India Weather Updates: ಮುಂದಿನ 3 ದಿನಗಳ ಕಾಲ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ, ಕೆಲವು ಕಡೆ ಬಿಸಿಲ ಝಳವೂ ಹೆಚ್ಚಳ

ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ.

India Weather Updates: ಮುಂದಿನ 3 ದಿನಗಳ ಕಾಲ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ, ಕೆಲವು ಕಡೆ ಬಿಸಿಲ ಝಳವೂ ಹೆಚ್ಚಳ
ಮಳೆImage Credit source: Indian Express
Follow us
ನಯನಾ ರಾಜೀವ್
|

Updated on: Feb 26, 2023 | 7:07 AM

ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್​ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಹಾರಾಷ್ಟ್ರ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ತಾಪಮಾನವು 35-37 ಡಿಗ್ರಿ ಸೆಲ್ಸಿಯಸ್ ನಡುವೆ ಇದೆ. ಅಸ್ಸಾಂ, ಮೇಘಾಲಯ, ಸಿಕ್ಕಿಂ, ತಮಿಳುನಾಡು, ಪುದುಚೇರಿ, ಕಾರೈಕಲ್​ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಗುಜರಾತ್​ನಲ್ಲಿ ಮುಂದಿನ 2 ದಿನ ಹವಾಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ನಂತರ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಇನ್ನು ಮಹಾರಾಷ್ಟ್ರದಲ್ಲಿ ಮುಂದಿನ 3 ದಿನಗಳಲ್ಲಿ ಎರಡು ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಬಹುದು. ಫೆಬ್ರವರಿ 26-28ರ ನಡುವೆ ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ: Heat Wave: ವಿವಿಧ ರಾಜ್ಯಗಳಲ್ಲಿ ಶಾಖದ ಅಲೆಯ ಎಚ್ಚರಿಕೆ, ಗರಿಷ್ಠ ಉಷ್ಣಾಂಶ 3-5 ಡಿಗ್ರಿಗಳಷ್ಟು ಹೆಚ್ಚಳ ಸಾಧ್ಯತೆ

ಫೆಬ್ರವರಿ 28ರಿಂದ ಮಾರ್ಚ್​ 2ರವರೆಗೆ ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯಾಗಲಿದೆ. ಫೆಬ್ರವರಿ 28ರಂದು ಕಾಶ್ಮೀರ ಕಣಿವೆಯಲ್ಲಿ ಹಾಗೂ ಮಾರ್ಚ್​ 1 ರಂದು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರ್ನಾಟಕದ ಬಾಗಲಕೋಟೆಯಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು