India Weather Updates: ಉತ್ತರಪ್ರದೇಶದಲ್ಲಿ ಮಂಜು, ಪಂಜಾಬ್ನಲ್ಲಿ ಮಳೆ ಸಾಧ್ಯತೆ, ಉತ್ತರ ಭಾರತದಲ್ಲಿ ತಾಪಮಾನ ಮತ್ತೆ ಕುಸಿಯುವ ನಿರೀಕ್ಷೆ
ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ಸುಧಾರಿಸುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಚಳಿಗಾಲ ಇನ್ನೂ ಹೋಗಿಲ್ಲ ಎನ್ನುವ ಎಚ್ಚರಿಕೆ ನೀಡುತ್ತಿದೆ.
![India Weather Updates: ಉತ್ತರಪ್ರದೇಶದಲ್ಲಿ ಮಂಜು, ಪಂಜಾಬ್ನಲ್ಲಿ ಮಳೆ ಸಾಧ್ಯತೆ, ಉತ್ತರ ಭಾರತದಲ್ಲಿ ತಾಪಮಾನ ಮತ್ತೆ ಕುಸಿಯುವ ನಿರೀಕ್ಷೆ](https://images.tv9kannada.com/wp-content/uploads/2023/02/Rain-7.jpg?w=1280)
ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ಸುಧಾರಿಸುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಚಳಿಗಾಲ ಇನ್ನೂ ಹೋಗಿಲ್ಲ ಎನ್ನುವ ಎಚ್ಚರಿಕೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಹಾಗೂ ಹಿಮಪಾತದಿಂದಾಗಿ ತಾಪಮಾನ ಕುಸಿಯಬಹುದು ಎಂದು ಹೇಳಿದೆ. ಹವಾಮಾನ ಇಲಾಖೆಯ ಪ್ರಕಾರ, ಪ್ರಸ್ತುತ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನವು 8-10 ಡಿಗ್ರಿಗಳ ನಡುವೆ ಇರಲಿದೆ.
ಜಮ್ಮು -ಕಾಶ್ಮೀರ, ಲಡಾಖ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಹಿಮಪಾತವಾಗಬಹುದು. ಹಿಮಾಚಲಪ್ರದೇಶ, ಅರುಣಾಚಲಪ್ರದೇಶ, ಪಂಜಾಬ್, ಚಂಡೀಗಢದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಉತ್ತರ ಭಾರತದ ತಾಪಮಾನದಲ್ಲಿ 2-3 ಡಿಗ್ರಿಗಳಷ್ಟು ಇಳಿಕೆಯಾಗಬಹುದು, ಆದರೆ ಮುಂದಿನ ಮೂರು ದಿನಗಳವರೆಗೆ ಮಧ್ಯ ಭಾರತದ ತಾಪಮಾನದಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ಮಧ್ಯಪ್ರದೇಶದ ಮಲಜ್ಖಂಡ್ನಲ್ಲಿ ಕಳೆದ 24 ಗಂಟೆಗಳಲ್ಲಿ ಕನಿಷ್ಠ ತಾಪಮಾನ 7.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಉತ್ತರ ಪ್ರದೇಶ, ಸಿಕ್ಕಿಂ, ಅಸ್ಸಾಂ, ತ್ರಿಪುರದಲ್ಲಿ ಮಂಜುಕವಿದ ವಾತಾವರಣವಿರಲಿದ್ದು, ಪಂಜಾಬ್ನಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ. ಒಟ್ಟಾರೆ ತಾಪಮಾನದಲ್ಲಿ ತುಂಬಾ ಇಳಿಕೆಯಾಗಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶ ಇರಲಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದಾದ್ಯಂತ ಒಣಹವೆ ಮುಂದುವರೆಯಲಿದೆ. ಬೀದರ್ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ