Sign In

By signing in or creating an account, you agree with Associated Broadcasting Company's Terms & Conditions and Privacy Policy.

2027ರ ಹೊತ್ತಿಗೆ ಭಾರತ ಸಂಪೂರ್ಣ ಹಿಂದೂ ರಾಷ್ಟ್ರವಾಗಲಿದೆ: ಹರಿಭೂಷಣ್ ಠಾಕೂರ್

2027ರ ಹೊತ್ತಿಗೆ ಭಾರತವು ಸಂಪೂರ್ಣ ಹಿಂದೂ ರಾಷ್ಟ್ರವಾಗಲಿದೆ ಎಂದು ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಹೇಳಿದ್ದಾರೆ. ಮಧ್ಯಪ್ರದೇಶದ ಬಾಗೇಶ್ವರ ಧಾಮದ ಮುಖ್ಯಸ್ಥ ಸ್ವಯಂಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ ಬಳಿಕ ಈ ಹೇಳಿಕೆ ನೀಡಿದ್ದಾರೆ.

2027ರ ಹೊತ್ತಿಗೆ ಭಾರತ ಸಂಪೂರ್ಣ ಹಿಂದೂ ರಾಷ್ಟ್ರವಾಗಲಿದೆ: ಹರಿಭೂಷಣ್ ಠಾಕೂರ್
ಹರಿಭೂಷಣ್ ಠಾಕೂರ್Image Credit source: Jansatta
Follow us
ನಯನಾ ರಾಜೀವ್
|

Updated on: May 19, 2023 | 8:40 AM

2027ರ ಹೊತ್ತಿಗೆ ಭಾರತವು ಸಂಪೂರ್ಣ ಹಿಂದೂ ರಾಷ್ಟ್ರವಾಗಲಿದೆ ಎಂದು ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಹೇಳಿದ್ದಾರೆ. ಮಧ್ಯಪ್ರದೇಶದ ಬಾಗೇಶ್ವರ ಧಾಮದ ಮುಖ್ಯಸ್ಥ ಸ್ವಯಂಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ ಬಳಿಕ ಈ ಹೇಳಿಕೆ ನೀಡಿದ್ದಾರೆ. ಭಾರತವು ಹಿಂದೂ ರಾಷ್ಟ್ರ ದತ್ತ ಸಾಗುತ್ತಿದೆ ಎಂದು ಅರ್ಥಮಾಡಿಕೊಳ್ಳುವುದು ಕಷ್ಟವೇನಲ್ಲ. ದೇಶದ ಸಂತರು 2027 ರ ವೇಳೆಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತಾರೆ ಎಂದು ಠಾಕೂರ್ ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ಬಿಜೆಪಿ ನಾಯಕ, ಜೆಡಿ-ಯು ನಾಯಕ ಶಾಸ್ತ್ರಿಯವರ ಅಪಾರ ಜನಪ್ರಿಯತೆಯಿಂದಾಗಿ ಭಯಗೊಂಡಿದ್ದಾರೆ ಎಂದು ಹೇಳಿದರು. ಆದ್ದರಿಂದ ಅವರ ಬೆಂಬಲಿಗರು ಶಾಸ್ತ್ರಿ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದಾರೆ. ನಿತೀಶ್ ಕುಮಾರ್ ಶಾಸ್ತ್ರಿ ಅವರ ಹೇಳಿಕೆ ಸೂಕ್ತವಲ್ಲ.

Mangaluru: ಹಿಂದೂ ರಾಷ್ಟ್ರ ಅಭಿಯಾನದ ವಿರುದ್ಧ ಕ್ರಮಕ್ಕೆ ಎಸ್​​ಡಿಪಿಐ ಆಗ್ರಹ

ಅವರ ವಿರುದ್ಧ ಹೇಳಿಕೆಗಳನ್ನು ನೀಡುವಂತೆ ಅವರು ತಮ್ಮ ನಾಯಕರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಎಲ್ಲಾ ಪಿತೂರಿಗಳ ಹೊರತಾಗಿಯೂ, ಶಾಸ್ತ್ರಿ ಯಾರಿಗೂ ಹೆದರುವುದಿಲ್ಲ ಎಂದು ಠಾಕೂರ್ ಹೇಳಿದರು.

ಮೇ 14 ರಂದು ಜೆಡಿ-ಯು ನಾಯಕ ಲಾಲನ್ ಸಿಂಗ್ ಆಯೋಜಿಸಿದ್ದ ಪಾರ್ಟಿಯಲ್ಲಿ ಮದ್ಯ ಸೇವಿಸಿದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಬಿಹಾರ ಘಟಕದ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಅವರಿಗೆ ಕಳುಹಿಸಲಾದ ಲೀಗಲ್ ನೋಟಿಸ್‌ಗೆ ಪ್ರತಿಕ್ರಿಯಿಸಿದ ಠಾಕೂರ್, ಘಟನೆಯ ಬಗ್ಗೆ ಜಿಲ್ಲಾಡಳಿತ ತನಿಖೆ ನಡೆಸಬೇಕು. ಜೆಡಿಯು ನಾಯಕರು ಮದ್ಯ ಸೇವಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಹಚ್ಚಲು ಪರೀಕ್ಷೆ ನಡೆಸಬೇಕು, ಬಿಜೆಪಿ ಯಾವುದೇ ಎಫ್‌ಐಆರ್‌ಗೆ ಹೆದರುವುದಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ