AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ದೆಹಲಿಯಲ್ಲಿ ಭಾರಿ ಮಳೆ, ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲೂ ಮಳೆಯಾಗುವ ಸಾಧ್ಯತೆ

ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ದೆಹಲಿಯಲ್ಲಿ ಮಾರ್ಚ್​1 ರಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

India Weather Updates: ದೆಹಲಿಯಲ್ಲಿ ಭಾರಿ ಮಳೆ, ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲೂ ಮಳೆಯಾಗುವ ಸಾಧ್ಯತೆ
ಮಳೆImage Credit source: Britannica
ನಯನಾ ರಾಜೀವ್
|

Updated on: Mar 02, 2023 | 7:40 AM

Share

ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ದೆಹಲಿಯಲ್ಲಿ ಮಾರ್ಚ್​1 ರಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇನ್ನು, ಹಿಮಾಚಲಪ್ರದೇಶದಲ್ಲಿ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 120 ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಾರ್ಚ್​ 2 ಹಾಗೂ 4 ರಂದು ಬಯಲು ಪ್ರದೇಶ ಹೊರತುಪಡಿಸಿ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬುಧವಾರ ಗೊಂಡಾಲಾದಲ್ಲಿ 6 ಸೆಂ.ಮೀ, ಕಲ್ಪಾದಲ್ಲಿ 5.5 ಸೆಂ.ಮೀ, ಖದ್ರಾಲ, ಕೀಲಾಂಗ್ ಹಾಗೂ ಕುಕುಮ್ಸೇರಿಯಲ್ಲಿ 4 ಸೆಂ.ಮೀ, ಕೋಠಿಯಲ್ಲಿ 3 ಸೆಂ.ಮೀ ಹಾಗೂ ಉದಯಪುರದಲ್ಲಿ 2 ಸೆಂ.ಮೀ ಹಿಮಪಾತವಾಗಿದೆ.

ಸ್ಕೈಮೆಟ್ ವರದಿ ಪ್ರಕಾರ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿಗಳಷ್ಟು ಇಳಿಕೆಯಾಗಬಹುದು ಎಂದು ಹೇಳಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ, ಲಕ್ಷದ್ವೀಪ, ಅಸ್ಸಾಂ, ಅರುಣಾಚಲಪ್ರದೇಶ, ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ, ಅಷ್ಟೇ ಅಲ್ಲದೆ ಪಂಜಾಬ್​ನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: India Weather Updates: ಮಾರ್ಚ್​ ಮೊದಲ ವಾರದಲ್ಲಿ ಈ ರಾಜ್ಯಗಳಲ್ಲಿ 37 ಡಿಗ್ರಿ ಸೆಲ್ಸಿಯಸ್​ಗಿಂತಲೂ ಹೆಚ್ಚಲಿದೆ ಗರಿಷ್ಠ ತಾಪಮಾನ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಚಳಿಯ ವಾತಾವರಣ ಶುರುವಾಗಿದೆ. ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್