AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕತೆ ಅತ್ಯದ್ಭುತವಾಗಿ ಸಾಗಲಿದೆ.. 5 ಟ್ರಿಲಿಯನ್ ಡಾಲರ್​ ಎಕಾನಮಿ ಸಾಧಿಸುವುದು ಖಚಿತ -ಮುಖೇಶ್ ಅಂಬಾನಿ

2021ರ ಅಂತ್ಯದ ಒಳಗೆ ಭಾರತದಲ್ಲಿ 5ಜಿ ಆರಂಭವಾಗಲಿದೆ. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಆಗುತ್ತಿದೆ. ಭಾರತ ಪ್ರಗತಿ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೊನಾ ಸಹ ಭಾರತವನ್ನು ತಡೆದು ನಿಲ್ಲಿಸಲಾರದು ಎಂದು ಮುಕೇಶ್ ಅಂಬಾನಿ ಹೇಳಿದ್ದಾರೆ.

ಭಾರತದ ಆರ್ಥಿಕತೆ ಅತ್ಯದ್ಭುತವಾಗಿ ಸಾಗಲಿದೆ.. 5 ಟ್ರಿಲಿಯನ್ ಡಾಲರ್​ ಎಕಾನಮಿ ಸಾಧಿಸುವುದು ಖಚಿತ -ಮುಖೇಶ್ ಅಂಬಾನಿ
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
Skanda
|

Updated on:Dec 10, 2020 | 2:37 PM

Share

ದೆಹಲಿ: ಭಾರತದ ಆರ್ಥಿಕತೆ ಅತಿ ಶೀಘ್ರ ಪುಟಿದೇಳಲಿದೆ. ಯಾರೂ ಊಹಿಸದ ರೀತಿಯಲ್ಲಿ ಆರ್ಥಿಕ ಪ್ರಗತಿಗೆ ಭಾರತ ಸಾಕ್ಷಿಯಾಗಲಿದೆ. ಆರ್ಥಿಕತೆ ನೆಲಕಚ್ಚಲಿದೆ ಎಂಬ ಸಿನಿಕತನದ ಹೇಳಿಕೆಗಳು ಸುಳ್ಳಾಗಲಿದೆ ಎಂದು ಭಾರತದ ಶ್ರೀಮಂತ ಉದ್ಯಮಿ, ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಮೊಬೈಲ್​ ಕಾಂಗ್ರೆಸ್ (IMC) 2020 ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಾನಿ, ಭಾರತದಲ್ಲಿ ಆದಾಯ, ಉದ್ಯೋಗ, ಜೀವನ ಸ್ಥಿತಿ ಎಲ್ಲವೂ ಉನ್ನತ ಮಟ್ಟಕ್ಕೆ ಏರಲಿದೆ. ಸಮಾನತೆಯ ಭಾರತಕ್ಕೆ ನಾವು ಸಾಕ್ಷಿಯಾಗಲಿದ್ದು, 5 ಲಕ್ಷ ಡಾಲರ್ ಆರ್ಥಿಕತೆಯ ಗುರಿಯನ್ನು ಭಾರತ ಅತ್ಯಂತ ವೇಗವಾಗಿ ತಲುಪಲಿದೆ ಎಂದು ಹೇಳಿದ್ದಾರೆ.

ಡಿಜಿಟಲ್​ ಕ್ರಾಂತಿ ಭಾರತೀಯರಲ್ಲಿ ಹೊಸ ಬದಲಾವಣೆಯನ್ನು ತಂದಿದೆ. ಡಿಜಿಟಲ್ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ. ವಿಶ್ವದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಡಿಜಿಟಲ್ ಕ್ಷೇತ್ರದಲ್ಲಿ ಸಶಕ್ತವಾಗಿದೆ ಮತ್ತು ವೇಗವಾಗಿ ಸಾಗುತ್ತಿದೆ. ಪ್ರತಿಯೊಬ್ಬ ಭಾರತೀಯನೂ ಡಿಜಿಟಲ್​ ಲೋಕಕ್ಕೆ ತೆರೆದುಕೊಳ್ಳುವ ಮೂಲಕ ದೇಶದ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

2021ರ ಅಂತ್ಯದ ಒಳಗೆ ಭಾರತದಲ್ಲಿ 5ಜಿ ಆರಂಭವಾಗಲಿದೆ. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಆಗುತ್ತಿದೆ. ಭಾರತ ಪ್ರಗತಿ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೊನಾ ಸಹ ಭಾರತವನ್ನು ತಡೆದು ನಿಲ್ಲಿಸಲಾರದು ಎಂದು ಹೇಳುವ ಮೂಲಕ ಭಾರತದ ಆರ್ಥಿಕತೆ ಪಾತಾಳಕ್ಕೆ ತಲುಪಿದೆ ಎನ್ನುತ್ತಿರುವವರನ್ನು ಪರೋಕ್ಷವಾಗಿ ಕಾಲೆಳೆದಿದ್ದಾರೆ.

ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ

Published On - 2:22 pm, Thu, 10 December 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್