಗೆ ಹೋಗಲು ರಷ್ಯಾದ ಬಸ್​ಗಳು ಕ್ರಾಸಿಂಗ್ ಪಾಯಿಂಟ್‌ಗಳಲ್ಲಿ ಸಿದ್ಧವಾಗಿವೆ ಎಂದು ರಷ್ಯಾ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದೆ. ರಷ್ಯಾದ ಬೆಲ್ಗೊರೊಡ್ ಪ್ರದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಇತರ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ಖಾರ್ಕಿವ್ ಮತ್ತು ಸುಮಿಗೆ ಹೋಗಲು ಸಿದ್ಧವಾಗಿರುವ ‘ನೆಖೋಟೀವ್ಕಾ’ ಮತ್ತು ‘ಸುಡ್ಜಾ’ ಕ್ರಾಸಿಂಗ್ ಪಾಯಿಂಟ್‌ಗಳಲ್ಲಿ ಇಂದು ಬೆಳಿಗ್ಗೆ 6ರಿಂದ 130 ಆರಾಮದಾಯಕ ಬಸ್‌ಗಳು ಕಾಯುತ್ತಿವೆ.

ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಮಾಡಿದ್ದನ್ನೇ ಪ್ರತಿಪಕ್ಷಗಳು ಉಕ್ರೇನ್​ ವಿಚಾರದಲ್ಲೂ ಮಾಡುತ್ತಿವೆ: ಪ್ರಧಾನಿ ನರೇಂದ್ರ ಮೋದಿ

Published On - 9:19 am, Sat, 5 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ