AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ಜಮ್ಮು-ಕಾಶ್ಮೀರದಲ್ಲಿ ಮಳೆ ಸಾಧ್ಯತೆ, ಕರ್ನಾಟಕ, ದೆಹಲಿ, ಪಶ್ಚಿಮ ಬಂಗಾಳದಲ್ಲಿ ವಿಪರೀತ ಚಳಿ

ದೇಶದ ಬಹುತೇಕ ರಾಜ್ಯಗಳಲ್ಲಿ ಮತ್ತೆ ಚಳಿ ಶುರುವಾಗಿದೆ. ದೆಹಲಿ, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ವಿಪರೀತ ಚಳಿ ಇದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆ ಇದೆ.

India Weather Updates: ಜಮ್ಮು-ಕಾಶ್ಮೀರದಲ್ಲಿ ಮಳೆ ಸಾಧ್ಯತೆ, ಕರ್ನಾಟಕ, ದೆಹಲಿ, ಪಶ್ಚಿಮ ಬಂಗಾಳದಲ್ಲಿ ವಿಪರೀತ ಚಳಿ
ಜಮ್ಮು ಮತ್ತು ಕಾಶ್ಮೀರ
TV9 Web
| Edited By: |

Updated on: Feb 17, 2023 | 8:29 AM

Share

ದೇಶದ ಬಹುತೇಕ ರಾಜ್ಯಗಳಲ್ಲಿ ಮತ್ತೆ ಚಳಿ ಶುರುವಾಗಿದೆ. ದೆಹಲಿ, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ವಿಪರೀತ ಚಳಿ ಇದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಅರುಣಾಚಲಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ.

ಬಯಲು ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಫೆ.18ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾಗಶಃ ಮೋಡ ಹಾಗೂ ಶುಷ್ಕ ವಾತಾವರಣವನ್ನು ನಿರೀಕ್ಷಿಸಲಾಗಿದೆ. ದೆಹಲಿಯಲ್ಲಿ ಬಿಸಿಲಿನ ತಾಪ ತುಸು ಹೆಚ್ಚಿದೆ, ಕನಿಷ್ಠ ತಾಪಮಾನ ಮೂರು ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್​ ಇದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿರಲಿದೆ, ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.

ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!