India Weather Updates: ಫೆ.21 ರಿಂದ 23ರವರೆಗೆ ಈಶಾನ್ಯ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ

ಈಶಾನ್ಯ ರಾಜ್ಯಗಳಲ್ಲಿ ಫೆಬ್ರವರಿ 21 ರಿಂದ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ.

India Weather Updates: ಫೆ.21 ರಿಂದ 23ರವರೆಗೆ ಈಶಾನ್ಯ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ
ಮಳೆImage Credit source: Earth.com
Follow us
|

Updated on: Feb 21, 2023 | 7:49 AM

ಈಶಾನ್ಯ ರಾಜ್ಯಗಳಲ್ಲಿ ಫೆಬ್ರವರಿ 21 ರಿಂದ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ, ಜತೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರದಲ್ಲೂ ಸುಮಾರು ಐದು ದಿನಗಳ ಕಾಲ ಚದುರಿದ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲೂ ಇದೇ ವಾತಾವರಣ ಇರಲಿದೆ, ಅಸ್ಸಾಂ, ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ ಗುಜರಾತ್​ನ ಹಲವು ಭಾಗಗಳಲ್ಲಿ ಗರಿಷ್ಠ ತಾಮಾನ 36-38 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Weather Today: ಚಳಿಗೆ ಬೆಂಗಳೂರು ಗಡಗಡ; ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಶೀತ ಅಲೆ

ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ, ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ