AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ

ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ
ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಮ್ಮಿಟ್​​
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 21, 2020 | 8:32 PM

Share

ದೆಹಲಿ: ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಭೆಯಲ್ಲಿ ಮೋದಿ ಮಾತನಾಡಿದರು.  ಸಮ್ಮಿಟ್​ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದಿನ ವರ್ಷ ಭಾರತ ಮತ್ತು ವಿಯೆಟ್ನಾಂ ಎರಡೂ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾಗಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಮ್ಮ ಸಹಭಾಗಿತ್ವ ಹೆಚ್ಚಬೇಕಿದೆ. ವಿಜ್ಞಾನ, ಅಣುಶಕ್ತಿ ಮತ್ತು ನವೀಕರಿಸಬಹುದಾದ ಇಂಧನ, ಪೆಟ್ರೋಕೆಮಿಕಲ್, ಭದ್ರತೆ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದಂತೆ 7 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಜೊತೆಗೆ, ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಬೆಳೆಸಲು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಎಂದು ಅವರು ತಿಳಿಸಿದರು.

ಧನ್ಯವಾದ ಅರ್ಪಿಸಿದ ವಿಯೆಟ್ನಾಂ ಪ್ರಧಾನಿ ನ್ಗುಯೇನ್ ಕ್ಸುವಾನ್ ಫುಕ್ ಭಾರತ ಮತ್ತು ವಿಯೆಟ್ನಾಂ ನಡುವೆ ಸಂಬಂಧ ವೃದ್ಧಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೀನಾದಿಂದ ಉಪಟಳ ಎದುರಿಸುತ್ತಿರುವ ಹೊತ್ತಲ್ಲೇ ಭಾರತ ಮತ್ತು ವಿಯೆಟ್ನಾಂಗಳ ನಡುವಿನ ಒಪ್ಪಂದಗಳು ರಾಜತಾಂತ್ರಿಕವಾಗಿ ಮಹತ್ವ ಪಡೆದಿವೆ. ಎರಡು ದೇಶಗಳು ಚೀನಾದಿಂದ ಗಡಿ ತಕರಾರು ಅನುಭವಿಸುತ್ತಿರುವಾಗ ಈ ಒಪ್ಪಂದಗಳು ಏರ್ಪಟ್ಟಿರುವುದು ಹೆಚ್ಚಿನ ನಿರೀಕ್ಷೆ ಮೂಡಿಸಿವೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್