AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ರ ಮಾರ್ಚ್ ವೇಳೆಗೆ ಭಾರತ ನಕ್ಸಲಿಸಂನಿಂದ ಮುಕ್ತ; ಕೇರಳದಲ್ಲಿ ಅಮಿತ್ ಶಾ

ಕೇರಳದಲ್ಲಿ ಆಡಳಿತಾರೂಢ ಎಲ್‌ಡಿಎಫ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ. ಬಿಜೆಪಿ ಇಲ್ಲದೆ 'ವಿಕಸಿತ ಕೇರಳ' ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಪುತ್ತರಿಕಂಡಂ ಮೈದಾನದಲ್ಲಿ ನಡೆದ ವಿಕಸಿತ್ ಕೇರಳಂ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ, ಕೇರಳದ ಅಭಿವೃದ್ಧಿಯು ಅಭಿವೃದ್ಧಿ ಹೊಂದಿದ ಭಾರತದ (ವಿಕಸಿತ್ ಭಾರತ) ದೃಷ್ಟಿಕೋನದ ಅವಿಭಾಜ್ಯ ಅಂಗವಾಗಿದೆ ಎಂದು ಒತ್ತಿ ಹೇಳಿದರು.

2026ರ ಮಾರ್ಚ್ ವೇಳೆಗೆ ಭಾರತ ನಕ್ಸಲಿಸಂನಿಂದ ಮುಕ್ತ; ಕೇರಳದಲ್ಲಿ ಅಮಿತ್ ಶಾ
Amit Shah
ಸುಷ್ಮಾ ಚಕ್ರೆ
|

Updated on: Jul 12, 2025 | 5:29 PM

Share

ತಿರುವನಂತಪುರಂ, ಜುಲೈ 12: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ನಡೆಸಿದ್ದಾರೆ. ಈ ಪಕ್ಷ ಕೇರಳದ ಅಭಿವೃದ್ಧಿಗಿಂತ ಕೇಡರ್ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಡರ್‌ಗಿಂತ ವಿಕಸಿತ ಕೇರಳ (ಅಭಿವೃದ್ಧಿ ಹೊಂದಿದ ಕೇರಳ) ಅನ್ನು ಆಯ್ಕೆ ಮಾಡಿತು. ಆದರೆ 2026ರ ಮಾರ್ಚ್ 31ರ ವೇಳೆಗೆ ಭಾರತ ನಕ್ಸಲಿಸಂ ಮುಕ್ತವಾಗಲಿದೆ ಎಂದು ಭರವಸೆ ನೀಡಿತು ಎಂದಿದ್ದಾರೆ.

“ಬಿಜೆಪಿ ಮತ್ತು ಸಿಪಿಐ(ಎಂ) ಎರಡೂ ಕೇಡರ್ ಆಧಾರಿತ ಪಕ್ಷಗಳಾಗಿವೆ. ಆದರೆ, ಎರಡರ ನಡುವೆ ಭಾರೀ ವ್ಯತ್ಯಾಸವಿದೆ. ಕೇರಳದಲ್ಲಿ ರಾಜ್ಯದ ಅಭಿವೃದ್ಧಿಗಿಂತ ಕೇಡರ್ ಕಲ್ಯಾಣ ಮಹತ್ವದ್ದಾಗಿದೆ. ಆದರೆ ಬಿಜೆಪಿಗೆ ಕೇಡರ್‌ಗಿಂತ ವಿಕಸಿತ ಕೇರಳ ಮುಖ್ಯ” ಎಂದು ಅವರು ತಿರುವನಂತಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ

ಕೇರಳದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ 3 ಪ್ರಮುಖ ದೃಷ್ಟಿಕೋನಗಳನ್ನು ಅಮಿತ್ ಶಾ ವಿವರಿಸಿದರು. ಗೃಹ ಸಚಿವ ಅಮಿತ್ ಶಾ, ಕೇರಳದ ಎಲ್‌ಡಿಎಫ್ ಸರ್ಕಾರ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅನ್ನು ಸಹ ಟೀಕಿಸಿದ್ದಾರೆ. “ಎಲ್‌ಡಿಎಫ್ ಮತ್ತು ಯುಡಿಎಫ್​​ಗಳ ಸಾಧನೆ ಭ್ರಷ್ಟ ಸರ್ಕಾರವಾಗಿದೆ. ಎಲ್‌ಡಿಎಫ್ ಸ್ಫೋಟಕ ಹಗರಣ, ಸಹಕಾರಿ ಬ್ಯಾಂಕ್ ಹಗರಣ, ಎಐ ಕ್ಯಾಮೆರಾ ಹಗರಣ, ಲೈಫ್ ಮಿಷನ್ ಹಗರಣ, ಪಿಪಿಇ ಕಿಟ್ ಹಗರಣ ಮತ್ತು ಭಾರತದ ಅತಿದೊಡ್ಡ ಹಗರಣವಾದ ರಾಜ್ಯ ಪ್ರಾಯೋಜಿತ ಚಿನ್ನದ ಕಳ್ಳಸಾಗಣೆ ಹಗರಣವನ್ನು ಮಾಡಿದೆ” ಎಂದಿದ್ದಾರೆ.

ಇದನ್ನೂ ಓದಿ: ರಾಜಕೀಯ ಬಿಟ್ಟು ವೇದ, ಉಪನಿಷತ್ ಅಧ್ಯಯನ ಮಾಡುವೆ; ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಅಮಿತ್ ಶಾ

“ಕಾಂಗ್ರೆಸ್ ಶೀಘ್ರದಲ್ಲೇ ಮುಚ್ಚಲಿರುವ ಪಕ್ಷ. ಬಿಜೆಪಿ ಇಲ್ಲದೆ ವಿಕಸಿತ ಕೇರಳ ಸಾಧ್ಯವಿಲ್ಲ ಎಂದು ನಾನು ಕೇರಳದ ಜನರಿಗೆ ಹೇಳಲು ಬಂದಿದ್ದೇನೆ” ಎಂದು ಅವರು ಹೇಳಿದ್ದಾರೆ. ಎಲ್‌ಡಿಎಫ್ ಅಥವಾ ಯುಡಿಎಫ್ ಎರಡೂ ರಾಜ್ಯದಲ್ಲಿ ನಿಜವಾದ ಬದಲಾವಣೆಯನ್ನು ತರಲು ಸಾಧ್ಯವಿಲ್ಲದ ಕಾರಣ ಕೇರಳ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಮತ ಹಾಕಬೇಕು ಎಂದು ಅಮಿತ್ ಶಾ ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ