AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ಮುಂದಿನ 6 ದಿನಗಳವರೆಗೆ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್​ ಎರಡನೇ ವಾರ ನಡೆಯುತ್ತಿದೆ, ಹವಾಮಾನವು ವೇಗವಾಗಿ ಬದಲಾಗುತ್ತಿದೆ, ಉಷ್ಣಗಾಳಿಯೂ ಹೆಚ್ಚುತ್ತಿದೆ.

India Weather Updates: ಮುಂದಿನ 6 ದಿನಗಳವರೆಗೆ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆImage Credit source: Healthline
ನಯನಾ ರಾಜೀವ್
|

Updated on: Mar 14, 2023 | 8:00 AM

Share

ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್​ ಎರಡನೇ ವಾರ ನಡೆಯುತ್ತಿದೆ, ಹವಾಮಾನವು ವೇಗವಾಗಿ ಬದಲಾಗುತ್ತಿದೆ, ಉಷ್ಣಗಾಳಿಯೂ ಹೆಚ್ಚುತ್ತಿದೆ. ಹಗಲಿನಲ್ಲಿ ಮನೆಯಲ್ಲೂ ಇರಲಾರದ ಪರಿಸ್ಥಿತಿ ಕೆಲವೆಡೆ ಇದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ

ಈ ನಡುವೆ ಕೆಲವು ರಾಜ್ಯಗಳಲ್ಲಿ, ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಮಾರ್ಚ್​ 14-16ರವರೆಗೆ ಗಿಲ್ಗಿಟ್, ಮುಜಾಫರಾಬಾದ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶ, ಉತ್ತರಾಖಂಡ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ದಕ್ಷಿಣ ಭಾರತ, ಪೂರ್ವ ಭಾರತ ಹಾಗೂ ಮಧ್ಯ ಭಾರತದಲ್ಲಿ ಮಾರ್ಚ್​ 15-17ರವರೆಗೆ ಮಳೆಯಾಗಲಿದೆ. ಅದರಂತೆ ದೇಶದ ವಿವಿಧೆಡೆ ಮುಂದಿನ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯಪ್ರದೇಶದಲ್ಲಿ ಇಂದು ಮಳೆಯಾಗಲಿದೆ, ಅರುಣಾಚಲಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಮಣಿಪುರದ ಕೆಲವು ಭಾಗಗಳಲ್ಲಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಇದೆಲ್ಲದರ ನಡುವೆ ಈಗಾಗಲೇ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶದ ಹಲವು ಪ್ರದೇಶಗಳಲ್ಲಿ ತೀವ್ರ ಬಿಸಿಲಿನ ಝಳ ಕಾಣಿಸಿಕೊಂಡಿದೆ. ಅನೇಕ ಪ್ರದೇಶಗಳಲ್ಲಿ, ಇಂದು ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು. MID ಪ್ರಕಾರ, ಪ್ರಸ್ತುತ ಹೆಚ್ಚಿನ ರಾಜ್ಯಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿಗಳಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ