AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕತೆ ಅತ್ಯದ್ಭುತವಾಗಿ ಸಾಗಲಿದೆ.. 5 ಟ್ರಿಲಿಯನ್ ಡಾಲರ್​ ಎಕಾನಮಿ ಸಾಧಿಸುವುದು ಖಚಿತ -ಮುಖೇಶ್ ಅಂಬಾನಿ

2021ರ ಅಂತ್ಯದ ಒಳಗೆ ಭಾರತದಲ್ಲಿ 5ಜಿ ಆರಂಭವಾಗಲಿದೆ. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಆಗುತ್ತಿದೆ. ಭಾರತ ಪ್ರಗತಿ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೊನಾ ಸಹ ಭಾರತವನ್ನು ತಡೆದು ನಿಲ್ಲಿಸಲಾರದು ಎಂದು ಮುಕೇಶ್ ಅಂಬಾನಿ ಹೇಳಿದ್ದಾರೆ.

ಭಾರತದ ಆರ್ಥಿಕತೆ ಅತ್ಯದ್ಭುತವಾಗಿ ಸಾಗಲಿದೆ.. 5 ಟ್ರಿಲಿಯನ್ ಡಾಲರ್​ ಎಕಾನಮಿ ಸಾಧಿಸುವುದು ಖಚಿತ -ಮುಖೇಶ್ ಅಂಬಾನಿ
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
Follow us
Skanda
|

Updated on:Dec 10, 2020 | 2:37 PM

ದೆಹಲಿ: ಭಾರತದ ಆರ್ಥಿಕತೆ ಅತಿ ಶೀಘ್ರ ಪುಟಿದೇಳಲಿದೆ. ಯಾರೂ ಊಹಿಸದ ರೀತಿಯಲ್ಲಿ ಆರ್ಥಿಕ ಪ್ರಗತಿಗೆ ಭಾರತ ಸಾಕ್ಷಿಯಾಗಲಿದೆ. ಆರ್ಥಿಕತೆ ನೆಲಕಚ್ಚಲಿದೆ ಎಂಬ ಸಿನಿಕತನದ ಹೇಳಿಕೆಗಳು ಸುಳ್ಳಾಗಲಿದೆ ಎಂದು ಭಾರತದ ಶ್ರೀಮಂತ ಉದ್ಯಮಿ, ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಮೊಬೈಲ್​ ಕಾಂಗ್ರೆಸ್ (IMC) 2020 ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಾನಿ, ಭಾರತದಲ್ಲಿ ಆದಾಯ, ಉದ್ಯೋಗ, ಜೀವನ ಸ್ಥಿತಿ ಎಲ್ಲವೂ ಉನ್ನತ ಮಟ್ಟಕ್ಕೆ ಏರಲಿದೆ. ಸಮಾನತೆಯ ಭಾರತಕ್ಕೆ ನಾವು ಸಾಕ್ಷಿಯಾಗಲಿದ್ದು, 5 ಲಕ್ಷ ಡಾಲರ್ ಆರ್ಥಿಕತೆಯ ಗುರಿಯನ್ನು ಭಾರತ ಅತ್ಯಂತ ವೇಗವಾಗಿ ತಲುಪಲಿದೆ ಎಂದು ಹೇಳಿದ್ದಾರೆ.

ಡಿಜಿಟಲ್​ ಕ್ರಾಂತಿ ಭಾರತೀಯರಲ್ಲಿ ಹೊಸ ಬದಲಾವಣೆಯನ್ನು ತಂದಿದೆ. ಡಿಜಿಟಲ್ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ. ವಿಶ್ವದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಡಿಜಿಟಲ್ ಕ್ಷೇತ್ರದಲ್ಲಿ ಸಶಕ್ತವಾಗಿದೆ ಮತ್ತು ವೇಗವಾಗಿ ಸಾಗುತ್ತಿದೆ. ಪ್ರತಿಯೊಬ್ಬ ಭಾರತೀಯನೂ ಡಿಜಿಟಲ್​ ಲೋಕಕ್ಕೆ ತೆರೆದುಕೊಳ್ಳುವ ಮೂಲಕ ದೇಶದ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

2021ರ ಅಂತ್ಯದ ಒಳಗೆ ಭಾರತದಲ್ಲಿ 5ಜಿ ಆರಂಭವಾಗಲಿದೆ. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಆಗುತ್ತಿದೆ. ಭಾರತ ಪ್ರಗತಿ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೊನಾ ಸಹ ಭಾರತವನ್ನು ತಡೆದು ನಿಲ್ಲಿಸಲಾರದು ಎಂದು ಹೇಳುವ ಮೂಲಕ ಭಾರತದ ಆರ್ಥಿಕತೆ ಪಾತಾಳಕ್ಕೆ ತಲುಪಿದೆ ಎನ್ನುತ್ತಿರುವವರನ್ನು ಪರೋಕ್ಷವಾಗಿ ಕಾಲೆಳೆದಿದ್ದಾರೆ.

ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ

Published On - 2:22 pm, Thu, 10 December 20

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ