ಯಾವುದೇ ದೇಶದ ಅತಿಕ್ರಮಣವನ್ನು ಭಾರತ ಸಹಿಸುವುದಿಲ್ಲ, ತಕ್ಕ ಉತ್ತರ ನೀಡಲು ನಮ್ಮ ಸೇನೆ ಸಮರ್ಥವಾಗಿದೆ: ರಾಜನಾಥ ಸಿಂಗ್

ಚೀನಾಗೆ ನೀಡಿರುವ ಒಂದು ಸ್ಪಷ್ಟ ಸಂದೇಶದಲ್ಲಿ ರಕ್ಷಣಾ ಸಚಿವರು, ‘ಗಲ್ವಾನ್ ಪರಾಕ್ರಮಶಾಲಿಗಳು’ ನೀಡಿದ ಬಲಿದಾನವನ್ನು ಬಾರತ ಯಾವತ್ತೂ ಮರೆಯವುದಿಲ್ಲ ಎಂದು ಹೇಳಿ ಪ್ರತಿಯೊಂದು ಸವಾಲಿಗೆ ತಕ್ಕ ಉತ್ತರ ನೀಡಲು ಭಾರತದ ಸೇನೆ ಸಮರ್ಥವಾಗಿದೆ ಎಂದರು.

ಯಾವುದೇ ದೇಶದ ಅತಿಕ್ರಮಣವನ್ನು ಭಾರತ ಸಹಿಸುವುದಿಲ್ಲ, ತಕ್ಕ ಉತ್ತರ ನೀಡಲು ನಮ್ಮ ಸೇನೆ ಸಮರ್ಥವಾಗಿದೆ: ರಾಜನಾಥ ಸಿಂಗ್
ಲಡಾಖ್​ನಲ್ಲಿ ರಾಜನಾಥ ಸಿಂಗ್
Follow us
|

Updated on: Jun 28, 2021 | 4:35 PM

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಪೂರ್ವ ಸೆಕ್ಟರ್​ನ ಹತ್ತಿರದ ವಿವಾದಿತ ಪ್ರದೇಶಗಳಲ್ಲಿ ಎಲ್​ಎಸಿಗೆ ಸಂಬಂಧಿಸಿದಂತೆ ಎರಡು ರಾಷ್ಟ್ರಗಳ ನಡುವೆ ಇರುವ ಆತಂಕದ ಹೊರತಾಗಿಯೂ ಅಲ್ಲಿ ಸಂಪೂರ್ಣ ಶಾಂತಿಯುತ ಪರಿಸ್ಥಿತಿ ನೆಲೆಗೊಳ್ಳುವ ಪ್ರಯತ್ನದ ಮೇರೆಗೆ ಮೂರು ದಿನಗಳ ಲಡಾಖ್ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಹನಾಥ ಸಿಂಗ್ ಅವರು ಸೋಮವಾರದಂದು ಅಲ್ಲಿ ನಿಯುಕ್ತಿಗೊಂಡಿರುವ ಭಾರತೀಯ ಸೈನಿಕರೊಂದಿಗೆ ಬಲವಾದ ಪ್ರಾರ್ಥನೆಯಲ್ಲಿ ತೊಡಗಿ ಅವರ ಸ್ಥೈರ್ಯ ಹೆಚ್ಚಿಸಿದರು. ಎಎನ್​ಐ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿರುವ ವಿಡಿಯೋ ಒಂದರಲ್ಲಿ ರಕ್ಷಣಾ ಸಚಿವರು, ಸೈನಿಕರೊಂದಿಗೆ ಕೈಯನ್ನು ಗಾಳಿಯಲ್ಲಿ ಗುದ್ದುತ್ತಾ, ಜೋರು ಧ್ವನಿಯಲ್ಲಿ, ‘ವಾಹೆಗುರು ಜೀ ಕಾ ಖಾಲ್ಸಾ, ವಾಹೆಗುರು ಜೀ ಕಿ ಫತೇ (ಸಿಕ್ಖರು ದೇವರಿಗೆ ಸೇರಿದವರು, ದೇವರು ಜಯಶಾಲಿಯಾಗಿದ್ದಾನೆ), ಎಂದು ಪಠಿಸುತ್ತಿರುವುದನ್ನು ನೋಡಬಹುದಾಗಿದೆ.

ಇದೇ ವೇಳೆ, ಚೀನಾಗೆ ನೀಡಿರುವ ಒಂದು ಸ್ಪಷ್ಟ ಸಂದೇಶದಲ್ಲಿ ಸಚಿವರು, ‘ಗಲ್ವಾನ್ ಪರಾಕ್ರಮಶಾಲಿಗಳು’ ನೀಡಿದ ಬಲಿದಾನವನ್ನು ಬಾರತ ಯಾವತ್ತೂ ಮರೆಯವುದಿಲ್ಲ ಎಂದು ಹೇಳಿ ಪ್ರತಿಯೊಂದು ಸವಾಲಿಗೆ ತಕ್ಕ ಉತ್ತರ ನೀಡಲು ಭಾರತದ ಸೇನೆ ಸಮರ್ಥವಾಗಿದೆ ಎಂದರು.

ಕಳೆದ ವರ್ಷ ಜೂನ್​ 15ರಂದು ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಾಗ ಭಾರತದ 20 ಸೈನಿಕರು ದೇಶದ ಗಡಿ ರಕ್ಷಿಸುವಾಗ ವೀರಮರಣವನ್ನಿಪ್ಪಿದ್ದರು, ಸದರಿ ಕಾದಾಟವು ಎರಡು ರಾಷ್ಟ್ರಗಳ ಮಿಲಿಟರಿ ಪಡೆಗಳ ಮಧ್ಯೆ ದಶಕಳಲ್ಲೇ ನಡೆದ ಅತ್ಯಂತ ಗಂಭೀರ ಸ್ವರೂಪದ ತಿಕ್ಕಾಟವಾಗಿದೆ.

‘ದೇಶದ ರಕ್ಷಣೆಗಾಗಿ ಭಾರತದ ಸೈನಿಕರು ತಮ್ಮ ಪ್ರಾಣಗಳನ್ನು ಆಹುತಿ ನೀಡಿದ್ದನ್ನು ಭಾರತ ಯಾವತ್ತೂ ಮರೆಯುವುದಿಲ್ಲ,’ ಎಂದು ರಕ್ಷಣಾ ಸಚಿವರು ಹೇಳಿದರು.

ತಮ್ಮ ಪ್ರವಾಸದ ಎರಡನೇ ದಿನ ನಡೆದ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಸಚಿವರು, ಎರಡು ರಾಷ್ಟ್ರಗಳ ನಡುವೆ ಸೌಹಾರ್ದಯುತ ಸಂಬಂಧ ಏರ್ಪಡುವುದನ್ನು ಸಾಧ್ಯವಾಗಿಸಲು, ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಹೇಳಿ, ಹಾಗಂತ ಯಾವುದೇ ದೇಶ ತನ್ನ ಭಾರತದ ತಂಟೆಗೆ ಬಂದು ಬೆದರಿಸುವ ಪ್ರಯತ್ನ ಮಾಡಿದರೆ ಅದನ್ನು ಸಹಿಸಿಕೊಳ್ಳಲಾಗದು ಎಂದರು.

‘ಭಾರತ ಶಾಂತಿಯನ್ನು ಬಯಸುತ್ತದೆ. ಗಡಿ ಪ್ರದೇಶಗಳಲ್ಲಿ ಸದಾ ಶಾಂತಿ ನೆಲೆಗೊಂಡಿದ್ದರೆ, ಗಡಿ ಪ್ರದೇಶದ ಆಚೆ-ಈಚೆ ಇರುವ ದೇಶಗಳ ನಡುವೆ ಸೌಹಾರ್ದಯುತ ಮತ್ತು ಶಾಂತಿಯುತ ಪರಿಸ್ಥಿತಿ ನಿರ್ಮಾಣಗೊಳ್ಳುತ್ತದೆ. ನಾವು ಶಾಂತಿಪ್ರಿಯರು ಅಂದಾಕ್ಷಣ ಬೇರೆ ದೇಶಗಳ ಅತಿಕ್ರಮಣ ಸಹಿಸುತ್ತೇವೆ ಎಂಬ ಅರ್ಥವಲ್ಲ. ಯಾವುದೇ ದೇಶ ನಮ್ಮನ್ನು ಹೆದರಿಸುವ ಇಲ್ಲವೇ ವಿನಾಕಾರಣ ತಂಟೆಗೆ ಬರುವ ಪ್ರಯತ್ನ ಮಾಡಿದರೆ ನಾವು ಸರ್ವಥಾ ಸುಮ್ಮನಿರುವುದಿಲ್ಲ. ತಕ್ಕ ಉತ್ತರ ನೀಡಲು ನಮ್ಮ ಸೇನೆ ಸದಾ ಸನ್ನದ್ಧವಾಗಿರುತ್ತದೆ,’ ಎಂದು ರಕ್ಷಣಾ ಸಚಿವ ಚೀನಾ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ ಸ್ಪಷ್ಟ ಎಚ್ಚರಿಕೆ ರವಾನಿಸಿದರು.

ಲಡಾಖ್​ನಲ್ಲಿ ಗಡಿ ರಸ್ತೆಗಳ ಸಂಸ್ಥೆ (ಬಾರ್ಡರ್ ರೋಡ್ಸ್ ಆರ್ಗನೈಸೇಷನ್) ಜಾರಿಗೊಳಿಸಿದ 63 ಇನ್ಫ್ರಾಸ್ಟ್ರಕ್ಚರ್ ಯೋಜನೆಗಳನ್ನು ರಾಜನಾಥ ಸಿಂಗ ಅವರು ಸೋಮವಾರ ಉದ್ಘಾಟಿಸಿದರು.

ಇದನ್ನೂ ಓದಿ: ಅಸ್ಸಾಂನಲ್ಲಿ ಭಯೋತ್ಪಾದನೆ, ಒಳನುಸುಳುವಿಕೆ ಕಡಿಮೆಯಾಗಿದೆ; ರಾಜ್ಯ ಪ್ರಗತಿಯ ಹಾದಿಯಲ್ಲಿದೆ: ರಾಜ್​​ನಾಥ್ ಸಿಂಗ್

ಇದನ್ನೂ ಓದಿ: Galwan Valley Clash: ಚೀನಾ ಸೈನಿಕರ ಕ್ರೌರ್ಯಕ್ಕೆ ಸಾಕ್ಷಿಯಾದ ಗಾಲ್ವಾನ್​ ಸಂಘರ್ಷಕ್ಕೆ ಒಂದು ವರ್ಷ; ಎಲ್​ಎಸಿಯಲ್ಲಿ ಇಂದಿಗೂ ಹೈ ಅಲರ್ಟ್​

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ