AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ದೆಹಲಿಯಲ್ಲಿ ಭಾರಿ ಮಳೆ, ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲೂ ಮಳೆಯಾಗುವ ಸಾಧ್ಯತೆ

ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ದೆಹಲಿಯಲ್ಲಿ ಮಾರ್ಚ್​1 ರಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

India Weather Updates: ದೆಹಲಿಯಲ್ಲಿ ಭಾರಿ ಮಳೆ, ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲೂ ಮಳೆಯಾಗುವ ಸಾಧ್ಯತೆ
ಮಳೆImage Credit source: Britannica
ನಯನಾ ರಾಜೀವ್
|

Updated on: Mar 02, 2023 | 7:40 AM

Share

ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ದೆಹಲಿಯಲ್ಲಿ ಮಾರ್ಚ್​1 ರಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇನ್ನು, ಹಿಮಾಚಲಪ್ರದೇಶದಲ್ಲಿ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 120 ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಾರ್ಚ್​ 2 ಹಾಗೂ 4 ರಂದು ಬಯಲು ಪ್ರದೇಶ ಹೊರತುಪಡಿಸಿ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬುಧವಾರ ಗೊಂಡಾಲಾದಲ್ಲಿ 6 ಸೆಂ.ಮೀ, ಕಲ್ಪಾದಲ್ಲಿ 5.5 ಸೆಂ.ಮೀ, ಖದ್ರಾಲ, ಕೀಲಾಂಗ್ ಹಾಗೂ ಕುಕುಮ್ಸೇರಿಯಲ್ಲಿ 4 ಸೆಂ.ಮೀ, ಕೋಠಿಯಲ್ಲಿ 3 ಸೆಂ.ಮೀ ಹಾಗೂ ಉದಯಪುರದಲ್ಲಿ 2 ಸೆಂ.ಮೀ ಹಿಮಪಾತವಾಗಿದೆ.

ಸ್ಕೈಮೆಟ್ ವರದಿ ಪ್ರಕಾರ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿಗಳಷ್ಟು ಇಳಿಕೆಯಾಗಬಹುದು ಎಂದು ಹೇಳಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ, ಲಕ್ಷದ್ವೀಪ, ಅಸ್ಸಾಂ, ಅರುಣಾಚಲಪ್ರದೇಶ, ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ, ಅಷ್ಟೇ ಅಲ್ಲದೆ ಪಂಜಾಬ್​ನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: India Weather Updates: ಮಾರ್ಚ್​ ಮೊದಲ ವಾರದಲ್ಲಿ ಈ ರಾಜ್ಯಗಳಲ್ಲಿ 37 ಡಿಗ್ರಿ ಸೆಲ್ಸಿಯಸ್​ಗಿಂತಲೂ ಹೆಚ್ಚಲಿದೆ ಗರಿಷ್ಠ ತಾಪಮಾನ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಚಳಿಯ ವಾತಾವರಣ ಶುರುವಾಗಿದೆ. ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ