AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit: ಇಂದು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು; ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಭಾಗಿ

ಶಾಂಘೈ ಸಹಕಾರ ಸಂಘಟನೆ ಸ್ಥಾಪನೆಗೊಂಡು 20 ವರ್ಷ ಕಳೆದಿದೆ. ಈ ಬಾರಿ 20ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಈ ಶೃಂಗಸಭೆ ಇನ್ನಷ್ಟು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

SCO Summit: ಇಂದು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು; ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಭಾಗಿ
ಪ್ರಧಾನಿ ಮೋದಿ ಮತ್ತು ಎಸ್​.ಜೈಶಂಕರ್​
TV9 Web
| Edited By: |

Updated on:Sep 17, 2021 | 10:56 AM

Share

ಇಂದು ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) 21ನೇ ಶೃಂಗಸಭೆ  (SCO Summit)ಇಂದು ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯಲಿದೆ. ಇದರಲ್ಲಿ ಭಾರತ ಪಾಲ್ಗೊಳ್ಳಲಿದ್ದು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್​ ಈಗಾಗಲೇ ದುಶಾಂಬೆಯಲ್ಲಿ ಉಪಸ್ಥಿತರಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ (PM Modi)ಯವರು  ಭಾರತದ ನಿಯೋಗದ ನೇತೃತ್ವದ ವಹಿಸಿದ್ದು, ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಷಣ ಮಾಡಲಿದ್ದಾರೆ. ಭಾರತ  ಶಾಂಘೈ ಸಹಕಾರ ಸಂಘಟನೆಯ ಪೂರ್ಣ ಪ್ರಮಾಣದ ಸದಸ್ಯತ್ವ ವಹಿಸಿಕೊಂಡ ಬಳಿಕ ಭಾಗವಹಿಸುತ್ತಿರುವ ನಾಲ್ಕನೇ ಶೃಂಗಸಭೆ ಇದಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಶುರುವಾಗಿದ್ದು, ಅಲ್ಲಿನ ಸನ್ನಿವೇಶವೇ ಇಂದಿನ ಸಭೆಯಲ್ಲಿ ಚರ್ಚೆಯಾಗುವ ಮಹತ್ವದ ವಿಷಯವಾಗಿದೆ ಎನ್ನಲಾಗಿದೆ. 

ಈ ಎಸ್​ಸಿಒ ಶೃಂಗಸಭೆಯ ಹೊರತಾಗಿ ಭಾರತದ ವಿದೇಶಾಂಗ ಸಚಿವ ಜೈಶಂಕರ್​ ಅವರು ಇರಾನ್​, ಅರ್ಮೇನಿಯಾ, ಉಜಬೇಕಿಸ್ತಾನ್​​ ದೇಶಗಳ ವಿದೇಶಾಂಗ ವ್ಯವಹಾರಗಳ ಸಚಿವರನ್ನು ಇಂದು ಭೇಟಿಯಾಗಲಿದ್ದಾರೆ. ತಮ್ಮ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ವೃದ್ಧಿ ಮತ್ತು ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆಯೂ ಚರ್ಚಿಸಲಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

ಶಾಂಘೈ ಸಹಕಾರ ಸಂಘಟನೆಗೆ 20 ವರ್ಷ ಇನ್ನು ಶಾಂಘೈ ಸಹಕಾರ ಸಂಘಟನೆ ಸ್ಥಾಪನೆಗೊಂಡು 20 ವರ್ಷ ಕಳೆದಿದೆ. ಈ ಬಾರಿ 20ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಈ ಶೃಂಗಸಭೆ ಇನ್ನಷ್ಟು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕಳೆದ ಎರಡು ದಶಕಗಳಲ್ಲಿ ಈ ಸಂಸ್ಥೆ ನಿರ್ವಹಿಸಿದ ಕಾರ್ಯಚಟುವಟಿಕೆಗಳ ಬಗ್ಗೆ ಶೃಂಗಸಭೆಯಲ್ಲಿ ಚರ್ಚೆ ನಡೆಯಲಿದೆ. ಹಾಗೇ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ 71ನೇ ಜನ್ಮದಿನವಾಗಿದ್ದು, ಇದೇ ದಿನ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದು ಇನ್ನೊಂದು ವಿಶೇಷ ಸಂಗತಿ.

ಇದನ್ನೂ ಓದಿ: ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

Happy Birthday Narendra Modi: ಪ್ರಧಾನಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ ದೇವೇಗೌಡರು-ಹೆಚ್​ಡಿ ಕುಮಾರಸ್ವಾಮಿ

Published On - 9:42 am, Fri, 17 September 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ