AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ

ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ
ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಮ್ಮಿಟ್​​
guruganesh bhat
| Edited By: |

Updated on: Dec 21, 2020 | 8:32 PM

Share

ದೆಹಲಿ: ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಭೆಯಲ್ಲಿ ಮೋದಿ ಮಾತನಾಡಿದರು.  ಸಮ್ಮಿಟ್​ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದಿನ ವರ್ಷ ಭಾರತ ಮತ್ತು ವಿಯೆಟ್ನಾಂ ಎರಡೂ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾಗಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಮ್ಮ ಸಹಭಾಗಿತ್ವ ಹೆಚ್ಚಬೇಕಿದೆ. ವಿಜ್ಞಾನ, ಅಣುಶಕ್ತಿ ಮತ್ತು ನವೀಕರಿಸಬಹುದಾದ ಇಂಧನ, ಪೆಟ್ರೋಕೆಮಿಕಲ್, ಭದ್ರತೆ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದಂತೆ 7 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಜೊತೆಗೆ, ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಬೆಳೆಸಲು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಎಂದು ಅವರು ತಿಳಿಸಿದರು.

ಧನ್ಯವಾದ ಅರ್ಪಿಸಿದ ವಿಯೆಟ್ನಾಂ ಪ್ರಧಾನಿ ನ್ಗುಯೇನ್ ಕ್ಸುವಾನ್ ಫುಕ್ ಭಾರತ ಮತ್ತು ವಿಯೆಟ್ನಾಂ ನಡುವೆ ಸಂಬಂಧ ವೃದ್ಧಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೀನಾದಿಂದ ಉಪಟಳ ಎದುರಿಸುತ್ತಿರುವ ಹೊತ್ತಲ್ಲೇ ಭಾರತ ಮತ್ತು ವಿಯೆಟ್ನಾಂಗಳ ನಡುವಿನ ಒಪ್ಪಂದಗಳು ರಾಜತಾಂತ್ರಿಕವಾಗಿ ಮಹತ್ವ ಪಡೆದಿವೆ. ಎರಡು ದೇಶಗಳು ಚೀನಾದಿಂದ ಗಡಿ ತಕರಾರು ಅನುಭವಿಸುತ್ತಿರುವಾಗ ಈ ಒಪ್ಪಂದಗಳು ಏರ್ಪಟ್ಟಿರುವುದು ಹೆಚ್ಚಿನ ನಿರೀಕ್ಷೆ ಮೂಡಿಸಿವೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!